Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...