Homeಮುಖಪುಟ2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

- Advertisement -
- Advertisement -

‘ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದರು. ಆದರೆ ಇದೇ ಮೂರ್ತಿಯವರು 2009ರಲ್ಲಿ ಮನಮೋಹನ್ ಸಿಂಗ್ ಹಾಗೂ ದೇಶದ ಅಭಿವೃದ್ಧಿಯ ಕುರಿತು ಆಡಿರುವ ಮಾತುಗಳು ವೈರಲ್ ಆಗಿವೆ.

ಇತ್ತೀಚೆಗೆ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ – ಅಹಮದಾಬಾದ್ (ಐಐಎಂಎ)’ ನಲ್ಲಿ ನಡೆದ ಸಂವಾದದಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಮೂರ್ತಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿ ಮಾಡುವ ಶಕ್ತಿ ಯುವ ಮನಸ್ಸುಗಳಲ್ಲಿದೆ. ನಾನು ಲಂಡನ್‌ನಲ್ಲಿ (2008 ಮತ್ತು 2012ರ ನಡುವೆ) ಎಚ್‌ಎಸ್‌ಬಿಸಿಯ ಮಂಡಳಿಯಲ್ಲಿದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಮಂಡಳಿಯ ಸಭೆಯಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಲಾಗುತ್ತಿತ್ತು. ಭಾರತದ ಹೆಸರನ್ನು ಒಮ್ಮೊಮ್ಮೆ ಮಾತ್ರ ಹೇಳಲಾಗುತ್ತಿತ್ತು. ದುರದೃಷ್ಟವಶಾತ್, ನಂತರ (ಭಾರತಕ್ಕೆ) ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದಿದ್ದರು.

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು (ಯುಪಿಎ ಅವಧಿಯಲ್ಲಿ) ಸ್ಥಗಿತಗೊಂಡಿತ್ತು. ಸೂಕ್ತ ನಿರ್ಧಾರಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಲೇ ಇಲ್ಲ. ಎಲ್ಲವೂ ತಡವಾಗಿಹೋಯಿತು‌” ಎಂದು ಟೀಕಿಸಿದ್ದಾರೆ.

2009ರಲ್ಲಿ ನಾರಾಯಣಮೂರ್ತಿಯವರು ಹೇಳಿದ್ದೇನು?

2009ರಲ್ಲಿ ಔಟ್‌ಲುಕ್ ಪತ್ರಿಕೆಗೆ ನಾರಾಯಣಮೂರ್ತಿಯವರು ಸಂದರ್ಶನ ನೀಡಿದ್ದರು. ಪತ್ರಕರ್ತ ಸುನಿತ್ ಅರೋರ ಅವರು ನಡೆಸಿದ್ದ ಸಂದರ್ಶನ ಅಂದಿನ ಸಾಮಾನ್ಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕಟವಾಗಿತ್ತು. ಅಂದು ನಾರಾಯಣಮೂರ್ತಿಯವರು ಆಡಿರುವ ಮಾತುಗಳನ್ನು ಇಂದು ಟ್ವಿಟರ್‌ನಲ್ಲಿ ಸುನಿತ್ ಹಂಚಿಕೊಂಡಿದ್ದಾರೆ. ಜೊತೆಗೆ ಔಟ್‌ಲುಕ್‌ನಲ್ಲಿ ಅಪಲೋಡ್ ಮಾಡಲಾಗಿರುವ ಸುದ್ದಿಲಿಂಕ್‌ ಕೂಡ ಹಂಚಿಕೊಂಡಿದ್ದಾರೆ.

“2009ರಲ್ಲಿ ಸಮೀಪಿಸುತ್ತಿರುವ ಚುನಾವಣೆಯ ಮಹತ್ವದ ಬಗ್ಗೆ ನಾನು ಮೂರ್ತಿ ಅವರನ್ನು ಕೇಳಿದಾಗ ಅವರು, ಈ ಚುನಾವಣೆಯು ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದು ದೇಶದಲ್ಲಿ ಹತ್ತು ವರ್ಷಗಳ ಅದ್ಭುತ ಆರ್ಥಿಕ ಬೆಳವಣಿಗೆಯ ನಂತರ ನಡೆಯುತ್ತಿದೆ” ಎಂದಿರುವುದಾಗಿ ಸುನಿತ್ ಟ್ವೀಟ್‌ ಮಾಡಿದ್ದಾರೆ.

ನಂತರ ಮೂರ್ತಿ ಅವರು ಮನಮೋಹನ್ ಸಿಂಗ್ ಅವರನ್ನು ಶ್ಲಾಘಿಸಿದ್ದಾರೆ. “ಮನಮೋಹನ್‌ಸಿಂಗ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಅಗತ್ಯವನ್ನು ಮುನ್ನೆಲೆಗೆ ತಂದಿದ್ದಾರೆ. ಆ ಅರ್ಥದಲ್ಲಿ ಇಂದು, ನಮ್ಮ ಅಸಾಮಾನ್ಯ ಆರ್ಥಿಕತೆಯ ಬೆಳವಣಿಗೆಯಿಂದ ದೇಶದ ಪ್ರತಿಯೊಬ್ಬರೂ ಪ್ರಯೋಜನ ಪಡೆದಿಲ್ಲ ಎಂಬ ಅಂಶದ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದಿದ್ದಾರೆ.

ಮೂರ್ತಿಯವರು ಈ ವಿಷಯವನ್ನು ಪುನರುಚ್ಚರಿಸಿದ್ದಾರೆ. “ನನಗೆ ಅಪಾರವಾದ ಗೌರವವಿರುವ ನಮ್ಮ ದೇಶದ ಪ್ರಧಾನಿ ಮೊದಲ ಬಾರಿಗೆ ಸಮಗ್ರ ಬೆಳವಣಿಗೆಯನ್ನು ಸಾಧಿಸುವ ಅಗತ್ಯತೆಯ ಮೇಲೆ ದೇಶದ ಗಮನವನ್ನು ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಇದು ನನಗೆ ತಾಜಾ ವಿಷಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಇತ್ತೀಚಿನ ವರ್ಷಗಳಲ್ಲಿ ಇಬ್ಬರು ಅಸಾಧಾರಣ ಮಹನೀಯರನ್ನು ನಮ್ಮ ಪ್ರಧಾನ ಮಂತ್ರಿಗಳಾಗಿ ಆಯ್ಕೆ ಮಾಡಿದ್ದೇವೆ. ವಾಜಪೇಯಿ ಮತ್ತು ಮನಮೋಹನಸಿಂಗ್‌ ಆ ಮಹನೀಯರಾಗಿದ್ದಾರೆ. ಈ ಇಬ್ಬರನ್ನೂ ಪ್ರಾಮಾಣಿಕರು, ಬುದ್ಧಿವಂತರು, ಸಭ್ಯ ವ್ಯಕ್ತಿಗಳು ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

“…ದೇಶದ ಒಳಿತನ್ನು ಮನಸ್ಸಿನಲ್ಲಿಟ್ಟುಕೊಂಡಿರುವ ಜನರು, ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಉತ್ತರದಾಯಿತ್ವದಲ್ಲಿ ನಂಬಿಕೆಯುಳ್ಳ ಜನರು… ಇಂತಹ ಇನ್ನೂ ಅನೇಕ ನಾಯಕರು ನಮ್ಮಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ನಾರಾಯಣಮೂರ್ತಿ ತಿಳಿಸಿದ್ದಾರೆ.

“ನಮಗೆ ಸುಧಾರಣೆಗಳು ಬೇಕು, ಆದರೆ ನಮಗೆ ಉತ್ತಮ ನಿಯಂತ್ರಣವೂ ಬೇಕು. ಸರ್ಕಾರದ ಕಾರಿಡಾರ್‌ಗಳಲ್ಲಿ ಕಾಯುವ ಬದಲು ನಮ್ಮ ಬೋರ್ಡ್‌ರೂಮ್‌ಗಳಿಂದ ನಮ್ಮ ವ್ಯವಹಾರಗಳನ್ನು ನಡೆಸಲು ನಾವು ಮುಕ್ತರಾಗಿರಬೇಕು. ಆದಾಗ್ಯೂ, ನಮಗೆ ಉತ್ತಮ ನಿಯಂತ್ರಣದ ಅಗತ್ಯವಿದೆ” ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಪೂರ್ಣ ಸಂದರ್ಶನವನ್ನು ‘ಇಲ್ಲಿ’ ಓದಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...