Homeಕರ್ನಾಟಕಭಾರತಕ್ಕೆ ಬರುವ ಮೊದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಭಾರತಕ್ಕೆ ಬರುವ ಮೊದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಇತ್ತೀಚೆಗೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯಲ್ಲಿ ಮೇ.31ರಂದು ಭಾರತಕ್ಕೆ ಬರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ   ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಹಾಸನದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಆಗಿತ್ತು. ಎಪ್ರಿಲ್ 26ರಂದು ನಡೆದ ಎರಡನೇ ಹಂತದ ಚುನಾವಣೆಯ ನಂತರ ಪ್ರಜ್ವಲ್ ಅವರು ದೇಶವನ್ನು ತೊರೆದಿದ್ದರು. ಈ ಕುರಿತ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರವು ಎಸ್‌ಐಟಿಯನ್ನು ರಚಿಸಿತ್ತು. ಬಳಿಕ ಪ್ರಜ್ವಲ್‌ ಪತ್ತೆಗೆ ಲುಕ್‌ ಔಟ್‌ ನೊಟೀಸ್‌ ಮತ್ತು ರೆಡ್‌ ಕಾರ್ನರ್‌ ನೊಟೀಸ್‌ ಜಾರಿ ಮಾಡಲಾಗಿತ್ತು. ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ನ್ನು ಹಿಂಪಡೆಯಲು ವಿನಂತಿಯೊಂದಿಗೆ ಕೇಂದ್ರ ಸರಕಾರವನ್ನು ಕೂಡ ಸಂಪರ್ಕಿಸಲಾಗಿತ್ತು.

ನಾಪತ್ತೆಯಾದ ಒಂದು ತಿಂಗಳ ನಂತರ, ಪ್ರಜ್ವಲ್ ಸೋಮವಾರದಂದು ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ತಾನು ತನಿಖೆಗೆ ಸಹಕರಿಸುತ್ತೇನೆ ಮತ್ತು ಮೇ 31ರಂದು ಬೆಳಿಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗುತ್ತೇನೆ. ನನಗೆ ನ್ಯಾಯಾಂಗದ ಮೇಲೆ ನಂಬಿಕೆಯಿದ್ದು, ನ್ಯಾಯಾಲಯದ ಮೂಲಕ ಸುಳ್ಳು ಪ್ರಕರಣಗಳಿಂದ ಮುಕ್ತಿ ಹೊಂದುವ ವಿಶ್ವಾಸವಿದೆ ಎಂದು ಹೇಳಿದ್ದರು.

ಇದರ ಬೆನ್ನಲ್ಲಿ ಮೇ 30ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ಪ್ರಜ್ವಲ್‌ ಹೆಸರಿನಲ್ಲಿ ವಿಮಾನ ಟಿಕೆಟ್ ಬುಕ್‌ ಆಗಿದೆ. ಪ್ರಜ್ವಲ್ ವಿರುದ್ಧ ಈಗಾಗಲೇ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದ್ದು,  ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಬಹುದಾಗಿದೆ.

ಪ್ರಜ್ವಲ್ ರೇವಣ್ಣ ವಾಪಸ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪ್ರಜ್ವಲ್ ವಿರುದ್ಧ ವಾರಂಟ್ ಜಾರಿಯಾಗಿರುವುದರಿಂದ ಬಂಧಿಸಬೇಕಾಗುತ್ತದೆ. ಇದಕ್ಕೆ ಎಸ್ಐಟಿಯವರು ಬೇಕಿದ್ದ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ತಪ್ಪಿತಸ್ಥರ ಬಂಧನದ ವಿಚಾರ ಬಂದಾಗ ಪಕ್ಷ ಎಂಬುದು ಗಣನೆಗೆ ಬರುವುದಿಲ್ಲ.‌ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತಹವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಡಿಯೋ ವೈರಲ್‌ ಬೆನ್ನಲ್ಲಿ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಅಪ್ಪ-ಮಗನ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.

ಇದನ್ನು ಓದಿ: ಲೈಂಗಿಕ ದೌರ್ಜನ್ಯ: ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾದ ಪ್ರಜ್ವಲ್‌ ರೇವಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...