Homeಮುಖಪುಟಪ್ರಜ್ವಲ್ ಬಂಧಿಸಿ ಕರೆದೊಯ್ದ ಮಹಿಳಾ ಅಧಿಕಾರಿಗಳು; ಸಂತ್ರಸ್ತೆಯರಿಗೆ ಧೈರ್ಯ ತುಂಬಲು ಮುಂದಾಯಿತಾ ಎಸ್‌ಐಟಿ

ಪ್ರಜ್ವಲ್ ಬಂಧಿಸಿ ಕರೆದೊಯ್ದ ಮಹಿಳಾ ಅಧಿಕಾರಿಗಳು; ಸಂತ್ರಸ್ತೆಯರಿಗೆ ಧೈರ್ಯ ತುಂಬಲು ಮುಂದಾಯಿತಾ ಎಸ್‌ಐಟಿ

- Advertisement -
- Advertisement -

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಗಳಲ್ಲಿ ಸಾರ್ವಜನಿಕರಿಗೆ, ಸಂತ್ರಸ್ತೆಯರಿಗೆ ಬಲವಾದ ಸಂದೇಶವನ್ನು ರವಾನಿಸುವ ಪ್ರಯತ್ನದಲ್ಲಿ, ಕರ್ನಾಟಕ ಪೊಲೀಸರು ಸಾರ್ವಜನಿಕವಾಗಿ ಬೆಂಗಾವಲು ಮಾಡಲು ಮಹಿಳಾ ಪೊಲೀಸರನ್ನು ಮಾತ್ರ ನಿಯೋಜಿಸಿದ್ದಾರೆ.

ಮೇ 31ರ ಮುಂಜಾನೆ ವಿಶೇಷ ತನಿಖಾ ದಳದ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಐವರು ಮಹಿಳಾ ಪೊಲೀಸ್ ಅಧಿಕಾರಿಗಳು, ಪ್ರಜ್ವಲ್‌ನನ್ನು ವಿಮಾನ ನಿಲ್ದಾಣದಿಂದ ಹೊರಗೆ ಕರೆದೊಯ್ದರು. ಈ ಕ್ರಮವು ಸರ್ಕಾರದ ಗಂಭೀರತೆಯನ್ನು ಪ್ರದರ್ಶಿಸುವ ಜತೆಗೆ, ಸಂತ್ರಸ್ತರಿಗೆ ಧೈರ್ಯ ತುಂಬುವ ಸಂದೇಶವಾಗಿದೆ.

ಲೈಂಗಿಕ ದೌರ್ಜನ್ಯದ ಆರೋಪದ ನಂತರ ಏಪ್ರಿಲ್ 26 ರಂದು ದೇಶದಿಂದ ಪರಾರಿಯಾಗಿದ್ದ ಪ್ರಜ್ವಲ್ ಅವರನ್ನು ವಲಸೆ ಅಧಿಕಾರಿಗಳು ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳು ಮೇ 31 ರ ಶುಕ್ರವಾರ ಬೆಳಿಗ್ಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹಸ್ತಾಂತರಿಸಿದ್ದರು.

ಮಾಜಿ ಪ್ರಧಾನಿ ಮತ್ತು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತದೆ. ಈ ಎರಡೂ ಸಂದರ್ಭಗಳಲ್ಲಿ, ಮಹಿಳಾ ಪೊಲೀಸ್ ಅಧಿಕಾರಿಗಳು ಅವರೊಂದಿಗೆ ಹೋಗುತ್ತಾರೆ.

ಬಂಧನದ ನಂತರ ಹಾಸನ ಸಂಸದರನ್ನು ಅರಮನೆ ರಸ್ತೆಯಲ್ಲಿರುವ ಕಾರ್ಲ್ಟನ್ ಹೌಸ್‌ನಲ್ಲಿರುವ ಸಿಐಡಿ ಕೇಂದ್ರ ಕಚೇರಿಗೆ ಕರೆದೊಯ್ಯಲಾಯಿತು. ಮೂಲಗಳ ಪ್ರಕಾರ, ಪ್ರಜ್ವಲ್ ಅವರು ಪ್ರಧಾನ ಕಚೇರಿಯ ವಿಶೇಷ ಸೆಲ್‌ನಲ್ಲಿ ಇರಿಸಬೇಕೆಂದು ಒತ್ತಾಯಿಸಿದರು, ಸಂಸದರಾಗಿ ಅವರ ಸವಲತ್ತುಗಳನ್ನು ಉಲ್ಲೇಖಿಸಿದರು. ಆದರೆ, ಪೊಲೀಸರು ಅವರ ಮನವಿಯನ್ನು ನಿರಾಕರಿಸಿದ್ದು, ಯಾವುದೇ ಹೆಚ್ಚುವರಿ ಸೌಕರ್ಯಗಳಿಲ್ಲದೆ ಸಾಮಾನ್ಯ ಸೆಲ್‌ನಲ್ಲಿ ಇರಿಸಿದರು ಎನ್ನಲಾಗಿದೆ.

ಇದಲ್ಲದೆ, ಅವರ ಹಳೆಯ ಇನ್ನೋವಾ ಕಾರಿನ ಬದಲಿಗೆ ಪೊಲೀಸರು ಪ್ರಜ್ವಲ್ ಅವರನ್ನು ತಮ್ಮ ಬೊಲೆರೊ ವಾಹನಗಳಲ್ಲಿ ಮಾತ್ರ ಬೆಂಗಾವಲು ಮಾಡಲು ನಿರ್ಧರಿಸಿದ್ದಾರೆ. ಆರೋಪಿಗೆ ಯಾವುದೇ ಸವಲತ್ತು ಸಿಗುವುದಿಲ್ಲ ಎಂದು ಸಾಂಕೇತಿಕವಾಗಿ ಇದು ಸೂಚಿಸುತ್ತದೆ.

ಎಸ್‌ಐಟಿಯಿಂದ ಸಾರ್ವಜನಿಕವಾಗಿ ಬೆಂಗಾವಲು ಪಡೆಯುವಾಗ ಪ್ರಜ್ವಲ್‌ಗೆ ಮುಖ ಮುಚ್ಚಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಪ್ರಜ್ವಲ್ ಬಂಧನದಲ್ಲಿದ್ದಾಗ ಯಾವುದೇ ವಿಶೇಷ ಸವಲತ್ತು ಪಡೆಯುವುದಿಲ್ಲ ಎಂಬ ಸಂದೇಶವನ್ನು ಕಳುಹಿಸುವ ಜತೆಗೆ, ಪೊಲೀಸರು ಈ ಕ್ರಮವು ಬಲಿಪಶುಗಳು ಒಗ್ಗಟ್ಟಾಗಬೇಕು ಎಂಬ ಉದ್ದೇಶವನ್ನು ಹೊಂದಿದೆ ಎನ್ನಲಾಗಿದೆ.

ಪ್ರಜ್ವಲ್ ಮೇಲೆ ಮೂವರು ಮಹಿಳೆಯರ ಮೇಲೆ ಅತ್ಯಾಚಾರ, ಇನ್ನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ಮತ್ತು 70 ಕ್ಕೂ ಹೆಚ್ಚು ಮಹಿಳೆಯರೊಂದಿಗೆ ಲೈಂಗಿಕ ಕ್ರಿಯೆಗಳನ್ನು ವೀಡಿಯೊ ಮಾಡಿದ ಆರೋಪವಿದೆ. ಇಂತಹ ಕೃತ್ಯಗಳ ಸುಮಾರು 3,000 ವೀಡಿಯೋಗಳನ್ನು ಅವರು ರೆಕಾರ್ಡ್ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಪ್ರಜ್ವಲ್ ಮರು ಆಯ್ಕೆ ಬಯಸುತ್ತಿರುವ ಹಾಸನ ಸಂಸದ ಸ್ಥಾನಕ್ಕೆ ಚುನಾವಣೆಗೆ ಕೆಲವೇ ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಕೆಲವು ವೀಡಿಯೊಗಳು ಪ್ರಸಾರವಾಗಿವೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....