Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...