Homeಮುಖಪುಟಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

- Advertisement -
- Advertisement -

ಹಾಸನ ಸಂಸದ, 2024ರ ಲೋಕಸಭಾ ಚುನಾವಣೆ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣದಿಂದ ದೇವೇಗೌಡರ ಕುಟುಂಬ ಮುಜುಗರ ಅನುಭವಿಸುತ್ತಿದ್ದು, ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯೊಬ್ಬರು ಇಂದು ಮಹಿಳಾ ಆಯೋಗಕ್ಕೆ ಮೊದಲ ದೂರು ನೀಡಿದ್ದಾರೆ.

ಶನಿವಾರ ಸಂತ್ರಸ್ತೆಯೊಬ್ಬರು ಪೋನ್ ಕಾಲ್ ಮೂಲಕ ಆಯೋಗಕ್ಕೆ ದೂರು ನೀಡಿದ್ದರು; ಇಂದು ಮತ್ತೋರ್ವ ಮಹಿಳೆ ವಾಟ್ಸಾಪ್ ಮೂಲಕ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಜೆಡಿಎಸ್ ರಾಜ್ಯಾಧ್ಯಕ್ಷ, ಪ್ರಜ್ವಲ್ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು, ತನಿಖೆಯಾಗಲಿ’ ಎಂದು ಹೇಳುವ ಮೂಲಕ, ತಮ್ಮ ಅಣ್ಣನ ಪುತ್ರನಿಂದ ಅಂತರ ಕಾಯ್ದುಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೌರ್ಜನ್ಯ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ವಿಶೇಷ ತನಿಖಾ ತಂಡದ ಮೂಲಕ ಪ್ರಕರಣದ ತನಿಖೆಗೆ ನಡೆಸುವಂತೆ ಮನವಿ ಮಾಡಿತ್ತು. ಈ ಪತ್ರದ ಮೇರೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಐಟಿ ತಂಡ ರಚನೆಗೆ ತೀರ್ಮಾನಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿ ಬಿಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದೆ. ಈಗಾಗಲೇ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದ್ದು, ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಐಟಿ ರಚನೆಯಾಗುವ ಸುದ್ದಿ ಖಚಿತವಾಗುತ್ತಿದ್ದಂತೆಯೇ ಬಂಧನದ ಬೀತಿಯಲ್ಲಿ‌ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನ್‌ ದೇಶಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಇದೇ ಪ್ರಜ್ವಲ್​ ಅಶ್ಲೀಲ ವಿಡಿಯೋ ವೈರಲ್​ಗೆ ಸಂಬಂಧಿಸಿದಂತೆ ಜೆಡಿಎಸ್​ ಚುನಾವಣಾ ಏಜೆಂಟ್ ಹಾಸನದ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ: ಎಚ್‌ಡಿಕೆ

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಜೆಡಿಎಸ್ ಮುಖ್ಯಸ್ಥ ಎಚ್‌ಡಿ ದೇವೇಗೌಡರ ಮೊಮ್ಮಗ ಜರ್ಮನಿಗೆ ಪಲಾಯನ ಮಾಡಿದ್ದಾರೆ ಎಂಬ ಊಹಾಪೋಹಗಳ ನಡುವೆ ಪಕ್ಷವು ಅವರಿಂದ ದೂರ ಸರಿದಿದೆ. ಜೆಡಿಎಸ್ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಜ್ವಲ್ ಅವರ ಚಿಕ್ಕಪ್ಪ ಎಚ್‌ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ‘ಪ್ರಜ್ವಲ್ ಬೇರೆ ದೇಶಕ್ಕೆ ಹೋಗಿದ್ದರೆ, ವೀಡಿಯೊಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ ಅವರನ್ನು ಮರಳಿ ಕರೆತರುತ್ತದೆ, ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ’ ಎಂದು ಹೇಳಿದರು.

“ನಾನೇ ಆಗಲಿ, ಎಚ್.ಡಿ.ದೇವೇಗೌಡರಾಗಲಿ ನಾವು ಮಹಿಳೆಯರಿಗೆ ಗೌರವ ಕೊಡುತ್ತೇವೆ; ಮಹಿಳೆಯರು ತಮ್ಮ ದೂರುಗಳೊಂದಿಗೆ ಬಂದಾಗಲೆಲ್ಲಾ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಈಗಾಗಲೇ ಸಿಎಂ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ಎಸ್‌ಐಟಿ ತನಿಖೆ ಆರಂಭವಾಗಿದೆ… ಎಸ್‌ಐಟಿ ತಂಡ ಅವರನ್ನು ವಿದೇಶದಿಂದ ಕರೆತರಬೇಕು” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ:

ಏಪ್ರಿಲ್ 26 ರಂದು ನಡೆದ ಹಾಸನದಲ್ಲಿ ಚುನಾವಣೆಗೆ ಎರಡು ದಿನಗಳ ಮೊದಲು ವೀಡಿಯೊಗಳು ಬೆಳಕಿಗೆ ಬಂದವು. ಏಪ್ರಿಲ್ 25 ರಂದು ಮಹಿಳಾ ಆಯೋಗದ ಅಧ್ಯಕ್ಷರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಕ್ಷೇಪಾರ್ಹ ವೀಡಿಯೊಗಳ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದರು. ಜೆಡಿಎಸ್‌ನವರು ಇದು ‘ಮಾರ್ಫ್ಡ್’ ವಿಡಿಯೋ ಎಂದು ಕರೆದಿದ್ದು, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಎಪ್ರಿಲ್ 27 ರಂದು ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಘೋಷಿಸಿದ್ದಾರೆ. “ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿದೆ. ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವಂತೆ ಕಾಣುವ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿವೆ” ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಎಸ್‌ಐಟಿ ಘೋಷಣೆಗೂ ಮುನ್ನ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಅವರ ಪಕ್ಷವು ಈ ಬಗ್ಗೆ ಇನ್ನೂ ಏನನ್ನೂ ಖಚಿತಪಡಿಸದಿದ್ದರೂ, ಊಹಾಪೋಹವನ್ನು ತಳ್ಳಿಹಾಕಿಲ್ಲ.

ಬಿಜೆಪಿ ಕೂಡ ಮಿತ್ರಪಕ್ಷದ ಸಂಸದರನ್ನು ಮೇಲಿನ ವಿವಾದದಿಂದ ಅಂತರ ಕಾಯ್ದುಕೊಂಡಿದ್ದು, ವಿಡಿಯೋ ಟೇಪ್ ಅಥವಾ ಎಸ್‌ಐಟಿ ರಚನೆಯ ಬಗ್ಗೆ ತನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಹೇಳಿದೆ. ಪ್ರಜ್ವಲ್ ರೇವಣ್ಣ ಅವರು ದೇಶದಿಂದ ಹೊರಗಿದ್ದಾರೆ ಎಂದು ನಂಬಲಾಗಿದ್ದರೂ, ಅವರ ಪೋಲಿಂಗ್ ಏಜೆಂಟ್ ವೀಡಿಯೊಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಅದು ಮಾರ್ಫ್ ಮಾಡಿದ ವೀಡಿಯೊಗಳು ಎಂದು ಹೇಳಿದ್ದಾರೆ.

33 ವರ್ಷದ ಪ್ರಜ್ವಲ್ ಅವರು 2019 ರಲ್ಲಿ ಮೊದಲ ಬಾರಿಗೆ ತಮ್ಮ ಕ್ಷೇತ್ರ ಹಾಸನದಿಂದ ಚುನಾವಣೆಗೆ ಸ್ಪರ್ಧಿಸಿದರು. ಎಚ್‌ಡಿ ದೇವೇಗೌಡ ಅವರು 2004 ರಿಂದ 2019 ರವರೆಗೆ ಕ್ಷೇತ್ರವನ್ನು ಹೊಂದಿದ್ದರು.

ಇದನ್ನೂ ಓದಿ; ಮೋದಿ ತನ್ನ ‘ಉದ್ಯಮಿ ಮಿತ್ರರಿ’ಗಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...