Homeಮುಖಪುಟಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

- Advertisement -
- Advertisement -

ಹಾಸನ ಸಂಸದ, 2024ರ ಲೋಕಸಭಾ ಚುನಾವಣೆ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣದಿಂದ ದೇವೇಗೌಡರ ಕುಟುಂಬ ಮುಜುಗರ ಅನುಭವಿಸುತ್ತಿದ್ದು, ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯೊಬ್ಬರು ಇಂದು ಮಹಿಳಾ ಆಯೋಗಕ್ಕೆ ಮೊದಲ ದೂರು ನೀಡಿದ್ದಾರೆ.

ಶನಿವಾರ ಸಂತ್ರಸ್ತೆಯೊಬ್ಬರು ಪೋನ್ ಕಾಲ್ ಮೂಲಕ ಆಯೋಗಕ್ಕೆ ದೂರು ನೀಡಿದ್ದರು; ಇಂದು ಮತ್ತೋರ್ವ ಮಹಿಳೆ ವಾಟ್ಸಾಪ್ ಮೂಲಕ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಜೆಡಿಎಸ್ ರಾಜ್ಯಾಧ್ಯಕ್ಷ, ಪ್ರಜ್ವಲ್ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು, ತನಿಖೆಯಾಗಲಿ’ ಎಂದು ಹೇಳುವ ಮೂಲಕ, ತಮ್ಮ ಅಣ್ಣನ ಪುತ್ರನಿಂದ ಅಂತರ ಕಾಯ್ದುಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೌರ್ಜನ್ಯ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ವಿಶೇಷ ತನಿಖಾ ತಂಡದ ಮೂಲಕ ಪ್ರಕರಣದ ತನಿಖೆಗೆ ನಡೆಸುವಂತೆ ಮನವಿ ಮಾಡಿತ್ತು. ಈ ಪತ್ರದ ಮೇರೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಐಟಿ ತಂಡ ರಚನೆಗೆ ತೀರ್ಮಾನಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿ ಬಿಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದೆ. ಈಗಾಗಲೇ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದ್ದು, ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಐಟಿ ರಚನೆಯಾಗುವ ಸುದ್ದಿ ಖಚಿತವಾಗುತ್ತಿದ್ದಂತೆಯೇ ಬಂಧನದ ಬೀತಿಯಲ್ಲಿ‌ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನ್‌ ದೇಶಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಇದೇ ಪ್ರಜ್ವಲ್​ ಅಶ್ಲೀಲ ವಿಡಿಯೋ ವೈರಲ್​ಗೆ ಸಂಬಂಧಿಸಿದಂತೆ ಜೆಡಿಎಸ್​ ಚುನಾವಣಾ ಏಜೆಂಟ್ ಹಾಸನದ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ: ಎಚ್‌ಡಿಕೆ

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಜೆಡಿಎಸ್ ಮುಖ್ಯಸ್ಥ ಎಚ್‌ಡಿ ದೇವೇಗೌಡರ ಮೊಮ್ಮಗ ಜರ್ಮನಿಗೆ ಪಲಾಯನ ಮಾಡಿದ್ದಾರೆ ಎಂಬ ಊಹಾಪೋಹಗಳ ನಡುವೆ ಪಕ್ಷವು ಅವರಿಂದ ದೂರ ಸರಿದಿದೆ. ಜೆಡಿಎಸ್ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಜ್ವಲ್ ಅವರ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ‘ಪ್ರಜ್ವಲ್ ಬೇರೆ ದೇಶಕ್ಕೆ ಹೋಗಿದ್ದರೆ, ವೀಡಿಯೊಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ ಅವರನ್ನು ಮರಳಿ ಕರೆತರುತ್ತದೆ, ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ’ ಎಂದು ಹೇಳಿದರು.

“ನಾನೇ ಆಗಲಿ, ಎಚ್.ಡಿ.ದೇವೇಗೌಡರಾಗಲಿ ನಾವು ಮಹಿಳೆಯರಿಗೆ ಗೌರವ ಕೊಡುತ್ತೇವೆ; ಮಹಿಳೆಯರು ತಮ್ಮ ದೂರುಗಳೊಂದಿಗೆ ಬಂದಾಗಲೆಲ್ಲಾ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಈಗಾಗಲೇ ಸಿಎಂ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ಎಸ್‌ಐಟಿ ತನಿಖೆ ಆರಂಭವಾಗಿದೆ… ಎಸ್‌ಐಟಿ ತಂಡ ಅವರನ್ನು ವಿದೇಶದಿಂದ ಕರೆತರಬೇಕು” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ:

ಏಪ್ರಿಲ್ 26 ರಂದು ನಡೆದ ಹಾಸನದಲ್ಲಿ ಚುನಾವಣೆಗೆ ಎರಡು ದಿನಗಳ ಮೊದಲು ವೀಡಿಯೊಗಳು ಬೆಳಕಿಗೆ ಬಂದವು. ಏಪ್ರಿಲ್ 25 ರಂದು ಮಹಿಳಾ ಆಯೋಗದ ಅಧ್ಯಕ್ಷರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಕ್ಷೇಪಾರ್ಹ ವೀಡಿಯೊಗಳ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದರು. ಜೆಡಿಎಸ್‌ನವರು ಇದು ‘ಮಾರ್ಫ್ಡ್’ ವಿಡಿಯೋ ಎಂದು ಕರೆದಿದ್ದು, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಎಪ್ರಿಲ್ 27 ರಂದು ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಘೋಷಿಸಿದ್ದಾರೆ. “ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿದೆ. ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವಂತೆ ಕಾಣುವ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿವೆ” ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಎಸ್‌ಐಟಿ ಘೋಷಣೆಗೂ ಮುನ್ನ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಅವರ ಪಕ್ಷವು ಈ ಬಗ್ಗೆ ಇನ್ನೂ ಏನನ್ನೂ ಖಚಿತಪಡಿಸದಿದ್ದರೂ, ಊಹಾಪೋಹವನ್ನು ತಳ್ಳಿಹಾಕಿಲ್ಲ.

ಬಿಜೆಪಿ ಕೂಡ ಮಿತ್ರಪಕ್ಷದ ಸಂಸದರನ್ನು ಮೇಲಿನ ವಿವಾದದಿಂದ ಅಂತರ ಕಾಯ್ದುಕೊಂಡಿದ್ದು, ವಿಡಿಯೋ ಟೇಪ್ ಅಥವಾ ಎಸ್‌ಐಟಿ ರಚನೆಯ ಬಗ್ಗೆ ತನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಹೇಳಿದೆ. ಪ್ರಜ್ವಲ್ ರೇವಣ್ಣ ಅವರು ದೇಶದಿಂದ ಹೊರಗಿದ್ದಾರೆ ಎಂದು ನಂಬಲಾಗಿದ್ದರೂ, ಅವರ ಪೋಲಿಂಗ್ ಏಜೆಂಟ್ ವೀಡಿಯೊಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಅದು ಮಾರ್ಫ್ ಮಾಡಿದ ವೀಡಿಯೊಗಳು ಎಂದು ಹೇಳಿದ್ದಾರೆ.

33 ವರ್ಷದ ಪ್ರಜ್ವಲ್ ಅವರು 2019 ರಲ್ಲಿ ಮೊದಲ ಬಾರಿಗೆ ತಮ್ಮ ಕ್ಷೇತ್ರ ಹಾಸನದಿಂದ ಚುನಾವಣೆಗೆ ಸ್ಪರ್ಧಿಸಿದರು. ಎಚ್‌ಡಿ ದೇವೇಗೌಡ ಅವರು 2004 ರಿಂದ 2019 ರವರೆಗೆ ಕ್ಷೇತ್ರವನ್ನು ಹೊಂದಿದ್ದರು.

ಇದನ್ನೂ ಓದಿ; ಮೋದಿ ತನ್ನ ‘ಉದ್ಯಮಿ ಮಿತ್ರರಿ’ಗಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...