Homeಮುಖಪುಟಅಮಿತ್ ಶಾ ಎಂದರೆ ನನಗೆ ಅಮಿತವಾದ ಗೌರವ: ಪವನ್‌ ಕಲ್ಯಾಣ್‌

ಅಮಿತ್ ಶಾ ಎಂದರೆ ನನಗೆ ಅಮಿತವಾದ ಗೌರವ: ಪವನ್‌ ಕಲ್ಯಾಣ್‌

- Advertisement -
- Advertisement -

ಬಿಜೆಪಿಯ ಅಮಿತ್‌ ಶಾರನ್ನು ಕಂಡರೆ ಆಂಧ್ರದ ವೈಎಸ್‌ಆರ್‌ಪಿ ಪಕ್ಷಕ್ಕೆ ಭಯ. ಆದರೆ ಅಮಿತ್ ಶಾ ಎಂದರೆ ನನಗೆ ಅಮಿತವಾದ ಗೌರವ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಚಿತ್ರನಟ ಪವನ್‌ ಕಲ್ಯಾಣ್ ತಿಳಿಸಿದ್ದಾರೆ.

ಇತ್ತೀಚಿಗೆ ತಿರುಪತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ‘ನನಗೆ ಬಿಜೆಪಿಯೊಂದಿಗೆ ಹೆಚ್ಚಿನ ಭಿನ್ನಾಭಿಪ್ರಾಯಗಳಿಲ್ಲ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡುವುದೊಂದನ್ನು ಬಿಟ್ಟು’ ಎಂದಿದ್ದಾರೆ.

ನಾನು ಯಾವಾಗ ಬಿಜೆಪಿಯಿಂದ ದೂರ ಆದೆ? ಬಿಜೆಪಿಗೆ ಹತ್ತಿರವಾಗಿಯೇ ಇದ್ದೇನೆ. ಅಮಿತ್ ಶಾ ಜೊತೆ ಪ್ರಧಾನಿ ಮೋದಿಯವರನ್ನು ಕಂಡರೆ ನನಗಿಷ್ಟ ಎಂದು ಪವನ್‌ ಕಲ್ಯಾಣ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಜಿವಿಎಲ್‌ ನರಸಿಂಹರಾವ್‌ರವರು ಪವನ್‌ ಕಲ್ಯಾಣ್‌ ಬಿಜೆಪಿ ಬರುವುದಾದರೆ ಸ್ವಾಗತಿಸುತ್ತೇವೆ, ಅವರು ತಮ್ಮ ಜನಸೇನಾ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಬಹುದು ಎಂದು ಬಹಿರಂಗ ಆಹ್ವಾನ ನೀಡಿದ್ದಾರೆ.

ಜನಸೇನಾ ಪಕ್ಷದ ಪವನ್ ಕಲ್ಯಾಣ್ ಇತ್ತೀಚೆಗೆ ನವದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿ ಹೊರಬಂದ ನಂತರ ಅವರು ಬಿಜೆಪಿ ಸೇರಿಲಿದ್ದಾರೆಯೇ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ಸಿನೆಮಾ ರಂಗದಿಂದ ರಾಜಕೀಯಕ್ಕೆ ಬಂದು ಹಲವು ಯುವಜನರಲ್ಲಿ ಹೊಸ ಕನಸುಗಳನ್ನು ಬಿತ್ತಿದ್ದ ತೆಲುಗು ನಟ ತನ್ನ ಅಣ್ಣನ ಹಾದಿಯನ್ನೇ ಹಿಡಿದಂತೆ ಕಾಣಿಸುತ್ತಿದೆ. ಈ ಹಿಂದೆ ತೆಲುಗು ಪವನ್‌ ಕಲ್ಯಾಣ್‌ ಅಣ್ಣ ಮೆಗಾಸ್ಟಾರ್ ಚಿರಂಜೀವಿ ಪ್ರಜಾರಾಜ್ಯ ಎನ್ನುವ ಪಕ್ಷವನ್ನು ಕಟ್ಟಿ ನಂತರ ಕಾಂಗ್ರೆಸ್‌ ಪಕ್ಷದಲ್ಲಿ ವಿಲೀನಗೊಳಿಸಿದ್ದರು.

ಅದೇ ರೀತಿ ಈಗ ಅವರ ಸಹೋದರ ಪವನ್ ಕಲ್ಯಾಣ್ ಜನಸೇನಾ ಪಕ್ಷಕಟ್ಟಿದು ಇತ್ತಿಚಿನ ಇವರ ನಡೆಗಳು ಬಿಜೆಪಿಯಲ್ಲಿ ವಿಲೀನವಾಗುವ ರೀತಿಯಲ್ಲಿ ಕಾಣಿಸುತ್ತಿವೆ ಎಂದು ಹಲವರು ವಿಶ್ಲೇಷಿಸಿದ್ದಾರೆ.

ಈ ವರ್ಷ ನಡೆದ ಆಂಧ್ರ ಪ್ರದೇಶ ವಿಧಾನ ಸಭಾ ಚುನಾವಣೆಯ ಸಮಯದಲ್ಲಿ ಸಿ.ಪಿ.ಐ ಮತ್ತು ಸಿ.ಪಿ.ಎಮ್ ಜೊತೆ ಒಕ್ಕೂಟದಲ್ಲಿ ಪವನ್‌ ಕಲ್ಯಾಣ್‌ರವರ ಜನಸೇನಾ ಕೂಡ ಸೇರಿಕೊಂಡಿತ್ತು.

ಪವನ್ ಕಲ್ಯಾಣ ಮಾತುಗಳಿಗೆ ಪ್ರತಿಕ್ರಿಯಿಸಿರುವ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಪಿ.ಮಧು ಇದು ಅವಕಾಶವಾದಿತನದ ಪರಕಾಷ್ಟೆಯಾಗಿದೆ, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಅಮಿತ್ ಷಾ ಮತ್ತು ಬಿಜೆಪಿ ಪಕ್ಷವನ್ನು ಬೆಂಬಲಿಸುವ ಮೂಲಕ ನಿರುಂಕುಶತ್ವವನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...