Homeಮುಖಪುಟ2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

- Advertisement -
- Advertisement -

‘ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದರು. ಆದರೆ ಇದೇ ಮೂರ್ತಿಯವರು 2009ರಲ್ಲಿ ಮನಮೋಹನ್ ಸಿಂಗ್ ಹಾಗೂ ದೇಶದ ಅಭಿವೃದ್ಧಿಯ ಕುರಿತು ಆಡಿರುವ ಮಾತುಗಳು ವೈರಲ್ ಆಗಿವೆ.

ಇತ್ತೀಚೆಗೆ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ – ಅಹಮದಾಬಾದ್ (ಐಐಎಂಎ)’ ನಲ್ಲಿ ನಡೆದ ಸಂವಾದದಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಮೂರ್ತಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿ ಮಾಡುವ ಶಕ್ತಿ ಯುವ ಮನಸ್ಸುಗಳಲ್ಲಿದೆ. ನಾನು ಲಂಡನ್‌ನಲ್ಲಿ (2008 ಮತ್ತು 2012ರ ನಡುವೆ) ಎಚ್‌ಎಸ್‌ಬಿಸಿಯ ಮಂಡಳಿಯಲ್ಲಿದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಮಂಡಳಿಯ ಸಭೆಯಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಲಾಗುತ್ತಿತ್ತು. ಭಾರತದ ಹೆಸರನ್ನು ಒಮ್ಮೊಮ್ಮೆ ಮಾತ್ರ ಹೇಳಲಾಗುತ್ತಿತ್ತು. ದುರದೃಷ್ಟವಶಾತ್, ನಂತರ (ಭಾರತಕ್ಕೆ) ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದಿದ್ದರು.

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು (ಯುಪಿಎ ಅವಧಿಯಲ್ಲಿ) ಸ್ಥಗಿತಗೊಂಡಿತ್ತು. ಸೂಕ್ತ ನಿರ್ಧಾರಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಲೇ ಇಲ್ಲ. ಎಲ್ಲವೂ ತಡವಾಗಿಹೋಯಿತು‌” ಎಂದು ಟೀಕಿಸಿದ್ದಾರೆ.

2009ರಲ್ಲಿ ನಾರಾಯಣಮೂರ್ತಿಯವರು ಹೇಳಿದ್ದೇನು?

2009ರಲ್ಲಿ ಔಟ್‌ಲುಕ್ ಪತ್ರಿಕೆಗೆ ನಾರಾಯಣಮೂರ್ತಿಯವರು ಸಂದರ್ಶನ ನೀಡಿದ್ದರು. ಪತ್ರಕರ್ತ ಸುನಿತ್ ಅರೋರ ಅವರು ನಡೆಸಿದ್ದ ಸಂದರ್ಶನ ಅಂದಿನ ಸಾಮಾನ್ಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕಟವಾಗಿತ್ತು. ಅಂದು ನಾರಾಯಣಮೂರ್ತಿಯವರು ಆಡಿರುವ ಮಾತುಗಳನ್ನು ಇಂದು ಟ್ವಿಟರ್‌ನಲ್ಲಿ ಸುನಿತ್ ಹಂಚಿಕೊಂಡಿದ್ದಾರೆ. ಜೊತೆಗೆ ಔಟ್‌ಲುಕ್‌ನಲ್ಲಿ ಅಪಲೋಡ್ ಮಾಡಲಾಗಿರುವ ಸುದ್ದಿಲಿಂಕ್‌ ಕೂಡ ಹಂಚಿಕೊಂಡಿದ್ದಾರೆ.

“2009ರಲ್ಲಿ ಸಮೀಪಿಸುತ್ತಿರುವ ಚುನಾವಣೆಯ ಮಹತ್ವದ ಬಗ್ಗೆ ನಾನು ಮೂರ್ತಿ ಅವರನ್ನು ಕೇಳಿದಾಗ ಅವರು, ಈ ಚುನಾವಣೆಯು ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದು ದೇಶದಲ್ಲಿ ಹತ್ತು ವರ್ಷಗಳ ಅದ್ಭುತ ಆರ್ಥಿಕ ಬೆಳವಣಿಗೆಯ ನಂತರ ನಡೆಯುತ್ತಿದೆ” ಎಂದಿರುವುದಾಗಿ ಸುನಿತ್ ಟ್ವೀಟ್‌ ಮಾಡಿದ್ದಾರೆ.

ನಂತರ ಮೂರ್ತಿ ಅವರು ಮನಮೋಹನ್ ಸಿಂಗ್ ಅವರನ್ನು ಶ್ಲಾಘಿಸಿದ್ದಾರೆ. “ಮನಮೋಹನ್‌ಸಿಂಗ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಅಗತ್ಯವನ್ನು ಮುನ್ನೆಲೆಗೆ ತಂದಿದ್ದಾರೆ. ಆ ಅರ್ಥದಲ್ಲಿ ಇಂದು, ನಮ್ಮ ಅಸಾಮಾನ್ಯ ಆರ್ಥಿಕತೆಯ ಬೆಳವಣಿಗೆಯಿಂದ ದೇಶದ ಪ್ರತಿಯೊಬ್ಬರೂ ಪ್ರಯೋಜನ ಪಡೆದಿಲ್ಲ ಎಂಬ ಅಂಶದ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದಿದ್ದಾರೆ.

ಮೂರ್ತಿಯವರು ಈ ವಿಷಯವನ್ನು ಪುನರುಚ್ಚರಿಸಿದ್ದಾರೆ. “ನನಗೆ ಅಪಾರವಾದ ಗೌರವವಿರುವ ನಮ್ಮ ದೇಶದ ಪ್ರಧಾನಿ ಮೊದಲ ಬಾರಿಗೆ ಸಮಗ್ರ ಬೆಳವಣಿಗೆಯನ್ನು ಸಾಧಿಸುವ ಅಗತ್ಯತೆಯ ಮೇಲೆ ದೇಶದ ಗಮನವನ್ನು ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಇದು ನನಗೆ ತಾಜಾ ವಿಷಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಇತ್ತೀಚಿನ ವರ್ಷಗಳಲ್ಲಿ ಇಬ್ಬರು ಅಸಾಧಾರಣ ಮಹನೀಯರನ್ನು ನಮ್ಮ ಪ್ರಧಾನ ಮಂತ್ರಿಗಳಾಗಿ ಆಯ್ಕೆ ಮಾಡಿದ್ದೇವೆ. ವಾಜಪೇಯಿ ಮತ್ತು ಮನಮೋಹನಸಿಂಗ್‌ ಆ ಮಹನೀಯರಾಗಿದ್ದಾರೆ. ಈ ಇಬ್ಬರನ್ನೂ ಪ್ರಾಮಾಣಿಕರು, ಬುದ್ಧಿವಂತರು, ಸಭ್ಯ ವ್ಯಕ್ತಿಗಳು ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

“…ದೇಶದ ಒಳಿತನ್ನು ಮನಸ್ಸಿನಲ್ಲಿಟ್ಟುಕೊಂಡಿರುವ ಜನರು, ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಉತ್ತರದಾಯಿತ್ವದಲ್ಲಿ ನಂಬಿಕೆಯುಳ್ಳ ಜನರು… ಇಂತಹ ಇನ್ನೂ ಅನೇಕ ನಾಯಕರು ನಮ್ಮಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ನಾರಾಯಣಮೂರ್ತಿ ತಿಳಿಸಿದ್ದಾರೆ.

“ನಮಗೆ ಸುಧಾರಣೆಗಳು ಬೇಕು, ಆದರೆ ನಮಗೆ ಉತ್ತಮ ನಿಯಂತ್ರಣವೂ ಬೇಕು. ಸರ್ಕಾರದ ಕಾರಿಡಾರ್‌ಗಳಲ್ಲಿ ಕಾಯುವ ಬದಲು ನಮ್ಮ ಬೋರ್ಡ್‌ರೂಮ್‌ಗಳಿಂದ ನಮ್ಮ ವ್ಯವಹಾರಗಳನ್ನು ನಡೆಸಲು ನಾವು ಮುಕ್ತರಾಗಿರಬೇಕು. ಆದಾಗ್ಯೂ, ನಮಗೆ ಉತ್ತಮ ನಿಯಂತ್ರಣದ ಅಗತ್ಯವಿದೆ” ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಪೂರ್ಣ ಸಂದರ್ಶನವನ್ನು ‘ಇಲ್ಲಿ’ ಓದಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....