Homeಮುಖಪುಟಮೋದಿಯನ್ನು ಹೊಗಳಿದ ಜಮ್ಮು ಕಾಶ್ಮೀರ ಸಿಎಂ; ವಿಪಕ್ಷಗಳಿಂದ ಭಾರಿ ಟೀಕೆ

ಮೋದಿಯನ್ನು ಹೊಗಳಿದ ಜಮ್ಮು ಕಾಶ್ಮೀರ ಸಿಎಂ; ವಿಪಕ್ಷಗಳಿಂದ ಭಾರಿ ಟೀಕೆ

- Advertisement -
- Advertisement -

ಸೋಮವಾರ ಮಧ್ಯ ಕಾಶ್ಮೀರದ ಸೋನಾಮಾರ್ಗ್‌ನಲ್ಲಿ ಝಡ್-ಮೋರ್ ಸುರಂಗದ ಉದ್ಘಾಟನೆಯ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಕ್ಕಾಗಿ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ರಾಜ್ಯದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಮಾಜಿ ಸಚಿವ, ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜ್ಜದ್ ಗನಿ ಲೋನ್ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಮಟ್ಟು ಅವರು ಟೀಕಿಸಿದ್ದಾರೆ.

“ಅಲ್ಪ ದೂರದೃಷ್ಟಿಯ ರಾಜಕಾರಣಿ ಮತ್ತು ನಿಜವಾದ ರಾಜಕಾರಣಿಯ ನಡುವಿನ ವ್ಯತ್ಯಾಸ. 2003 ರಲ್ಲಿ ಶ್ರೀನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಗಿನ ಬಿಜೆಪಿ ಪ್ರಧಾನಿ ವಾಜಪೇಯಿ ಅವರು ಪಿಡಿಪಿಗೆ ಕೇವಲ 16 ಶಾಸಕರಿದ್ದರೂ ಸಹ, ಮುಫ್ತಿ ಸಾಹಬ್ ಅವರ ಘನತೆಯೊಂದಿಗೆ ಶಾಂತಿ ಎಂಬ ದೃಷ್ಟಿಕೋನದ ಬಗ್ಗೆ ಹೆಚ್ಚು ನಂಬಿಕೆ ವ್ಯಕ್ತಪಡಿಸಿದ್ದರು. ಇಂದು ನಮ್ಮ ಮುಖ್ಯಮಂತ್ರಿ 50 ಶಾಸಕರ ಹೊರತಾಗಿಯೂ, ಆಗಸ್ಟ್ 2019 ರಲ್ಲಿ ಜಮ್ಮು ಕಾಶ್ಮೀರವನ್ನು ವಿಭಜಿಸಿ, ರಾಜ್ಯದ ವಿಶೇಷ ಸ್ಥಾನಮಾನವನ್ನು ಕಸಿದುಕೊಂಡ ದೆಹಲಿ ಸರ್ಕಾರದ ಏಕಪಕ್ಷೀಯ ಕ್ರಮಗಳನ್ನು ಸಮಾಧಾನಪಡಿಸಲು ಮತ್ತು ಸಾಮಾನ್ಯಗೊಳಿಸಲು ಎಲ್ಲವನ್ನೂ ಮಾಡಿದ್ದಾರೆ.” ಎಂದು ಮೆಹಬೂಬಾ ಮುಫ್ತಿ ಎಕ್ಸ್‌ನಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 13 ರಂದು ಪ್ರಧಾನಿ ನರೇಂದ್ರ ಮೋದಿ ಅವರು 6.4 ಕಿ.ಮೀ ಉದ್ದದ ಝಡ್-ಮೋರ್ ಸುರಂಗ ಮಾರ್ಗವನ್ನು ಉದ್ಘಾಟಿಸಿದ ನಂತರ ಸೋನಾಮಾರ್ಗ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ರಾಜ್ಯದಲ್ಲಿನ ಅಂತರವನ್ನು ಕಡಿಮೆ ಮಾಡಲು ಪ್ರಧಾನಿಯವರು ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ್ದರು.

“ಪ್ರದೇಶದಲ್ಲಿ ‘ದಿಲ್ ಕಿ ದೂರಿ’ ಮತ್ತು ‘ದೆಹಲಿ ಕಿ ದೂರಿ’ ಎರಡನ್ನೂ ಕಡಿಮೆ ಮಾಡಲು ಪ್ರಧಾನಿ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಒಮರ್ ಒತ್ತಿ ಹೇಳಿದ್ದಾರೆ. ಜೊತೆಗೆ, ಜಮ್ಮು ಕಾಶ್ಮೀರದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸಿದ್ದಕ್ಕಾಗಿ ಪ್ರಧಾನಿಯವರನ್ನು ಶ್ಲಾಘಿಸಿದ್ದಾರೆ.

“ಜನರು ಮತದಾನದಲ್ಲಿ ತೀವ್ರವಾಗಿ ಭಾಗವಹಿಸಿದರು, ಮತ್ತು ಯಾವುದೇ ರಿಗ್ಗಿಂಗ್ ಅಥವಾ ಚುನಾವಣಾ ಅಕ್ರಮಗಳ ದೂರುಗಳು ಕೇಳಿ ಬಂದಿಲ್ಲ. ಒಂದೇ ಒಂದು ಮತಗಟ್ಟೆಗೂ ಮರು ಮತದಾನದ ಅಗತ್ಯವಿರಲಿಲ್ಲ. ಇದರ ಕೀರ್ತಿ ನಿಮಗೆ, ನಿಮ್ಮ ಸಹಚರರಿಗೆ ಮತ್ತು ಚುನಾವಣಾ ಆಯೋಗಕ್ಕೆ ಸಲ್ಲುತ್ತದೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಇದೇ ವೇಳೆ ಅವರು ಕಠಿಣ ಹವಾಮಾನದ ನಡುವೆಯೂ ಝಡ್-ಮೋರ್ ಸುರಂಗವನ್ನು ಉದ್ಘಾಟಿಸಲು ಬಂದಿದ್ದಕ್ಕಾಗಿ ಅವರು ಪ್ರಧಾನಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಆದಾಗ್ಯೂ, ಮುಖ್ಯಮಂತ್ರಿಯ ಹೇಳಿಕೆ ವಿವಿಧ ರಾಜಕೀಯ ವ್ಯಕ್ತಿಗಳಿಂದ ತೀವ್ರ ಟೀಕೆಗೆ ಗುರಿಯಾದವು. ಮಾಜಿ ಸಚಿವ, ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜ್ಜದ್ ಲೋನ್, “ಇಗೋ ನಮ್ಮ ಸಿಎಂ ಸಾಹಿಬ್, ಪ್ರಧಾನಿ ಸಾಹಿಬ್‌ಗೆ ದಾರಿ ಮಾಡಿಕೊಟ್ಟಿದ್ದಕ್ಕಾಗಿ ಸಂತೋಷದಿಂದ ಕಿವಿಯಿಂದ ಕಿವಿಗೆ ನಗುತ್ತಿದ್ದಾರೆ” ಎಂದು ಎಕ್ಸ್‌ನಲ್ಲಿ ಓಮರ್ ಅಬ್ದುಲ್ಲಾ ಅವರನ್ನು ಅಪಹಾಸ್ಯ ಮಾಡಿದ್ದಾರೆ. ಅವರು ಪ್ರಧಾನಿಯನ್ನು ಹೊಗಳುತ್ತಿರುವ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ.

ಶ್ರೀನಗರದ ಮಾಜಿ ಮೇಯರ್ ಜುನೈದ್ ಮಟ್ಟು ಕೂಡ ಈ ಬಗ್ಗೆ ಪ್ರತಿಕ್ರಿಯಿಸುತ್ತಾ, “ಇಂದು, ಅದೇ ಮೋದಿ ಅವರನ್ನು ಸ್ವಾಗತಿಸುವುದು ಒಮರ್ ಅಬ್ದುಲ್ಲಾಗೆ ಹಲಾಲ್ ಆಗಿ ಮಾರ್ಪಟ್ಟಿದೆ” ಎಂದು ಹೇಳಿದ್ದಾರೆ. ತಾನು ಮೇಯರ್ ಆಗಿದ್ದಾಗ, ಶ್ರೀನಗರದಲ್ಲಿ ಪ್ರಧಾನಿ ಮೋದಿಯನ್ನು ಬರಮಾಡಿಕೊಂಡಾಗ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಅದರ ಬೆಂಬಲಿಗರು ಅವರನ್ನು ಟೀಕಿಸಿದ್ದರು ಎಂದು ಅವರು ನೆನಪಿಸಿಕೊಂಡಿದ್ದಾರೆ.

ಟೀಕೆಗಳಿಗೆ ಪ್ರತಿಕ್ರಿಯೆಯಾಗಿ, ನ್ಯಾಷನಲ್ ಕಾನ್ಫರೆನ್ಸ್ ವಕ್ತಾರ ಇಮ್ರಾನ್ ನಬಿ ದಾರ್ ಅವರು ಮುಖ್ಯಮಂತ್ರಿಯನ್ನು ಸಮರ್ಥಿಸಿಕೊಂಡಿದ್ದು, ವಿಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಜಮ್ಮು ಕಾಶ್ಮೀರದ ರಾಜ್ಯತ್ವವನ್ನು ಪುನಃಸ್ಥಾಪಿಸಲು ಪ್ರಧಾನಿಯನ್ನು ಒತ್ತಾಯಿಸುವುದು ಒಮರ್ ಅವರ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಇದನ್ನೂಓದಿ:  ಕಾಂಗ್ರೆಸ್ ನಾಯಕನೊಂದಿಗಿನ ಪಕ್ಷದ ಶಾಸಕರ ಘರ್ಷಣೆ; ಬಿಆರ್‌ಎಸ್‌ ನಾಯಕ ಕೆಟಿಆರ್ ಗೃಹಬಂಧನ

ಕಾಂಗ್ರೆಸ್ ನಾಯಕನೊಂದಿಗಿನ ಪಕ್ಷದ ಶಾಸಕರ ಘರ್ಷಣೆ; ಬಿಆರ್‌ಎಸ್‌ ನಾಯಕ ಕೆಟಿಆರ್ ಗೃಹಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...