Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...