Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...