Homeಕರ್ನಾಟಕಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ (ಮೇ 3) ಸಿಎಂಗೆ ಪತ್ರ ಬರೆದಿರುವ ರಾಹುಲ್ ಗಾಂಧಿ, “ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ನಮ್ಮ ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು” ಎಂದಿದ್ದಾರೆ.

“ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್​​ ಶಾ ವಿರುದ್ದ ಕಿಡಿಕಾರಿರುವ ರಾಹುಲ್ ಗಾಂಧಿ “ಈ ಬಗ್ಗೆ ಕೇಂದ್ರ ಸಚಿವ ಅಮಿತ್​​ ಶಾ ಅವರಿಗೆ ಮೊದಲೇ ದೇವರಾಜೇಗೌಡ ಮಾಹಿತಿ ನೀಡಿದ್ದಾರೆ. ಆದರೂ ಪ್ರಜ್ವಲ್‌ಗೆ ಟಿಕೆಟ್​​​ ನೀಡಿರುವುದು ಆಘಾತದ ವಿಷಯ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ, ಅವರು ಪ್ರಜ್ವಲ್ ಪರವಾಗಿ ಪ್ರಚಾರ ಮಾಡಿದ್ದು ಆಘಾತಕಾರಿ ಬೆಳವಣಿಗೆ” ಎಂದು ಹೇಳಿದ್ದಾರೆ.

“ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವವರ ವಿರುದ್ದ ತುಟಿ ಬಿಚ್ಚದಿರುವ ಇಂತಹ ಹಿರಿಯ ರಾಜಕಾರಣಿಯನ್ನು ನನ್ನ ಎರಡು ದಶಕಗಳ ಸಾರ್ವಜನಿಕ ಜೀವನದಲ್ಲಿ ಯಾವತ್ತೂ ನೋಡಿಲ್ಲ” ಎಂದಿದ್ದಾರೆ

“ಪ್ರಜ್ವಲ್​​​ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ. ಪ್ರಧಾನಿ ಮೋದಿ ಅವರು ಹರಿಯಾಣ ಮಹಿಳಾ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ಇದು ಮೋದಿ ಪರಿವಾರದ ಸದಸ್ಯರ ಪ್ರಕರಣ” ಎಂದು ರಾಹುಲ್ ಟೀಕಿಸಿದ್ದಾರೆ.

“ಪ್ರಜ್ವಲ್ ವಿರುದ್ದದ ಆರೋಪಗಳ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷಾ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಆರೋಪಿಯ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಪ್ರಧಾನಿಗೆ ಪತ್ರವನ್ನೂ ಬರೆದಿದ್ದೇನೆ. ಪಾಸ್‌ಪೋರ್ಟ್ ರದ್ದುಗೊಳಿಸಿ ಆದಷ್ಟು ಬೇಗ ಆರೋಪಿಯನ್ನು ವಶಕ್ಕೆ ಪಡೆಯಬೇಕಿದೆ” ಎಂದಿದ್ದಾರೆ

“ಸಂತ್ರಸ್ತೆಯರಿಗೆ ಅಗತ್ಯವಿರುವ ಎಲ್ಲಾ ರೀತಿಯ ಬೆಂಬಲ ನೀಡುವಂತೆ ನಾನು ನಿಮ್ಮಲ್ಲಿ ಮನವಿ ಮಾಡುತ್ತಿದ್ದೇನೆ. ಅವರಿಗೆ ಅನ್ಯಾಯದ ವಿರುದ್ದ ಹೋರಾಡಲು ನಮ್ಮ ಬೆಂಬಲ ಬೇಕಿದೆ. ಈ ದುಷ್ಕೃತ್ಯದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರನ್ನೂ ಕಾನೂನಡಿ ತರಬೇಕಿದೆ” ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಹೇಳಿದ್ದಾರೆ.

ಸಂತ್ರಸ್ತರ ರಕ್ಷಣೆಗೆ ಸರ್ಕಾರ ಸಿದ್ದ : ಸಿಎಂ

ರಾಹುಲ್ ಗಾಂಧಿಯ ಪತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಿಎಂ, “ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ : ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...