Homeಮುಖಪುಟ2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

- Advertisement -
- Advertisement -

‘ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದರು. ಆದರೆ ಇದೇ ಮೂರ್ತಿಯವರು 2009ರಲ್ಲಿ ಮನಮೋಹನ್ ಸಿಂಗ್ ಹಾಗೂ ದೇಶದ ಅಭಿವೃದ್ಧಿಯ ಕುರಿತು ಆಡಿರುವ ಮಾತುಗಳು ವೈರಲ್ ಆಗಿವೆ.

ಇತ್ತೀಚೆಗೆ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ – ಅಹಮದಾಬಾದ್ (ಐಐಎಂಎ)’ ನಲ್ಲಿ ನಡೆದ ಸಂವಾದದಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಮೂರ್ತಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿ ಮಾಡುವ ಶಕ್ತಿ ಯುವ ಮನಸ್ಸುಗಳಲ್ಲಿದೆ. ನಾನು ಲಂಡನ್‌ನಲ್ಲಿ (2008 ಮತ್ತು 2012ರ ನಡುವೆ) ಎಚ್‌ಎಸ್‌ಬಿಸಿಯ ಮಂಡಳಿಯಲ್ಲಿದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಮಂಡಳಿಯ ಸಭೆಯಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಲಾಗುತ್ತಿತ್ತು. ಭಾರತದ ಹೆಸರನ್ನು ಒಮ್ಮೊಮ್ಮೆ ಮಾತ್ರ ಹೇಳಲಾಗುತ್ತಿತ್ತು. ದುರದೃಷ್ಟವಶಾತ್, ನಂತರ (ಭಾರತಕ್ಕೆ) ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದಿದ್ದರು.

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು (ಯುಪಿಎ ಅವಧಿಯಲ್ಲಿ) ಸ್ಥಗಿತಗೊಂಡಿತ್ತು. ಸೂಕ್ತ ನಿರ್ಧಾರಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಲೇ ಇಲ್ಲ. ಎಲ್ಲವೂ ತಡವಾಗಿಹೋಯಿತು‌” ಎಂದು ಟೀಕಿಸಿದ್ದಾರೆ.

2009ರಲ್ಲಿ ನಾರಾಯಣಮೂರ್ತಿಯವರು ಹೇಳಿದ್ದೇನು?

2009ರಲ್ಲಿ ಔಟ್‌ಲುಕ್ ಪತ್ರಿಕೆಗೆ ನಾರಾಯಣಮೂರ್ತಿಯವರು ಸಂದರ್ಶನ ನೀಡಿದ್ದರು. ಪತ್ರಕರ್ತ ಸುನಿತ್ ಅರೋರ ಅವರು ನಡೆಸಿದ್ದ ಸಂದರ್ಶನ ಅಂದಿನ ಸಾಮಾನ್ಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕಟವಾಗಿತ್ತು. ಅಂದು ನಾರಾಯಣಮೂರ್ತಿಯವರು ಆಡಿರುವ ಮಾತುಗಳನ್ನು ಇಂದು ಟ್ವಿಟರ್‌ನಲ್ಲಿ ಸುನಿತ್ ಹಂಚಿಕೊಂಡಿದ್ದಾರೆ. ಜೊತೆಗೆ ಔಟ್‌ಲುಕ್‌ನಲ್ಲಿ ಅಪಲೋಡ್ ಮಾಡಲಾಗಿರುವ ಸುದ್ದಿಲಿಂಕ್‌ ಕೂಡ ಹಂಚಿಕೊಂಡಿದ್ದಾರೆ.

“2009ರಲ್ಲಿ ಸಮೀಪಿಸುತ್ತಿರುವ ಚುನಾವಣೆಯ ಮಹತ್ವದ ಬಗ್ಗೆ ನಾನು ಮೂರ್ತಿ ಅವರನ್ನು ಕೇಳಿದಾಗ ಅವರು, ಈ ಚುನಾವಣೆಯು ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದು ದೇಶದಲ್ಲಿ ಹತ್ತು ವರ್ಷಗಳ ಅದ್ಭುತ ಆರ್ಥಿಕ ಬೆಳವಣಿಗೆಯ ನಂತರ ನಡೆಯುತ್ತಿದೆ” ಎಂದಿರುವುದಾಗಿ ಸುನಿತ್ ಟ್ವೀಟ್‌ ಮಾಡಿದ್ದಾರೆ.

ನಂತರ ಮೂರ್ತಿ ಅವರು ಮನಮೋಹನ್ ಸಿಂಗ್ ಅವರನ್ನು ಶ್ಲಾಘಿಸಿದ್ದಾರೆ. “ಮನಮೋಹನ್‌ಸಿಂಗ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಅಗತ್ಯವನ್ನು ಮುನ್ನೆಲೆಗೆ ತಂದಿದ್ದಾರೆ. ಆ ಅರ್ಥದಲ್ಲಿ ಇಂದು, ನಮ್ಮ ಅಸಾಮಾನ್ಯ ಆರ್ಥಿಕತೆಯ ಬೆಳವಣಿಗೆಯಿಂದ ದೇಶದ ಪ್ರತಿಯೊಬ್ಬರೂ ಪ್ರಯೋಜನ ಪಡೆದಿಲ್ಲ ಎಂಬ ಅಂಶದ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದಿದ್ದಾರೆ.

ಮೂರ್ತಿಯವರು ಈ ವಿಷಯವನ್ನು ಪುನರುಚ್ಚರಿಸಿದ್ದಾರೆ. “ನನಗೆ ಅಪಾರವಾದ ಗೌರವವಿರುವ ನಮ್ಮ ದೇಶದ ಪ್ರಧಾನಿ ಮೊದಲ ಬಾರಿಗೆ ಸಮಗ್ರ ಬೆಳವಣಿಗೆಯನ್ನು ಸಾಧಿಸುವ ಅಗತ್ಯತೆಯ ಮೇಲೆ ದೇಶದ ಗಮನವನ್ನು ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಇದು ನನಗೆ ತಾಜಾ ವಿಷಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಇತ್ತೀಚಿನ ವರ್ಷಗಳಲ್ಲಿ ಇಬ್ಬರು ಅಸಾಧಾರಣ ಮಹನೀಯರನ್ನು ನಮ್ಮ ಪ್ರಧಾನ ಮಂತ್ರಿಗಳಾಗಿ ಆಯ್ಕೆ ಮಾಡಿದ್ದೇವೆ. ವಾಜಪೇಯಿ ಮತ್ತು ಮನಮೋಹನಸಿಂಗ್‌ ಆ ಮಹನೀಯರಾಗಿದ್ದಾರೆ. ಈ ಇಬ್ಬರನ್ನೂ ಪ್ರಾಮಾಣಿಕರು, ಬುದ್ಧಿವಂತರು, ಸಭ್ಯ ವ್ಯಕ್ತಿಗಳು ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

“…ದೇಶದ ಒಳಿತನ್ನು ಮನಸ್ಸಿನಲ್ಲಿಟ್ಟುಕೊಂಡಿರುವ ಜನರು, ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಉತ್ತರದಾಯಿತ್ವದಲ್ಲಿ ನಂಬಿಕೆಯುಳ್ಳ ಜನರು… ಇಂತಹ ಇನ್ನೂ ಅನೇಕ ನಾಯಕರು ನಮ್ಮಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ನಾರಾಯಣಮೂರ್ತಿ ತಿಳಿಸಿದ್ದಾರೆ.

“ನಮಗೆ ಸುಧಾರಣೆಗಳು ಬೇಕು, ಆದರೆ ನಮಗೆ ಉತ್ತಮ ನಿಯಂತ್ರಣವೂ ಬೇಕು. ಸರ್ಕಾರದ ಕಾರಿಡಾರ್‌ಗಳಲ್ಲಿ ಕಾಯುವ ಬದಲು ನಮ್ಮ ಬೋರ್ಡ್‌ರೂಮ್‌ಗಳಿಂದ ನಮ್ಮ ವ್ಯವಹಾರಗಳನ್ನು ನಡೆಸಲು ನಾವು ಮುಕ್ತರಾಗಿರಬೇಕು. ಆದಾಗ್ಯೂ, ನಮಗೆ ಉತ್ತಮ ನಿಯಂತ್ರಣದ ಅಗತ್ಯವಿದೆ” ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಪೂರ್ಣ ಸಂದರ್ಶನವನ್ನು ‘ಇಲ್ಲಿ’ ಓದಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....