Homeಮುಖಪುಟಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ - ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

ಅವರು 2008 ರ ಮಾಲೆಗಾಂವ್ ಭಯೋತ್ಪಾದಕ ಸ್ಫೋಟದ ಪ್ರಮುಖ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.

- Advertisement -
- Advertisement -

ಮಾಲೆಗಾಂವ್ ಭಯೋತ್ಪಾದನಾ ಸ್ಪೋಟದ ಪ್ರಮುಖ ಆರೋಪಿ, ಸಂಸದೆ ಪ್ರಜ್ಞಾ ಠಾಕೂರ್‌ ಅವರು ಬ್ಯಾಸ್ಕೆಟ್‌ಬಾಲ್ ಆಡುವ ವಿಡಿಯೊವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಮತ್ತೆ ಮದುವೆ ಕಾರ್ಯಕ್ರಮವೊಂದರಲ್ಲಿ ಅವರು ಡ್ಯಾನ್ಸ್‌ ಮಾಡುವ ವಿಡಿಯೊವೊಂದು ವೈರಲ್‌ ಆಗಿದೆ. ಮಾಲೆಗಾಂವ್‌ ಸ್ಪೋಟ ಪ್ರಕರಣದಲ್ಲಿ ಅವರು, ಅನಾರೋಗ್ಯದ ಕಾರಣ ನೀಡಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ರಿಯಾಯಿತಿ ನೀಡುವಂತೆ ಕೇಳಿಕೊಂಡಿದ್ದರು. ಇದೀಗ ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಇತ್ತೀಚಿಚೆಗೆ ವೈರಲ್‌ ಆದ ವಿಡಿಯೊದಲ್ಲಿ ಅವರು ಮದುವೆ ಸಂಭ್ರಮದಲ್ಲಿ ಭಾಗಹಿಸಿದ್ದು, ಅಲ್ಲಿ ಅವರು ಡ್ಯಾನ್ಸ್ ಮಾಡಿದ್ದು ಮಾತ್ರವಲ್ಲದೆ, ಇತರರನ್ನೂ ಸಂಭ್ರಮದಲ್ಲಿ ಸೇರಲು ಕೇಳಿಕೊಳ್ಳುತ್ತಾರೆ. ಸಂಸದೆ ತಮ್ಮ ಮದುವೆಯಲ್ಲಿ ಭಾಗವಹಿಸಿದ್ದನ್ನು ಸ್ವತಃ ಮದುಮಗಳ ತಂದೆ ಖುಷಿ ವ್ಯಕ್ತಪಡಿಸಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದರು. ಈ ವಿಡಿಯೊ ಕುರಿತು ಕಾಂಗ್ರೆಸ್‌ ನಾಯಕ ನರೇಂದ್ರ ಸಲೂಜಾ ಅವರು ವ್ಯಂಗ್ಯವಾಡಿದ್ದರೆ.

ಇದನ್ನೂ ಓದಿ: ‘ಪ್ರಜ್ಞಾ ಠಾಕೂರ್‌ ವಿಚಾರದಲ್ಲಿ ಮೋದಿ ಮನಸು ಬದಲಾಯಿಸಿದ ಹಾಗಿದೆ’: ಕಾಂಗ್ರೆಸ್‌‌ ಆಕ್ರೋಶ

“ನಮ್ಮ ಭೋಪಾಲ್ ಸಂಸದೆ, ಸಹೋದರಿ ಪ್ರಜ್ಞಾ ಠಾಕೂರ್ ಅವರು ಬ್ಯಾಸ್ಕೆಟ್‌ಬಾಲ್ ಆಡುವುದನ್ನು, ಬೆಂಬಲವಿಲ್ಲದೆ ನಡೆಯುದನ್ನು ಅಥವಾ ಈ ರೀತಿ ಸಂತೋಷದಿಂದ ನೃತ್ಯ ಮಾಡುವುದನ್ನು ನೋಡಿದಾಗೆಲ್ಲಾ ಅದು ನಮಗೆ ಸಂತೋಷವನ್ನು ಕೊಡುತ್ತದೆ …?” ಎಂದು ಮಧ್ಯಪ್ರದೇಶದ ಕಾಂಗ್ರೆಸ್ ವಕ್ತಾರರೂ ಆಗಿರುವ ಸಲೂಜಾ ಅವರು ಟ್ವೀಟ್ ಮಾಡಿದ್ದಾರೆ.

ಜುಲೈ 1 ರಂದು ಕೂಡಾ ಸಲೂಜಾ ಅವರು ಪ್ರಜ್ಞಾ ಠಾಕೂರ್‌ ಬಾಸ್ಕೆಟ್‌ ಬಾಲ್ ಆಡುವ ವಿಡಿಯೊವನ್ನು ಹಂಚಿಕೊಂಡಿದ್ದರು. ಅಂದು ಟ್ವೀಟ್ ಮಾಡಿದ್ದ ಅವರು, “ಭೋಪಾಲ್ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ಗಾಲಿಕುರ್ಚಿಯಲ್ಲಿ ಮಾತ್ರ ನೋಡಿದ್ದೆ. ಆದರೆ ಇಂದು, ಭೋಪಾಲ್ ಕ್ರೀಡಾಂಗಣದಲ್ಲಿ ಬ್ಯಾಸ್ಕೆಟ್‌ಬಾಲ್‌ ಆಡುವುದನ್ನು ನೋಡಿ ತುಂಬಾ ಸಂತೋಷವಾಗಿದೆ. ಗಾಯದಿಂದಾಗಿ ಅವರು ನಡೆಯಲು ಅಥವಾ ಸರಿಯಾಗಿ ನಿಲ್ಲಲು ಸಾಧ್ಯವಿಲ್ಲ ಎಂದು ಇಲ್ಲಿಯವರೆಗೆ ನಮಗೆ ತಿಳಿದಿತ್ತು …? ದೇವರು ಯಾವಾಗಲೂ ಅವರನ್ನು ಆರೋಗ್ಯವಾಗಿರಿಸಿಕೊಳ್ಳಲಿ … ” ಎಂದು ಟ್ವೀಟ್ ಮಾಡಿದ್ದರು.

ತಮ್ಮ ಪಕ್ಷ ಬಿಜೆಪಿಯನ್ನು ಆಗಾಗ್ಗೆ ಮುಜುಗರಕ್ಕೀಡು ಮಾಡುವಂತಹ ವಿವಾದಾತ್ಮಕ ಟೀಕೆಗಳಿಗೆ ಹೆಸರುವಾಸಿಯಾದ ಪ್ರಜ್ಞಾ ಠಾಕೂರ್ 2008 ರ ಮಾಲೆಗಾಂವ್ ಭಯೋತ್ಪಾದಕ ಸ್ಫೋಟದ ಪ್ರಮುಖ ಆರೋಪಿಯಾಗಿದ್ದಾರೆ. ಅವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದು, 2017 ರಲ್ಲಿ ಅವರಿಗೆ ಜಾಮೀನು ನೀಡಲಾಗಿತ್ತು. ಜಾಮೀನು ಪಡೆಯುವ ಮೊದಲು ಅವರು ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿದ್ದರು.

ಮುಂಬೈಯಿಂದ 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಇಟ್ಟಿದ್ದ ಸ್ಫೋಟಕ ಸ್ಪೋಟಗೊಂಡು ಆರು ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಪ್ರಜ್ಙಾ ಠಾಕೂರ್‌ ಪ್ರಮುಖ ಆರೋಪಿಯಾಗಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್‌‌ ಸ್ಪೋಟ: 2 ನೇ ಬಾರಿಯೂ ವಿಚಾರಣೆಗೆ ತಪ್ಪಿಸಿಕೊಂಡ ಪ್ರಜ್ಞಾ ಸಿಂಗ್ ಠಾಕೂರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...