Homeಮುಖಪುಟಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: 'ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..'; ಮಹಿಳಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ‘ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..’; ಮಹಿಳಾ ಕಾಂಗ್ರೆಸ್

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಿಲ್ಲುವುದಾಗಿ ಮಹಿಳಾ ಕಾಂಗ್ರೆಸ್‌ ಹೇಳಿದ್ದು, ಧೈರ್ಯವಾಗಿ ಬಂದು ದೂರು ಕೊಡುವಂತೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ, “ಹಾಸನದ ಸಂಸದ, ಎನ್ ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆಗಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನ ಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ; ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಪ್ರಶ್ನಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ.

“ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ. ಆದರೆ, ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ, ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ” ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಅನೇಕ ಜನ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ದೇಶಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಸಹ ಅದೇ ಹಾದಿ ತುಳಿದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆದಿದ್ದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ನಾಯಕನೂ ಬಾಯಿ ಬಿಟ್ಟಿಲ್ಲ. ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರೇ, ಅಮಿತ್ ಶಾ, ಪ್ರಧಾನಿ ಮೋದಿ ಅವರೇ ಎಲ್ಲಿದ್ದೀರಿ? 2 ಜೂನ್ 2023 ರಲ್ಲಿ ನ್ಯಾಯಲಯದಿಂದ ಆದೇಶ ತಂದಿದ್ದ ಪ್ರಜ್ಷಲ್ ರೇವಣ್ಣ ಅವರ ವಿರುದ್ದ ಯಾವುದೇ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದರು. ಅಂದರೆ, ಈ ವಿಚಾರ ಎಲ್ಲರಿಗೂ ತಿಳಿದಿತ್ತು. ಆದರೂ ಇದರ ಬಗ್ಗೆ ಕ್ರಮ ತೆಗದುಕೊಂಡಿಲ್ಲ ಎಂದರ್ಥವಲ್ಲವೇ” ಎಂದು ಅವರು ಪ್ರಶ್ನಿಸಿದರು.

‘ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ. ತನ್ನ ಹುದ್ದೆ ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ, ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಮಾಹಿತಿ ಗೊತ್ತಿದ್ದರೂ ಬಿಜೆಪಿ ಟಿಕೆಟ್ ನೀಡಿದೆ: ಸೌಮ್ಯಾ ರೆಡ್ಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕಿ ಸೌಮ್ಯಾರೆಡ್ಡಿ, “ಕರ್ನಾಟಕದ ಇತಿಹಾಸದಲ್ಲಿ ಇಂತಹ ಹೀನ ಘಟನೆ ನಡೆಯುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ. ದೇಶದ ಶೇ.50 ರಷ್ಟು ಜನಸಂಖ್ಯೆ ನಾವಿದ್ದೇವೆ. ನಮ್ಮನ್ನು ದೇವರ ಹೆಸರಿನಲ್ಲಿ ಪೂಜೆ ಮಾಡುತ್ತಾರೆ. ಹೆಣ್ಣು ದೇವರುಗಳಿಗೆ ಪೂಜೆ ಮಾಡುವುದು ಬೇಡ. ಗೌರವ ರಕ್ಷಣೆ ಕೊಟ್ಟರೇ ಸಾಕು. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಈ ಹೀನ ಕೃತ್ಯಗಳ ಬಗ್ಗೆ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಈ ವಿಚಾರಗಳು ಗೊತಿದ್ದರೂ ಟಿಕೆಟ್ ನೀಡಿದ್ದು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

“ನಾರಿಶಕ್ತಿ, ಮಹಿಳಾ ಸಮಾನತೆ ಎಂದು ಹೇಳುವ ಬಿಜೆಪಿಯವರೇ ನಿಮಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಮೋದಿ ಕೀ ಪರಿವಾರ್ ಎಂದು ಹೇಳುತ್ತಾರೆ, ಇದೆನಾ ನಿಮ್ಮ ಪರಿವಾರ. ಕತುವಾ, ಮಣಿಪುರ ಸೇರಿದಂತೆ ಅನೇಕ ಘಟನೆಗಳು ನಡೆದವು ಆದರೆ ದೇಶದ ಪ್ರಧಾನಿಗಳು ಇವುಗಳ ಬಗ್ಗೆ ಮಾತೇ ಆಡುತ್ತಿಲ್ಲ. ನಾಲ್ಕುಕ್ಕೂ ಹೆಚ್ಚು ಸಂತ್ರಸ್ತೆಯರು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಾರೆ. ಇವರೆಲ್ಲಾ ಕಾರ್ಯಕರ್ತರು, ಕೆಲಸ ಕೇಳಿಕೊಂಡು ಹೋದವರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ರೀತಿಯ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಶೋಷಣೆ ಮಾಡಿದ್ದಾನೆ. ಇಷ್ಟೆಲ್ಲಾ ಮಾಹಿತಿ ಗೊತ್ತಿದ್ದರೂ ಸಹ ಬಿಜೆಪಿ ಏಕೆ ಟಿಕೆಟ್ ನೀಡಿದೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.

“ವಿಜಯೇಂದ್ರ ಅವರೇ ನಿಮ್ಮ ಮನೆಯಲ್ಲಿ ಹೆಣ್ಣುಮಕ್ಕಳಿಲ್ಲವೇ?, ಶೋಭಕ್ಕ ಎಲ್ಲಿದ್ದೀರಿ? ಬಿಜೆಪಿ, ಜೆಡಿಎಸ್ ನಾಯಕರೇ ನಿಮಗೆ ಬಾಯಿ ಇಲ್ಲವೇ? ಸುಮಲತಾ ಅವರೇ ಏಕೆ ಮೌನವಾಗಿದ್ದೀರಿ. ದೇಶದ ಪ್ರತಿಯೊಬ್ಬ ನಾಗರೀಕನು ಈ ಕೃತ್ಯ ವಿರೋಧಿಸಿ ಛೀಮಾರಿ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...