Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...