Homeಮುಖಪುಟ2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

- Advertisement -
- Advertisement -

‘ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದರು. ಆದರೆ ಇದೇ ಮೂರ್ತಿಯವರು 2009ರಲ್ಲಿ ಮನಮೋಹನ್ ಸಿಂಗ್ ಹಾಗೂ ದೇಶದ ಅಭಿವೃದ್ಧಿಯ ಕುರಿತು ಆಡಿರುವ ಮಾತುಗಳು ವೈರಲ್ ಆಗಿವೆ.

ಇತ್ತೀಚೆಗೆ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ – ಅಹಮದಾಬಾದ್ (ಐಐಎಂಎ)’ ನಲ್ಲಿ ನಡೆದ ಸಂವಾದದಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಮೂರ್ತಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿ ಮಾಡುವ ಶಕ್ತಿ ಯುವ ಮನಸ್ಸುಗಳಲ್ಲಿದೆ. ನಾನು ಲಂಡನ್‌ನಲ್ಲಿ (2008 ಮತ್ತು 2012ರ ನಡುವೆ) ಎಚ್‌ಎಸ್‌ಬಿಸಿಯ ಮಂಡಳಿಯಲ್ಲಿದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಮಂಡಳಿಯ ಸಭೆಯಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಲಾಗುತ್ತಿತ್ತು. ಭಾರತದ ಹೆಸರನ್ನು ಒಮ್ಮೊಮ್ಮೆ ಮಾತ್ರ ಹೇಳಲಾಗುತ್ತಿತ್ತು. ದುರದೃಷ್ಟವಶಾತ್, ನಂತರ (ಭಾರತಕ್ಕೆ) ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದಿದ್ದರು.

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು (ಯುಪಿಎ ಅವಧಿಯಲ್ಲಿ) ಸ್ಥಗಿತಗೊಂಡಿತ್ತು. ಸೂಕ್ತ ನಿರ್ಧಾರಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಲೇ ಇಲ್ಲ. ಎಲ್ಲವೂ ತಡವಾಗಿಹೋಯಿತು‌” ಎಂದು ಟೀಕಿಸಿದ್ದಾರೆ.

2009ರಲ್ಲಿ ನಾರಾಯಣಮೂರ್ತಿಯವರು ಹೇಳಿದ್ದೇನು?

2009ರಲ್ಲಿ ಔಟ್‌ಲುಕ್ ಪತ್ರಿಕೆಗೆ ನಾರಾಯಣಮೂರ್ತಿಯವರು ಸಂದರ್ಶನ ನೀಡಿದ್ದರು. ಪತ್ರಕರ್ತ ಸುನಿತ್ ಅರೋರ ಅವರು ನಡೆಸಿದ್ದ ಸಂದರ್ಶನ ಅಂದಿನ ಸಾಮಾನ್ಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕಟವಾಗಿತ್ತು. ಅಂದು ನಾರಾಯಣಮೂರ್ತಿಯವರು ಆಡಿರುವ ಮಾತುಗಳನ್ನು ಇಂದು ಟ್ವಿಟರ್‌ನಲ್ಲಿ ಸುನಿತ್ ಹಂಚಿಕೊಂಡಿದ್ದಾರೆ. ಜೊತೆಗೆ ಔಟ್‌ಲುಕ್‌ನಲ್ಲಿ ಅಪಲೋಡ್ ಮಾಡಲಾಗಿರುವ ಸುದ್ದಿಲಿಂಕ್‌ ಕೂಡ ಹಂಚಿಕೊಂಡಿದ್ದಾರೆ.

“2009ರಲ್ಲಿ ಸಮೀಪಿಸುತ್ತಿರುವ ಚುನಾವಣೆಯ ಮಹತ್ವದ ಬಗ್ಗೆ ನಾನು ಮೂರ್ತಿ ಅವರನ್ನು ಕೇಳಿದಾಗ ಅವರು, ಈ ಚುನಾವಣೆಯು ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದು ದೇಶದಲ್ಲಿ ಹತ್ತು ವರ್ಷಗಳ ಅದ್ಭುತ ಆರ್ಥಿಕ ಬೆಳವಣಿಗೆಯ ನಂತರ ನಡೆಯುತ್ತಿದೆ” ಎಂದಿರುವುದಾಗಿ ಸುನಿತ್ ಟ್ವೀಟ್‌ ಮಾಡಿದ್ದಾರೆ.

ನಂತರ ಮೂರ್ತಿ ಅವರು ಮನಮೋಹನ್ ಸಿಂಗ್ ಅವರನ್ನು ಶ್ಲಾಘಿಸಿದ್ದಾರೆ. “ಮನಮೋಹನ್‌ಸಿಂಗ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಅಗತ್ಯವನ್ನು ಮುನ್ನೆಲೆಗೆ ತಂದಿದ್ದಾರೆ. ಆ ಅರ್ಥದಲ್ಲಿ ಇಂದು, ನಮ್ಮ ಅಸಾಮಾನ್ಯ ಆರ್ಥಿಕತೆಯ ಬೆಳವಣಿಗೆಯಿಂದ ದೇಶದ ಪ್ರತಿಯೊಬ್ಬರೂ ಪ್ರಯೋಜನ ಪಡೆದಿಲ್ಲ ಎಂಬ ಅಂಶದ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದಿದ್ದಾರೆ.

ಮೂರ್ತಿಯವರು ಈ ವಿಷಯವನ್ನು ಪುನರುಚ್ಚರಿಸಿದ್ದಾರೆ. “ನನಗೆ ಅಪಾರವಾದ ಗೌರವವಿರುವ ನಮ್ಮ ದೇಶದ ಪ್ರಧಾನಿ ಮೊದಲ ಬಾರಿಗೆ ಸಮಗ್ರ ಬೆಳವಣಿಗೆಯನ್ನು ಸಾಧಿಸುವ ಅಗತ್ಯತೆಯ ಮೇಲೆ ದೇಶದ ಗಮನವನ್ನು ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಇದು ನನಗೆ ತಾಜಾ ವಿಷಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಇತ್ತೀಚಿನ ವರ್ಷಗಳಲ್ಲಿ ಇಬ್ಬರು ಅಸಾಧಾರಣ ಮಹನೀಯರನ್ನು ನಮ್ಮ ಪ್ರಧಾನ ಮಂತ್ರಿಗಳಾಗಿ ಆಯ್ಕೆ ಮಾಡಿದ್ದೇವೆ. ವಾಜಪೇಯಿ ಮತ್ತು ಮನಮೋಹನಸಿಂಗ್‌ ಆ ಮಹನೀಯರಾಗಿದ್ದಾರೆ. ಈ ಇಬ್ಬರನ್ನೂ ಪ್ರಾಮಾಣಿಕರು, ಬುದ್ಧಿವಂತರು, ಸಭ್ಯ ವ್ಯಕ್ತಿಗಳು ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

“…ದೇಶದ ಒಳಿತನ್ನು ಮನಸ್ಸಿನಲ್ಲಿಟ್ಟುಕೊಂಡಿರುವ ಜನರು, ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಉತ್ತರದಾಯಿತ್ವದಲ್ಲಿ ನಂಬಿಕೆಯುಳ್ಳ ಜನರು… ಇಂತಹ ಇನ್ನೂ ಅನೇಕ ನಾಯಕರು ನಮ್ಮಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ನಾರಾಯಣಮೂರ್ತಿ ತಿಳಿಸಿದ್ದಾರೆ.

“ನಮಗೆ ಸುಧಾರಣೆಗಳು ಬೇಕು, ಆದರೆ ನಮಗೆ ಉತ್ತಮ ನಿಯಂತ್ರಣವೂ ಬೇಕು. ಸರ್ಕಾರದ ಕಾರಿಡಾರ್‌ಗಳಲ್ಲಿ ಕಾಯುವ ಬದಲು ನಮ್ಮ ಬೋರ್ಡ್‌ರೂಮ್‌ಗಳಿಂದ ನಮ್ಮ ವ್ಯವಹಾರಗಳನ್ನು ನಡೆಸಲು ನಾವು ಮುಕ್ತರಾಗಿರಬೇಕು. ಆದಾಗ್ಯೂ, ನಮಗೆ ಉತ್ತಮ ನಿಯಂತ್ರಣದ ಅಗತ್ಯವಿದೆ” ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಪೂರ್ಣ ಸಂದರ್ಶನವನ್ನು ‘ಇಲ್ಲಿ’ ಓದಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...