Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...