Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...