Homeಮುಖಪುಟಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

- Advertisement -
- Advertisement -

ಹಾಸನ ಸಂಸದ, 2024ರ ಲೋಕಸಭಾ ಚುನಾವಣೆ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣದಿಂದ ದೇವೇಗೌಡರ ಕುಟುಂಬ ಮುಜುಗರ ಅನುಭವಿಸುತ್ತಿದ್ದು, ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯೊಬ್ಬರು ಇಂದು ಮಹಿಳಾ ಆಯೋಗಕ್ಕೆ ಮೊದಲ ದೂರು ನೀಡಿದ್ದಾರೆ.

ಶನಿವಾರ ಸಂತ್ರಸ್ತೆಯೊಬ್ಬರು ಪೋನ್ ಕಾಲ್ ಮೂಲಕ ಆಯೋಗಕ್ಕೆ ದೂರು ನೀಡಿದ್ದರು; ಇಂದು ಮತ್ತೋರ್ವ ಮಹಿಳೆ ವಾಟ್ಸಾಪ್ ಮೂಲಕ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಜೆಡಿಎಸ್ ರಾಜ್ಯಾಧ್ಯಕ್ಷ, ಪ್ರಜ್ವಲ್ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು, ತನಿಖೆಯಾಗಲಿ’ ಎಂದು ಹೇಳುವ ಮೂಲಕ, ತಮ್ಮ ಅಣ್ಣನ ಪುತ್ರನಿಂದ ಅಂತರ ಕಾಯ್ದುಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೌರ್ಜನ್ಯ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ವಿಶೇಷ ತನಿಖಾ ತಂಡದ ಮೂಲಕ ಪ್ರಕರಣದ ತನಿಖೆಗೆ ನಡೆಸುವಂತೆ ಮನವಿ ಮಾಡಿತ್ತು. ಈ ಪತ್ರದ ಮೇರೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಐಟಿ ತಂಡ ರಚನೆಗೆ ತೀರ್ಮಾನಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿ ಬಿಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದೆ. ಈಗಾಗಲೇ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದ್ದು, ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಐಟಿ ರಚನೆಯಾಗುವ ಸುದ್ದಿ ಖಚಿತವಾಗುತ್ತಿದ್ದಂತೆಯೇ ಬಂಧನದ ಬೀತಿಯಲ್ಲಿ‌ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನ್‌ ದೇಶಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಇದೇ ಪ್ರಜ್ವಲ್​ ಅಶ್ಲೀಲ ವಿಡಿಯೋ ವೈರಲ್​ಗೆ ಸಂಬಂಧಿಸಿದಂತೆ ಜೆಡಿಎಸ್​ ಚುನಾವಣಾ ಏಜೆಂಟ್ ಹಾಸನದ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ: ಎಚ್‌ಡಿಕೆ

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಜೆಡಿಎಸ್ ಮುಖ್ಯಸ್ಥ ಎಚ್‌ಡಿ ದೇವೇಗೌಡರ ಮೊಮ್ಮಗ ಜರ್ಮನಿಗೆ ಪಲಾಯನ ಮಾಡಿದ್ದಾರೆ ಎಂಬ ಊಹಾಪೋಹಗಳ ನಡುವೆ ಪಕ್ಷವು ಅವರಿಂದ ದೂರ ಸರಿದಿದೆ. ಜೆಡಿಎಸ್ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಜ್ವಲ್ ಅವರ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ‘ಪ್ರಜ್ವಲ್ ಬೇರೆ ದೇಶಕ್ಕೆ ಹೋಗಿದ್ದರೆ, ವೀಡಿಯೊಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ ಅವರನ್ನು ಮರಳಿ ಕರೆತರುತ್ತದೆ, ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ’ ಎಂದು ಹೇಳಿದರು.

“ನಾನೇ ಆಗಲಿ, ಎಚ್.ಡಿ.ದೇವೇಗೌಡರಾಗಲಿ ನಾವು ಮಹಿಳೆಯರಿಗೆ ಗೌರವ ಕೊಡುತ್ತೇವೆ; ಮಹಿಳೆಯರು ತಮ್ಮ ದೂರುಗಳೊಂದಿಗೆ ಬಂದಾಗಲೆಲ್ಲಾ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಈಗಾಗಲೇ ಸಿಎಂ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ಎಸ್‌ಐಟಿ ತನಿಖೆ ಆರಂಭವಾಗಿದೆ… ಎಸ್‌ಐಟಿ ತಂಡ ಅವರನ್ನು ವಿದೇಶದಿಂದ ಕರೆತರಬೇಕು” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ:

ಏಪ್ರಿಲ್ 26 ರಂದು ನಡೆದ ಹಾಸನದಲ್ಲಿ ಚುನಾವಣೆಗೆ ಎರಡು ದಿನಗಳ ಮೊದಲು ವೀಡಿಯೊಗಳು ಬೆಳಕಿಗೆ ಬಂದವು. ಏಪ್ರಿಲ್ 25 ರಂದು ಮಹಿಳಾ ಆಯೋಗದ ಅಧ್ಯಕ್ಷರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಕ್ಷೇಪಾರ್ಹ ವೀಡಿಯೊಗಳ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದರು. ಜೆಡಿಎಸ್‌ನವರು ಇದು ‘ಮಾರ್ಫ್ಡ್’ ವಿಡಿಯೋ ಎಂದು ಕರೆದಿದ್ದು, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಎಪ್ರಿಲ್ 27 ರಂದು ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಘೋಷಿಸಿದ್ದಾರೆ. “ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿದೆ. ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವಂತೆ ಕಾಣುವ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿವೆ” ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಎಸ್‌ಐಟಿ ಘೋಷಣೆಗೂ ಮುನ್ನ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಅವರ ಪಕ್ಷವು ಈ ಬಗ್ಗೆ ಇನ್ನೂ ಏನನ್ನೂ ಖಚಿತಪಡಿಸದಿದ್ದರೂ, ಊಹಾಪೋಹವನ್ನು ತಳ್ಳಿಹಾಕಿಲ್ಲ.

ಬಿಜೆಪಿ ಕೂಡ ಮಿತ್ರಪಕ್ಷದ ಸಂಸದರನ್ನು ಮೇಲಿನ ವಿವಾದದಿಂದ ಅಂತರ ಕಾಯ್ದುಕೊಂಡಿದ್ದು, ವಿಡಿಯೋ ಟೇಪ್ ಅಥವಾ ಎಸ್‌ಐಟಿ ರಚನೆಯ ಬಗ್ಗೆ ತನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಹೇಳಿದೆ. ಪ್ರಜ್ವಲ್ ರೇವಣ್ಣ ಅವರು ದೇಶದಿಂದ ಹೊರಗಿದ್ದಾರೆ ಎಂದು ನಂಬಲಾಗಿದ್ದರೂ, ಅವರ ಪೋಲಿಂಗ್ ಏಜೆಂಟ್ ವೀಡಿಯೊಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಅದು ಮಾರ್ಫ್ ಮಾಡಿದ ವೀಡಿಯೊಗಳು ಎಂದು ಹೇಳಿದ್ದಾರೆ.

33 ವರ್ಷದ ಪ್ರಜ್ವಲ್ ಅವರು 2019 ರಲ್ಲಿ ಮೊದಲ ಬಾರಿಗೆ ತಮ್ಮ ಕ್ಷೇತ್ರ ಹಾಸನದಿಂದ ಚುನಾವಣೆಗೆ ಸ್ಪರ್ಧಿಸಿದರು. ಎಚ್‌ಡಿ ದೇವೇಗೌಡ ಅವರು 2004 ರಿಂದ 2019 ರವರೆಗೆ ಕ್ಷೇತ್ರವನ್ನು ಹೊಂದಿದ್ದರು.

ಇದನ್ನೂ ಓದಿ; ಮೋದಿ ತನ್ನ ‘ಉದ್ಯಮಿ ಮಿತ್ರರಿ’ಗಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...