Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...