Homeಮುಖಪುಟಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

- Advertisement -
- Advertisement -

ಹಾಸನ ಸಂಸದ, 2024ರ ಲೋಕಸಭಾ ಚುನಾವಣೆ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣದಿಂದ ದೇವೇಗೌಡರ ಕುಟುಂಬ ಮುಜುಗರ ಅನುಭವಿಸುತ್ತಿದ್ದು, ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯೊಬ್ಬರು ಇಂದು ಮಹಿಳಾ ಆಯೋಗಕ್ಕೆ ಮೊದಲ ದೂರು ನೀಡಿದ್ದಾರೆ.

ಶನಿವಾರ ಸಂತ್ರಸ್ತೆಯೊಬ್ಬರು ಪೋನ್ ಕಾಲ್ ಮೂಲಕ ಆಯೋಗಕ್ಕೆ ದೂರು ನೀಡಿದ್ದರು; ಇಂದು ಮತ್ತೋರ್ವ ಮಹಿಳೆ ವಾಟ್ಸಾಪ್ ಮೂಲಕ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಜೆಡಿಎಸ್ ರಾಜ್ಯಾಧ್ಯಕ್ಷ, ಪ್ರಜ್ವಲ್ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು, ತನಿಖೆಯಾಗಲಿ’ ಎಂದು ಹೇಳುವ ಮೂಲಕ, ತಮ್ಮ ಅಣ್ಣನ ಪುತ್ರನಿಂದ ಅಂತರ ಕಾಯ್ದುಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೌರ್ಜನ್ಯ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ವಿಶೇಷ ತನಿಖಾ ತಂಡದ ಮೂಲಕ ಪ್ರಕರಣದ ತನಿಖೆಗೆ ನಡೆಸುವಂತೆ ಮನವಿ ಮಾಡಿತ್ತು. ಈ ಪತ್ರದ ಮೇರೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಐಟಿ ತಂಡ ರಚನೆಗೆ ತೀರ್ಮಾನಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿ ಬಿಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದೆ. ಈಗಾಗಲೇ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದ್ದು, ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಐಟಿ ರಚನೆಯಾಗುವ ಸುದ್ದಿ ಖಚಿತವಾಗುತ್ತಿದ್ದಂತೆಯೇ ಬಂಧನದ ಬೀತಿಯಲ್ಲಿ‌ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನ್‌ ದೇಶಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಇದೇ ಪ್ರಜ್ವಲ್​ ಅಶ್ಲೀಲ ವಿಡಿಯೋ ವೈರಲ್​ಗೆ ಸಂಬಂಧಿಸಿದಂತೆ ಜೆಡಿಎಸ್​ ಚುನಾವಣಾ ಏಜೆಂಟ್ ಹಾಸನದ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ: ಎಚ್‌ಡಿಕೆ

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಜೆಡಿಎಸ್ ಮುಖ್ಯಸ್ಥ ಎಚ್‌ಡಿ ದೇವೇಗೌಡರ ಮೊಮ್ಮಗ ಜರ್ಮನಿಗೆ ಪಲಾಯನ ಮಾಡಿದ್ದಾರೆ ಎಂಬ ಊಹಾಪೋಹಗಳ ನಡುವೆ ಪಕ್ಷವು ಅವರಿಂದ ದೂರ ಸರಿದಿದೆ. ಜೆಡಿಎಸ್ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಜ್ವಲ್ ಅವರ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ‘ಪ್ರಜ್ವಲ್ ಬೇರೆ ದೇಶಕ್ಕೆ ಹೋಗಿದ್ದರೆ, ವೀಡಿಯೊಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ ಅವರನ್ನು ಮರಳಿ ಕರೆತರುತ್ತದೆ, ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ’ ಎಂದು ಹೇಳಿದರು.

“ನಾನೇ ಆಗಲಿ, ಎಚ್.ಡಿ.ದೇವೇಗೌಡರಾಗಲಿ ನಾವು ಮಹಿಳೆಯರಿಗೆ ಗೌರವ ಕೊಡುತ್ತೇವೆ; ಮಹಿಳೆಯರು ತಮ್ಮ ದೂರುಗಳೊಂದಿಗೆ ಬಂದಾಗಲೆಲ್ಲಾ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಈಗಾಗಲೇ ಸಿಎಂ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ಎಸ್‌ಐಟಿ ತನಿಖೆ ಆರಂಭವಾಗಿದೆ… ಎಸ್‌ಐಟಿ ತಂಡ ಅವರನ್ನು ವಿದೇಶದಿಂದ ಕರೆತರಬೇಕು” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ:

ಏಪ್ರಿಲ್ 26 ರಂದು ನಡೆದ ಹಾಸನದಲ್ಲಿ ಚುನಾವಣೆಗೆ ಎರಡು ದಿನಗಳ ಮೊದಲು ವೀಡಿಯೊಗಳು ಬೆಳಕಿಗೆ ಬಂದವು. ಏಪ್ರಿಲ್ 25 ರಂದು ಮಹಿಳಾ ಆಯೋಗದ ಅಧ್ಯಕ್ಷರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಕ್ಷೇಪಾರ್ಹ ವೀಡಿಯೊಗಳ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದರು. ಜೆಡಿಎಸ್‌ನವರು ಇದು ‘ಮಾರ್ಫ್ಡ್’ ವಿಡಿಯೋ ಎಂದು ಕರೆದಿದ್ದು, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಎಪ್ರಿಲ್ 27 ರಂದು ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಘೋಷಿಸಿದ್ದಾರೆ. “ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿದೆ. ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವಂತೆ ಕಾಣುವ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿವೆ” ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಎಸ್‌ಐಟಿ ಘೋಷಣೆಗೂ ಮುನ್ನ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಅವರ ಪಕ್ಷವು ಈ ಬಗ್ಗೆ ಇನ್ನೂ ಏನನ್ನೂ ಖಚಿತಪಡಿಸದಿದ್ದರೂ, ಊಹಾಪೋಹವನ್ನು ತಳ್ಳಿಹಾಕಿಲ್ಲ.

ಬಿಜೆಪಿ ಕೂಡ ಮಿತ್ರಪಕ್ಷದ ಸಂಸದರನ್ನು ಮೇಲಿನ ವಿವಾದದಿಂದ ಅಂತರ ಕಾಯ್ದುಕೊಂಡಿದ್ದು, ವಿಡಿಯೋ ಟೇಪ್ ಅಥವಾ ಎಸ್‌ಐಟಿ ರಚನೆಯ ಬಗ್ಗೆ ತನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಹೇಳಿದೆ. ಪ್ರಜ್ವಲ್ ರೇವಣ್ಣ ಅವರು ದೇಶದಿಂದ ಹೊರಗಿದ್ದಾರೆ ಎಂದು ನಂಬಲಾಗಿದ್ದರೂ, ಅವರ ಪೋಲಿಂಗ್ ಏಜೆಂಟ್ ವೀಡಿಯೊಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಅದು ಮಾರ್ಫ್ ಮಾಡಿದ ವೀಡಿಯೊಗಳು ಎಂದು ಹೇಳಿದ್ದಾರೆ.

33 ವರ್ಷದ ಪ್ರಜ್ವಲ್ ಅವರು 2019 ರಲ್ಲಿ ಮೊದಲ ಬಾರಿಗೆ ತಮ್ಮ ಕ್ಷೇತ್ರ ಹಾಸನದಿಂದ ಚುನಾವಣೆಗೆ ಸ್ಪರ್ಧಿಸಿದರು. ಎಚ್‌ಡಿ ದೇವೇಗೌಡ ಅವರು 2004 ರಿಂದ 2019 ರವರೆಗೆ ಕ್ಷೇತ್ರವನ್ನು ಹೊಂದಿದ್ದರು.

ಇದನ್ನೂ ಓದಿ; ಮೋದಿ ತನ್ನ ‘ಉದ್ಯಮಿ ಮಿತ್ರರಿ’ಗಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...