Homeಕರ್ನಾಟಕಭಾರತಕ್ಕೆ ಬರುವ ಮೊದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಭಾರತಕ್ಕೆ ಬರುವ ಮೊದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಇತ್ತೀಚೆಗೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯಲ್ಲಿ ಮೇ.31ರಂದು ಭಾರತಕ್ಕೆ ಬರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ   ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಹಾಸನದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಆಗಿತ್ತು. ಎಪ್ರಿಲ್ 26ರಂದು ನಡೆದ ಎರಡನೇ ಹಂತದ ಚುನಾವಣೆಯ ನಂತರ ಪ್ರಜ್ವಲ್ ಅವರು ದೇಶವನ್ನು ತೊರೆದಿದ್ದರು. ಈ ಕುರಿತ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರವು ಎಸ್‌ಐಟಿಯನ್ನು ರಚಿಸಿತ್ತು. ಬಳಿಕ ಪ್ರಜ್ವಲ್‌ ಪತ್ತೆಗೆ ಲುಕ್‌ ಔಟ್‌ ನೊಟೀಸ್‌ ಮತ್ತು ರೆಡ್‌ ಕಾರ್ನರ್‌ ನೊಟೀಸ್‌ ಜಾರಿ ಮಾಡಲಾಗಿತ್ತು. ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ನ್ನು ಹಿಂಪಡೆಯಲು ವಿನಂತಿಯೊಂದಿಗೆ ಕೇಂದ್ರ ಸರಕಾರವನ್ನು ಕೂಡ ಸಂಪರ್ಕಿಸಲಾಗಿತ್ತು.

ನಾಪತ್ತೆಯಾದ ಒಂದು ತಿಂಗಳ ನಂತರ, ಪ್ರಜ್ವಲ್ ಸೋಮವಾರದಂದು ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ತಾನು ತನಿಖೆಗೆ ಸಹಕರಿಸುತ್ತೇನೆ ಮತ್ತು ಮೇ 31ರಂದು ಬೆಳಿಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗುತ್ತೇನೆ. ನನಗೆ ನ್ಯಾಯಾಂಗದ ಮೇಲೆ ನಂಬಿಕೆಯಿದ್ದು, ನ್ಯಾಯಾಲಯದ ಮೂಲಕ ಸುಳ್ಳು ಪ್ರಕರಣಗಳಿಂದ ಮುಕ್ತಿ ಹೊಂದುವ ವಿಶ್ವಾಸವಿದೆ ಎಂದು ಹೇಳಿದ್ದರು.

ಇದರ ಬೆನ್ನಲ್ಲಿ ಮೇ 30ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ಪ್ರಜ್ವಲ್‌ ಹೆಸರಿನಲ್ಲಿ ವಿಮಾನ ಟಿಕೆಟ್ ಬುಕ್‌ ಆಗಿದೆ. ಪ್ರಜ್ವಲ್ ವಿರುದ್ಧ ಈಗಾಗಲೇ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದ್ದು,  ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಬಹುದಾಗಿದೆ.

ಪ್ರಜ್ವಲ್ ರೇವಣ್ಣ ವಾಪಸ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪ್ರಜ್ವಲ್ ವಿರುದ್ಧ ವಾರಂಟ್ ಜಾರಿಯಾಗಿರುವುದರಿಂದ ಬಂಧಿಸಬೇಕಾಗುತ್ತದೆ. ಇದಕ್ಕೆ ಎಸ್ಐಟಿಯವರು ಬೇಕಿದ್ದ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ತಪ್ಪಿತಸ್ಥರ ಬಂಧನದ ವಿಚಾರ ಬಂದಾಗ ಪಕ್ಷ ಎಂಬುದು ಗಣನೆಗೆ ಬರುವುದಿಲ್ಲ.‌ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತಹವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಡಿಯೋ ವೈರಲ್‌ ಬೆನ್ನಲ್ಲಿ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಅಪ್ಪ-ಮಗನ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.

ಇದನ್ನು ಓದಿ: ಲೈಂಗಿಕ ದೌರ್ಜನ್ಯ: ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾದ ಪ್ರಜ್ವಲ್‌ ರೇವಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...