Homeಮುಖಪುಟ2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

- Advertisement -
- Advertisement -

‘ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದರು. ಆದರೆ ಇದೇ ಮೂರ್ತಿಯವರು 2009ರಲ್ಲಿ ಮನಮೋಹನ್ ಸಿಂಗ್ ಹಾಗೂ ದೇಶದ ಅಭಿವೃದ್ಧಿಯ ಕುರಿತು ಆಡಿರುವ ಮಾತುಗಳು ವೈರಲ್ ಆಗಿವೆ.

ಇತ್ತೀಚೆಗೆ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ – ಅಹಮದಾಬಾದ್ (ಐಐಎಂಎ)’ ನಲ್ಲಿ ನಡೆದ ಸಂವಾದದಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಮೂರ್ತಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿ ಮಾಡುವ ಶಕ್ತಿ ಯುವ ಮನಸ್ಸುಗಳಲ್ಲಿದೆ. ನಾನು ಲಂಡನ್‌ನಲ್ಲಿ (2008 ಮತ್ತು 2012ರ ನಡುವೆ) ಎಚ್‌ಎಸ್‌ಬಿಸಿಯ ಮಂಡಳಿಯಲ್ಲಿದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಮಂಡಳಿಯ ಸಭೆಯಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಲಾಗುತ್ತಿತ್ತು. ಭಾರತದ ಹೆಸರನ್ನು ಒಮ್ಮೊಮ್ಮೆ ಮಾತ್ರ ಹೇಳಲಾಗುತ್ತಿತ್ತು. ದುರದೃಷ್ಟವಶಾತ್, ನಂತರ (ಭಾರತಕ್ಕೆ) ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದಿದ್ದರು.

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು (ಯುಪಿಎ ಅವಧಿಯಲ್ಲಿ) ಸ್ಥಗಿತಗೊಂಡಿತ್ತು. ಸೂಕ್ತ ನಿರ್ಧಾರಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಲೇ ಇಲ್ಲ. ಎಲ್ಲವೂ ತಡವಾಗಿಹೋಯಿತು‌” ಎಂದು ಟೀಕಿಸಿದ್ದಾರೆ.

2009ರಲ್ಲಿ ನಾರಾಯಣಮೂರ್ತಿಯವರು ಹೇಳಿದ್ದೇನು?

2009ರಲ್ಲಿ ಔಟ್‌ಲುಕ್ ಪತ್ರಿಕೆಗೆ ನಾರಾಯಣಮೂರ್ತಿಯವರು ಸಂದರ್ಶನ ನೀಡಿದ್ದರು. ಪತ್ರಕರ್ತ ಸುನಿತ್ ಅರೋರ ಅವರು ನಡೆಸಿದ್ದ ಸಂದರ್ಶನ ಅಂದಿನ ಸಾಮಾನ್ಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕಟವಾಗಿತ್ತು. ಅಂದು ನಾರಾಯಣಮೂರ್ತಿಯವರು ಆಡಿರುವ ಮಾತುಗಳನ್ನು ಇಂದು ಟ್ವಿಟರ್‌ನಲ್ಲಿ ಸುನಿತ್ ಹಂಚಿಕೊಂಡಿದ್ದಾರೆ. ಜೊತೆಗೆ ಔಟ್‌ಲುಕ್‌ನಲ್ಲಿ ಅಪಲೋಡ್ ಮಾಡಲಾಗಿರುವ ಸುದ್ದಿಲಿಂಕ್‌ ಕೂಡ ಹಂಚಿಕೊಂಡಿದ್ದಾರೆ.

“2009ರಲ್ಲಿ ಸಮೀಪಿಸುತ್ತಿರುವ ಚುನಾವಣೆಯ ಮಹತ್ವದ ಬಗ್ಗೆ ನಾನು ಮೂರ್ತಿ ಅವರನ್ನು ಕೇಳಿದಾಗ ಅವರು, ಈ ಚುನಾವಣೆಯು ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದು ದೇಶದಲ್ಲಿ ಹತ್ತು ವರ್ಷಗಳ ಅದ್ಭುತ ಆರ್ಥಿಕ ಬೆಳವಣಿಗೆಯ ನಂತರ ನಡೆಯುತ್ತಿದೆ” ಎಂದಿರುವುದಾಗಿ ಸುನಿತ್ ಟ್ವೀಟ್‌ ಮಾಡಿದ್ದಾರೆ.

ನಂತರ ಮೂರ್ತಿ ಅವರು ಮನಮೋಹನ್ ಸಿಂಗ್ ಅವರನ್ನು ಶ್ಲಾಘಿಸಿದ್ದಾರೆ. “ಮನಮೋಹನ್‌ಸಿಂಗ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಅಗತ್ಯವನ್ನು ಮುನ್ನೆಲೆಗೆ ತಂದಿದ್ದಾರೆ. ಆ ಅರ್ಥದಲ್ಲಿ ಇಂದು, ನಮ್ಮ ಅಸಾಮಾನ್ಯ ಆರ್ಥಿಕತೆಯ ಬೆಳವಣಿಗೆಯಿಂದ ದೇಶದ ಪ್ರತಿಯೊಬ್ಬರೂ ಪ್ರಯೋಜನ ಪಡೆದಿಲ್ಲ ಎಂಬ ಅಂಶದ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದಿದ್ದಾರೆ.

ಮೂರ್ತಿಯವರು ಈ ವಿಷಯವನ್ನು ಪುನರುಚ್ಚರಿಸಿದ್ದಾರೆ. “ನನಗೆ ಅಪಾರವಾದ ಗೌರವವಿರುವ ನಮ್ಮ ದೇಶದ ಪ್ರಧಾನಿ ಮೊದಲ ಬಾರಿಗೆ ಸಮಗ್ರ ಬೆಳವಣಿಗೆಯನ್ನು ಸಾಧಿಸುವ ಅಗತ್ಯತೆಯ ಮೇಲೆ ದೇಶದ ಗಮನವನ್ನು ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಇದು ನನಗೆ ತಾಜಾ ವಿಷಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಇತ್ತೀಚಿನ ವರ್ಷಗಳಲ್ಲಿ ಇಬ್ಬರು ಅಸಾಧಾರಣ ಮಹನೀಯರನ್ನು ನಮ್ಮ ಪ್ರಧಾನ ಮಂತ್ರಿಗಳಾಗಿ ಆಯ್ಕೆ ಮಾಡಿದ್ದೇವೆ. ವಾಜಪೇಯಿ ಮತ್ತು ಮನಮೋಹನಸಿಂಗ್‌ ಆ ಮಹನೀಯರಾಗಿದ್ದಾರೆ. ಈ ಇಬ್ಬರನ್ನೂ ಪ್ರಾಮಾಣಿಕರು, ಬುದ್ಧಿವಂತರು, ಸಭ್ಯ ವ್ಯಕ್ತಿಗಳು ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

“…ದೇಶದ ಒಳಿತನ್ನು ಮನಸ್ಸಿನಲ್ಲಿಟ್ಟುಕೊಂಡಿರುವ ಜನರು, ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಉತ್ತರದಾಯಿತ್ವದಲ್ಲಿ ನಂಬಿಕೆಯುಳ್ಳ ಜನರು… ಇಂತಹ ಇನ್ನೂ ಅನೇಕ ನಾಯಕರು ನಮ್ಮಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ನಾರಾಯಣಮೂರ್ತಿ ತಿಳಿಸಿದ್ದಾರೆ.

“ನಮಗೆ ಸುಧಾರಣೆಗಳು ಬೇಕು, ಆದರೆ ನಮಗೆ ಉತ್ತಮ ನಿಯಂತ್ರಣವೂ ಬೇಕು. ಸರ್ಕಾರದ ಕಾರಿಡಾರ್‌ಗಳಲ್ಲಿ ಕಾಯುವ ಬದಲು ನಮ್ಮ ಬೋರ್ಡ್‌ರೂಮ್‌ಗಳಿಂದ ನಮ್ಮ ವ್ಯವಹಾರಗಳನ್ನು ನಡೆಸಲು ನಾವು ಮುಕ್ತರಾಗಿರಬೇಕು. ಆದಾಗ್ಯೂ, ನಮಗೆ ಉತ್ತಮ ನಿಯಂತ್ರಣದ ಅಗತ್ಯವಿದೆ” ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಪೂರ್ಣ ಸಂದರ್ಶನವನ್ನು ‘ಇಲ್ಲಿ’ ಓದಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...