Homeಮುಖಪುಟ2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

- Advertisement -
- Advertisement -

‘ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದರು. ಆದರೆ ಇದೇ ಮೂರ್ತಿಯವರು 2009ರಲ್ಲಿ ಮನಮೋಹನ್ ಸಿಂಗ್ ಹಾಗೂ ದೇಶದ ಅಭಿವೃದ್ಧಿಯ ಕುರಿತು ಆಡಿರುವ ಮಾತುಗಳು ವೈರಲ್ ಆಗಿವೆ.

ಇತ್ತೀಚೆಗೆ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ – ಅಹಮದಾಬಾದ್ (ಐಐಎಂಎ)’ ನಲ್ಲಿ ನಡೆದ ಸಂವಾದದಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಮೂರ್ತಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿ ಮಾಡುವ ಶಕ್ತಿ ಯುವ ಮನಸ್ಸುಗಳಲ್ಲಿದೆ. ನಾನು ಲಂಡನ್‌ನಲ್ಲಿ (2008 ಮತ್ತು 2012ರ ನಡುವೆ) ಎಚ್‌ಎಸ್‌ಬಿಸಿಯ ಮಂಡಳಿಯಲ್ಲಿದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಮಂಡಳಿಯ ಸಭೆಯಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಲಾಗುತ್ತಿತ್ತು. ಭಾರತದ ಹೆಸರನ್ನು ಒಮ್ಮೊಮ್ಮೆ ಮಾತ್ರ ಹೇಳಲಾಗುತ್ತಿತ್ತು. ದುರದೃಷ್ಟವಶಾತ್, ನಂತರ (ಭಾರತಕ್ಕೆ) ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದಿದ್ದರು.

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು (ಯುಪಿಎ ಅವಧಿಯಲ್ಲಿ) ಸ್ಥಗಿತಗೊಂಡಿತ್ತು. ಸೂಕ್ತ ನಿರ್ಧಾರಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಲೇ ಇಲ್ಲ. ಎಲ್ಲವೂ ತಡವಾಗಿಹೋಯಿತು‌” ಎಂದು ಟೀಕಿಸಿದ್ದಾರೆ.

2009ರಲ್ಲಿ ನಾರಾಯಣಮೂರ್ತಿಯವರು ಹೇಳಿದ್ದೇನು?

2009ರಲ್ಲಿ ಔಟ್‌ಲುಕ್ ಪತ್ರಿಕೆಗೆ ನಾರಾಯಣಮೂರ್ತಿಯವರು ಸಂದರ್ಶನ ನೀಡಿದ್ದರು. ಪತ್ರಕರ್ತ ಸುನಿತ್ ಅರೋರ ಅವರು ನಡೆಸಿದ್ದ ಸಂದರ್ಶನ ಅಂದಿನ ಸಾಮಾನ್ಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕಟವಾಗಿತ್ತು. ಅಂದು ನಾರಾಯಣಮೂರ್ತಿಯವರು ಆಡಿರುವ ಮಾತುಗಳನ್ನು ಇಂದು ಟ್ವಿಟರ್‌ನಲ್ಲಿ ಸುನಿತ್ ಹಂಚಿಕೊಂಡಿದ್ದಾರೆ. ಜೊತೆಗೆ ಔಟ್‌ಲುಕ್‌ನಲ್ಲಿ ಅಪಲೋಡ್ ಮಾಡಲಾಗಿರುವ ಸುದ್ದಿಲಿಂಕ್‌ ಕೂಡ ಹಂಚಿಕೊಂಡಿದ್ದಾರೆ.

“2009ರಲ್ಲಿ ಸಮೀಪಿಸುತ್ತಿರುವ ಚುನಾವಣೆಯ ಮಹತ್ವದ ಬಗ್ಗೆ ನಾನು ಮೂರ್ತಿ ಅವರನ್ನು ಕೇಳಿದಾಗ ಅವರು, ಈ ಚುನಾವಣೆಯು ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದು ದೇಶದಲ್ಲಿ ಹತ್ತು ವರ್ಷಗಳ ಅದ್ಭುತ ಆರ್ಥಿಕ ಬೆಳವಣಿಗೆಯ ನಂತರ ನಡೆಯುತ್ತಿದೆ” ಎಂದಿರುವುದಾಗಿ ಸುನಿತ್ ಟ್ವೀಟ್‌ ಮಾಡಿದ್ದಾರೆ.

ನಂತರ ಮೂರ್ತಿ ಅವರು ಮನಮೋಹನ್ ಸಿಂಗ್ ಅವರನ್ನು ಶ್ಲಾಘಿಸಿದ್ದಾರೆ. “ಮನಮೋಹನ್‌ಸಿಂಗ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಅಗತ್ಯವನ್ನು ಮುನ್ನೆಲೆಗೆ ತಂದಿದ್ದಾರೆ. ಆ ಅರ್ಥದಲ್ಲಿ ಇಂದು, ನಮ್ಮ ಅಸಾಮಾನ್ಯ ಆರ್ಥಿಕತೆಯ ಬೆಳವಣಿಗೆಯಿಂದ ದೇಶದ ಪ್ರತಿಯೊಬ್ಬರೂ ಪ್ರಯೋಜನ ಪಡೆದಿಲ್ಲ ಎಂಬ ಅಂಶದ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದಿದ್ದಾರೆ.

ಮೂರ್ತಿಯವರು ಈ ವಿಷಯವನ್ನು ಪುನರುಚ್ಚರಿಸಿದ್ದಾರೆ. “ನನಗೆ ಅಪಾರವಾದ ಗೌರವವಿರುವ ನಮ್ಮ ದೇಶದ ಪ್ರಧಾನಿ ಮೊದಲ ಬಾರಿಗೆ ಸಮಗ್ರ ಬೆಳವಣಿಗೆಯನ್ನು ಸಾಧಿಸುವ ಅಗತ್ಯತೆಯ ಮೇಲೆ ದೇಶದ ಗಮನವನ್ನು ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಇದು ನನಗೆ ತಾಜಾ ವಿಷಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಇತ್ತೀಚಿನ ವರ್ಷಗಳಲ್ಲಿ ಇಬ್ಬರು ಅಸಾಧಾರಣ ಮಹನೀಯರನ್ನು ನಮ್ಮ ಪ್ರಧಾನ ಮಂತ್ರಿಗಳಾಗಿ ಆಯ್ಕೆ ಮಾಡಿದ್ದೇವೆ. ವಾಜಪೇಯಿ ಮತ್ತು ಮನಮೋಹನಸಿಂಗ್‌ ಆ ಮಹನೀಯರಾಗಿದ್ದಾರೆ. ಈ ಇಬ್ಬರನ್ನೂ ಪ್ರಾಮಾಣಿಕರು, ಬುದ್ಧಿವಂತರು, ಸಭ್ಯ ವ್ಯಕ್ತಿಗಳು ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

“…ದೇಶದ ಒಳಿತನ್ನು ಮನಸ್ಸಿನಲ್ಲಿಟ್ಟುಕೊಂಡಿರುವ ಜನರು, ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಉತ್ತರದಾಯಿತ್ವದಲ್ಲಿ ನಂಬಿಕೆಯುಳ್ಳ ಜನರು… ಇಂತಹ ಇನ್ನೂ ಅನೇಕ ನಾಯಕರು ನಮ್ಮಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ನಾರಾಯಣಮೂರ್ತಿ ತಿಳಿಸಿದ್ದಾರೆ.

“ನಮಗೆ ಸುಧಾರಣೆಗಳು ಬೇಕು, ಆದರೆ ನಮಗೆ ಉತ್ತಮ ನಿಯಂತ್ರಣವೂ ಬೇಕು. ಸರ್ಕಾರದ ಕಾರಿಡಾರ್‌ಗಳಲ್ಲಿ ಕಾಯುವ ಬದಲು ನಮ್ಮ ಬೋರ್ಡ್‌ರೂಮ್‌ಗಳಿಂದ ನಮ್ಮ ವ್ಯವಹಾರಗಳನ್ನು ನಡೆಸಲು ನಾವು ಮುಕ್ತರಾಗಿರಬೇಕು. ಆದಾಗ್ಯೂ, ನಮಗೆ ಉತ್ತಮ ನಿಯಂತ್ರಣದ ಅಗತ್ಯವಿದೆ” ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಪೂರ್ಣ ಸಂದರ್ಶನವನ್ನು ‘ಇಲ್ಲಿ’ ಓದಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...