Homeಮುಖಪುಟಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

- Advertisement -
- Advertisement -

ಹಾಸನ ಸಂಸದ, 2024ರ ಲೋಕಸಭಾ ಚುನಾವಣೆ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣದಿಂದ ದೇವೇಗೌಡರ ಕುಟುಂಬ ಮುಜುಗರ ಅನುಭವಿಸುತ್ತಿದ್ದು, ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯೊಬ್ಬರು ಇಂದು ಮಹಿಳಾ ಆಯೋಗಕ್ಕೆ ಮೊದಲ ದೂರು ನೀಡಿದ್ದಾರೆ.

ಶನಿವಾರ ಸಂತ್ರಸ್ತೆಯೊಬ್ಬರು ಪೋನ್ ಕಾಲ್ ಮೂಲಕ ಆಯೋಗಕ್ಕೆ ದೂರು ನೀಡಿದ್ದರು; ಇಂದು ಮತ್ತೋರ್ವ ಮಹಿಳೆ ವಾಟ್ಸಾಪ್ ಮೂಲಕ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಜೆಡಿಎಸ್ ರಾಜ್ಯಾಧ್ಯಕ್ಷ, ಪ್ರಜ್ವಲ್ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು, ತನಿಖೆಯಾಗಲಿ’ ಎಂದು ಹೇಳುವ ಮೂಲಕ, ತಮ್ಮ ಅಣ್ಣನ ಪುತ್ರನಿಂದ ಅಂತರ ಕಾಯ್ದುಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೌರ್ಜನ್ಯ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ವಿಶೇಷ ತನಿಖಾ ತಂಡದ ಮೂಲಕ ಪ್ರಕರಣದ ತನಿಖೆಗೆ ನಡೆಸುವಂತೆ ಮನವಿ ಮಾಡಿತ್ತು. ಈ ಪತ್ರದ ಮೇರೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಐಟಿ ತಂಡ ರಚನೆಗೆ ತೀರ್ಮಾನಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿ ಬಿಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದೆ. ಈಗಾಗಲೇ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದ್ದು, ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಐಟಿ ರಚನೆಯಾಗುವ ಸುದ್ದಿ ಖಚಿತವಾಗುತ್ತಿದ್ದಂತೆಯೇ ಬಂಧನದ ಬೀತಿಯಲ್ಲಿ‌ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನ್‌ ದೇಶಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಇದೇ ಪ್ರಜ್ವಲ್​ ಅಶ್ಲೀಲ ವಿಡಿಯೋ ವೈರಲ್​ಗೆ ಸಂಬಂಧಿಸಿದಂತೆ ಜೆಡಿಎಸ್​ ಚುನಾವಣಾ ಏಜೆಂಟ್ ಹಾಸನದ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ: ಎಚ್‌ಡಿಕೆ

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಜೆಡಿಎಸ್ ಮುಖ್ಯಸ್ಥ ಎಚ್‌ಡಿ ದೇವೇಗೌಡರ ಮೊಮ್ಮಗ ಜರ್ಮನಿಗೆ ಪಲಾಯನ ಮಾಡಿದ್ದಾರೆ ಎಂಬ ಊಹಾಪೋಹಗಳ ನಡುವೆ ಪಕ್ಷವು ಅವರಿಂದ ದೂರ ಸರಿದಿದೆ. ಜೆಡಿಎಸ್ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಜ್ವಲ್ ಅವರ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ‘ಪ್ರಜ್ವಲ್ ಬೇರೆ ದೇಶಕ್ಕೆ ಹೋಗಿದ್ದರೆ, ವೀಡಿಯೊಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ ಅವರನ್ನು ಮರಳಿ ಕರೆತರುತ್ತದೆ, ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ’ ಎಂದು ಹೇಳಿದರು.

“ನಾನೇ ಆಗಲಿ, ಎಚ್.ಡಿ.ದೇವೇಗೌಡರಾಗಲಿ ನಾವು ಮಹಿಳೆಯರಿಗೆ ಗೌರವ ಕೊಡುತ್ತೇವೆ; ಮಹಿಳೆಯರು ತಮ್ಮ ದೂರುಗಳೊಂದಿಗೆ ಬಂದಾಗಲೆಲ್ಲಾ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಈಗಾಗಲೇ ಸಿಎಂ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ಎಸ್‌ಐಟಿ ತನಿಖೆ ಆರಂಭವಾಗಿದೆ… ಎಸ್‌ಐಟಿ ತಂಡ ಅವರನ್ನು ವಿದೇಶದಿಂದ ಕರೆತರಬೇಕು” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ:

ಏಪ್ರಿಲ್ 26 ರಂದು ನಡೆದ ಹಾಸನದಲ್ಲಿ ಚುನಾವಣೆಗೆ ಎರಡು ದಿನಗಳ ಮೊದಲು ವೀಡಿಯೊಗಳು ಬೆಳಕಿಗೆ ಬಂದವು. ಏಪ್ರಿಲ್ 25 ರಂದು ಮಹಿಳಾ ಆಯೋಗದ ಅಧ್ಯಕ್ಷರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಕ್ಷೇಪಾರ್ಹ ವೀಡಿಯೊಗಳ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದರು. ಜೆಡಿಎಸ್‌ನವರು ಇದು ‘ಮಾರ್ಫ್ಡ್’ ವಿಡಿಯೋ ಎಂದು ಕರೆದಿದ್ದು, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಎಪ್ರಿಲ್ 27 ರಂದು ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಘೋಷಿಸಿದ್ದಾರೆ. “ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿದೆ. ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವಂತೆ ಕಾಣುವ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿವೆ” ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಎಸ್‌ಐಟಿ ಘೋಷಣೆಗೂ ಮುನ್ನ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಅವರ ಪಕ್ಷವು ಈ ಬಗ್ಗೆ ಇನ್ನೂ ಏನನ್ನೂ ಖಚಿತಪಡಿಸದಿದ್ದರೂ, ಊಹಾಪೋಹವನ್ನು ತಳ್ಳಿಹಾಕಿಲ್ಲ.

ಬಿಜೆಪಿ ಕೂಡ ಮಿತ್ರಪಕ್ಷದ ಸಂಸದರನ್ನು ಮೇಲಿನ ವಿವಾದದಿಂದ ಅಂತರ ಕಾಯ್ದುಕೊಂಡಿದ್ದು, ವಿಡಿಯೋ ಟೇಪ್ ಅಥವಾ ಎಸ್‌ಐಟಿ ರಚನೆಯ ಬಗ್ಗೆ ತನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಹೇಳಿದೆ. ಪ್ರಜ್ವಲ್ ರೇವಣ್ಣ ಅವರು ದೇಶದಿಂದ ಹೊರಗಿದ್ದಾರೆ ಎಂದು ನಂಬಲಾಗಿದ್ದರೂ, ಅವರ ಪೋಲಿಂಗ್ ಏಜೆಂಟ್ ವೀಡಿಯೊಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಅದು ಮಾರ್ಫ್ ಮಾಡಿದ ವೀಡಿಯೊಗಳು ಎಂದು ಹೇಳಿದ್ದಾರೆ.

33 ವರ್ಷದ ಪ್ರಜ್ವಲ್ ಅವರು 2019 ರಲ್ಲಿ ಮೊದಲ ಬಾರಿಗೆ ತಮ್ಮ ಕ್ಷೇತ್ರ ಹಾಸನದಿಂದ ಚುನಾವಣೆಗೆ ಸ್ಪರ್ಧಿಸಿದರು. ಎಚ್‌ಡಿ ದೇವೇಗೌಡ ಅವರು 2004 ರಿಂದ 2019 ರವರೆಗೆ ಕ್ಷೇತ್ರವನ್ನು ಹೊಂದಿದ್ದರು.

ಇದನ್ನೂ ಓದಿ; ಮೋದಿ ತನ್ನ ‘ಉದ್ಯಮಿ ಮಿತ್ರರಿ’ಗಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...