Homeಮುಖಪುಟ2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

- Advertisement -
- Advertisement -

‘ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದರು. ಆದರೆ ಇದೇ ಮೂರ್ತಿಯವರು 2009ರಲ್ಲಿ ಮನಮೋಹನ್ ಸಿಂಗ್ ಹಾಗೂ ದೇಶದ ಅಭಿವೃದ್ಧಿಯ ಕುರಿತು ಆಡಿರುವ ಮಾತುಗಳು ವೈರಲ್ ಆಗಿವೆ.

ಇತ್ತೀಚೆಗೆ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ – ಅಹಮದಾಬಾದ್ (ಐಐಎಂಎ)’ ನಲ್ಲಿ ನಡೆದ ಸಂವಾದದಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಮೂರ್ತಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿ ಮಾಡುವ ಶಕ್ತಿ ಯುವ ಮನಸ್ಸುಗಳಲ್ಲಿದೆ. ನಾನು ಲಂಡನ್‌ನಲ್ಲಿ (2008 ಮತ್ತು 2012ರ ನಡುವೆ) ಎಚ್‌ಎಸ್‌ಬಿಸಿಯ ಮಂಡಳಿಯಲ್ಲಿದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಮಂಡಳಿಯ ಸಭೆಯಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಲಾಗುತ್ತಿತ್ತು. ಭಾರತದ ಹೆಸರನ್ನು ಒಮ್ಮೊಮ್ಮೆ ಮಾತ್ರ ಹೇಳಲಾಗುತ್ತಿತ್ತು. ದುರದೃಷ್ಟವಶಾತ್, ನಂತರ (ಭಾರತಕ್ಕೆ) ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದಿದ್ದರು.

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು (ಯುಪಿಎ ಅವಧಿಯಲ್ಲಿ) ಸ್ಥಗಿತಗೊಂಡಿತ್ತು. ಸೂಕ್ತ ನಿರ್ಧಾರಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಲೇ ಇಲ್ಲ. ಎಲ್ಲವೂ ತಡವಾಗಿಹೋಯಿತು‌” ಎಂದು ಟೀಕಿಸಿದ್ದಾರೆ.

2009ರಲ್ಲಿ ನಾರಾಯಣಮೂರ್ತಿಯವರು ಹೇಳಿದ್ದೇನು?

2009ರಲ್ಲಿ ಔಟ್‌ಲುಕ್ ಪತ್ರಿಕೆಗೆ ನಾರಾಯಣಮೂರ್ತಿಯವರು ಸಂದರ್ಶನ ನೀಡಿದ್ದರು. ಪತ್ರಕರ್ತ ಸುನಿತ್ ಅರೋರ ಅವರು ನಡೆಸಿದ್ದ ಸಂದರ್ಶನ ಅಂದಿನ ಸಾಮಾನ್ಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕಟವಾಗಿತ್ತು. ಅಂದು ನಾರಾಯಣಮೂರ್ತಿಯವರು ಆಡಿರುವ ಮಾತುಗಳನ್ನು ಇಂದು ಟ್ವಿಟರ್‌ನಲ್ಲಿ ಸುನಿತ್ ಹಂಚಿಕೊಂಡಿದ್ದಾರೆ. ಜೊತೆಗೆ ಔಟ್‌ಲುಕ್‌ನಲ್ಲಿ ಅಪಲೋಡ್ ಮಾಡಲಾಗಿರುವ ಸುದ್ದಿಲಿಂಕ್‌ ಕೂಡ ಹಂಚಿಕೊಂಡಿದ್ದಾರೆ.

“2009ರಲ್ಲಿ ಸಮೀಪಿಸುತ್ತಿರುವ ಚುನಾವಣೆಯ ಮಹತ್ವದ ಬಗ್ಗೆ ನಾನು ಮೂರ್ತಿ ಅವರನ್ನು ಕೇಳಿದಾಗ ಅವರು, ಈ ಚುನಾವಣೆಯು ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದು ದೇಶದಲ್ಲಿ ಹತ್ತು ವರ್ಷಗಳ ಅದ್ಭುತ ಆರ್ಥಿಕ ಬೆಳವಣಿಗೆಯ ನಂತರ ನಡೆಯುತ್ತಿದೆ” ಎಂದಿರುವುದಾಗಿ ಸುನಿತ್ ಟ್ವೀಟ್‌ ಮಾಡಿದ್ದಾರೆ.

ನಂತರ ಮೂರ್ತಿ ಅವರು ಮನಮೋಹನ್ ಸಿಂಗ್ ಅವರನ್ನು ಶ್ಲಾಘಿಸಿದ್ದಾರೆ. “ಮನಮೋಹನ್‌ಸಿಂಗ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಅಗತ್ಯವನ್ನು ಮುನ್ನೆಲೆಗೆ ತಂದಿದ್ದಾರೆ. ಆ ಅರ್ಥದಲ್ಲಿ ಇಂದು, ನಮ್ಮ ಅಸಾಮಾನ್ಯ ಆರ್ಥಿಕತೆಯ ಬೆಳವಣಿಗೆಯಿಂದ ದೇಶದ ಪ್ರತಿಯೊಬ್ಬರೂ ಪ್ರಯೋಜನ ಪಡೆದಿಲ್ಲ ಎಂಬ ಅಂಶದ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದಿದ್ದಾರೆ.

ಮೂರ್ತಿಯವರು ಈ ವಿಷಯವನ್ನು ಪುನರುಚ್ಚರಿಸಿದ್ದಾರೆ. “ನನಗೆ ಅಪಾರವಾದ ಗೌರವವಿರುವ ನಮ್ಮ ದೇಶದ ಪ್ರಧಾನಿ ಮೊದಲ ಬಾರಿಗೆ ಸಮಗ್ರ ಬೆಳವಣಿಗೆಯನ್ನು ಸಾಧಿಸುವ ಅಗತ್ಯತೆಯ ಮೇಲೆ ದೇಶದ ಗಮನವನ್ನು ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಇದು ನನಗೆ ತಾಜಾ ವಿಷಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಇತ್ತೀಚಿನ ವರ್ಷಗಳಲ್ಲಿ ಇಬ್ಬರು ಅಸಾಧಾರಣ ಮಹನೀಯರನ್ನು ನಮ್ಮ ಪ್ರಧಾನ ಮಂತ್ರಿಗಳಾಗಿ ಆಯ್ಕೆ ಮಾಡಿದ್ದೇವೆ. ವಾಜಪೇಯಿ ಮತ್ತು ಮನಮೋಹನಸಿಂಗ್‌ ಆ ಮಹನೀಯರಾಗಿದ್ದಾರೆ. ಈ ಇಬ್ಬರನ್ನೂ ಪ್ರಾಮಾಣಿಕರು, ಬುದ್ಧಿವಂತರು, ಸಭ್ಯ ವ್ಯಕ್ತಿಗಳು ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

“…ದೇಶದ ಒಳಿತನ್ನು ಮನಸ್ಸಿನಲ್ಲಿಟ್ಟುಕೊಂಡಿರುವ ಜನರು, ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಉತ್ತರದಾಯಿತ್ವದಲ್ಲಿ ನಂಬಿಕೆಯುಳ್ಳ ಜನರು… ಇಂತಹ ಇನ್ನೂ ಅನೇಕ ನಾಯಕರು ನಮ್ಮಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ನಾರಾಯಣಮೂರ್ತಿ ತಿಳಿಸಿದ್ದಾರೆ.

“ನಮಗೆ ಸುಧಾರಣೆಗಳು ಬೇಕು, ಆದರೆ ನಮಗೆ ಉತ್ತಮ ನಿಯಂತ್ರಣವೂ ಬೇಕು. ಸರ್ಕಾರದ ಕಾರಿಡಾರ್‌ಗಳಲ್ಲಿ ಕಾಯುವ ಬದಲು ನಮ್ಮ ಬೋರ್ಡ್‌ರೂಮ್‌ಗಳಿಂದ ನಮ್ಮ ವ್ಯವಹಾರಗಳನ್ನು ನಡೆಸಲು ನಾವು ಮುಕ್ತರಾಗಿರಬೇಕು. ಆದಾಗ್ಯೂ, ನಮಗೆ ಉತ್ತಮ ನಿಯಂತ್ರಣದ ಅಗತ್ಯವಿದೆ” ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಪೂರ್ಣ ಸಂದರ್ಶನವನ್ನು ‘ಇಲ್ಲಿ’ ಓದಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...