Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...