ಮಾಲೆಗಾಂವ್ ಭಯೋತ್ಪಾದನಾ ಸ್ಪೋಟದ ಪ್ರಮುಖ ಆರೋಪಿ, ಸಂಸದೆ ಪ್ರಜ್ಞಾ ಠಾಕೂರ್ ಅವರು ಬ್ಯಾಸ್ಕೆಟ್ಬಾಲ್ ಆಡುವ ವಿಡಿಯೊವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಮತ್ತೆ ಮದುವೆ ಕಾರ್ಯಕ್ರಮವೊಂದರಲ್ಲಿ ಅವರು ಡ್ಯಾನ್ಸ್ ಮಾಡುವ ವಿಡಿಯೊವೊಂದು ವೈರಲ್ ಆಗಿದೆ. ಮಾಲೆಗಾಂವ್ ಸ್ಪೋಟ ಪ್ರಕರಣದಲ್ಲಿ ಅವರು, ಅನಾರೋಗ್ಯದ ಕಾರಣ ನೀಡಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ರಿಯಾಯಿತಿ ನೀಡುವಂತೆ ಕೇಳಿಕೊಂಡಿದ್ದರು. ಇದೀಗ ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಇತ್ತೀಚಿಚೆಗೆ ವೈರಲ್ ಆದ ವಿಡಿಯೊದಲ್ಲಿ ಅವರು ಮದುವೆ ಸಂಭ್ರಮದಲ್ಲಿ ಭಾಗಹಿಸಿದ್ದು, ಅಲ್ಲಿ ಅವರು ಡ್ಯಾನ್ಸ್ ಮಾಡಿದ್ದು ಮಾತ್ರವಲ್ಲದೆ, ಇತರರನ್ನೂ ಸಂಭ್ರಮದಲ್ಲಿ ಸೇರಲು ಕೇಳಿಕೊಳ್ಳುತ್ತಾರೆ. ಸಂಸದೆ ತಮ್ಮ ಮದುವೆಯಲ್ಲಿ ಭಾಗವಹಿಸಿದ್ದನ್ನು ಸ್ವತಃ ಮದುಮಗಳ ತಂದೆ ಖುಷಿ ವ್ಯಕ್ತಪಡಿಸಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದರು. ಈ ವಿಡಿಯೊ ಕುರಿತು ಕಾಂಗ್ರೆಸ್ ನಾಯಕ ನರೇಂದ್ರ ಸಲೂಜಾ ಅವರು ವ್ಯಂಗ್ಯವಾಡಿದ್ದರೆ.
ಇದನ್ನೂ ಓದಿ: ‘ಪ್ರಜ್ಞಾ ಠಾಕೂರ್ ವಿಚಾರದಲ್ಲಿ ಮೋದಿ ಮನಸು ಬದಲಾಯಿಸಿದ ಹಾಗಿದೆ’: ಕಾಂಗ್ರೆಸ್ ಆಕ್ರೋಶ
“ನಮ್ಮ ಭೋಪಾಲ್ ಸಂಸದೆ, ಸಹೋದರಿ ಪ್ರಜ್ಞಾ ಠಾಕೂರ್ ಅವರು ಬ್ಯಾಸ್ಕೆಟ್ಬಾಲ್ ಆಡುವುದನ್ನು, ಬೆಂಬಲವಿಲ್ಲದೆ ನಡೆಯುದನ್ನು ಅಥವಾ ಈ ರೀತಿ ಸಂತೋಷದಿಂದ ನೃತ್ಯ ಮಾಡುವುದನ್ನು ನೋಡಿದಾಗೆಲ್ಲಾ ಅದು ನಮಗೆ ಸಂತೋಷವನ್ನು ಕೊಡುತ್ತದೆ …?” ಎಂದು ಮಧ್ಯಪ್ರದೇಶದ ಕಾಂಗ್ರೆಸ್ ವಕ್ತಾರರೂ ಆಗಿರುವ ಸಲೂಜಾ ಅವರು ಟ್ವೀಟ್ ಮಾಡಿದ್ದಾರೆ.
हमारी भोपाल की सांसद बहन प्रज्ञा ठाकुर को जब भी बास्केट बॉल खेलते हुए , बग़ैर सहारे के चलते हुए या इस तरह ख़ुशी से झूमते हुए देखते है तो बड़ी ख़ुशी होती है…? pic.twitter.com/MR01Gumnun
— Narendra Saluja (@NarendraSaluja) July 7, 2021
ಜುಲೈ 1 ರಂದು ಕೂಡಾ ಸಲೂಜಾ ಅವರು ಪ್ರಜ್ಞಾ ಠಾಕೂರ್ ಬಾಸ್ಕೆಟ್ ಬಾಲ್ ಆಡುವ ವಿಡಿಯೊವನ್ನು ಹಂಚಿಕೊಂಡಿದ್ದರು. ಅಂದು ಟ್ವೀಟ್ ಮಾಡಿದ್ದ ಅವರು, “ಭೋಪಾಲ್ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ಗಾಲಿಕುರ್ಚಿಯಲ್ಲಿ ಮಾತ್ರ ನೋಡಿದ್ದೆ. ಆದರೆ ಇಂದು, ಭೋಪಾಲ್ ಕ್ರೀಡಾಂಗಣದಲ್ಲಿ ಬ್ಯಾಸ್ಕೆಟ್ಬಾಲ್ ಆಡುವುದನ್ನು ನೋಡಿ ತುಂಬಾ ಸಂತೋಷವಾಗಿದೆ. ಗಾಯದಿಂದಾಗಿ ಅವರು ನಡೆಯಲು ಅಥವಾ ಸರಿಯಾಗಿ ನಿಲ್ಲಲು ಸಾಧ್ಯವಿಲ್ಲ ಎಂದು ಇಲ್ಲಿಯವರೆಗೆ ನಮಗೆ ತಿಳಿದಿತ್ತು …? ದೇವರು ಯಾವಾಗಲೂ ಅವರನ್ನು ಆರೋಗ್ಯವಾಗಿರಿಸಿಕೊಳ್ಳಲಿ … ” ಎಂದು ಟ್ವೀಟ್ ಮಾಡಿದ್ದರು.
भोपाल की भाजपा सांसद साध्वी ठाकुर को अभी तक व्हील चेयर पर ही देखा था लेकिन आज उन्हें भोपाल में स्टेडीयम में बास्केट बॉल पर हाथ आज़माते देखा तो बड़ी ख़ुशी हुई…
अभी तक यही पता था कि किसी चोट के कारण वो ठीक से खड़ी और चल फिर भी नही सकती है…?
ईश्वर उन्हें हमेशा स्वस्थ रखे.. pic.twitter.com/UQrmsXkime
— Narendra Saluja (@NarendraSaluja) July 1, 2021
ತಮ್ಮ ಪಕ್ಷ ಬಿಜೆಪಿಯನ್ನು ಆಗಾಗ್ಗೆ ಮುಜುಗರಕ್ಕೀಡು ಮಾಡುವಂತಹ ವಿವಾದಾತ್ಮಕ ಟೀಕೆಗಳಿಗೆ ಹೆಸರುವಾಸಿಯಾದ ಪ್ರಜ್ಞಾ ಠಾಕೂರ್ 2008 ರ ಮಾಲೆಗಾಂವ್ ಭಯೋತ್ಪಾದಕ ಸ್ಫೋಟದ ಪ್ರಮುಖ ಆರೋಪಿಯಾಗಿದ್ದಾರೆ. ಅವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದು, 2017 ರಲ್ಲಿ ಅವರಿಗೆ ಜಾಮೀನು ನೀಡಲಾಗಿತ್ತು. ಜಾಮೀನು ಪಡೆಯುವ ಮೊದಲು ಅವರು ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿದ್ದರು.
ಮುಂಬೈಯಿಂದ 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್ನಲ್ಲಿ ಇಟ್ಟಿದ್ದ ಸ್ಫೋಟಕ ಸ್ಪೋಟಗೊಂಡು ಆರು ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಪ್ರಜ್ಙಾ ಠಾಕೂರ್ ಪ್ರಮುಖ ಆರೋಪಿಯಾಗಿದ್ದಾರೆ.
ಇದನ್ನೂ ಓದಿ: ಮಾಲೆಗಾಂವ್ ಸ್ಪೋಟ: 2 ನೇ ಬಾರಿಯೂ ವಿಚಾರಣೆಗೆ ತಪ್ಪಿಸಿಕೊಂಡ ಪ್ರಜ್ಞಾ ಸಿಂಗ್ ಠಾಕೂರ್