Homeಮುಖಪುಟಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: 'ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..'; ಮಹಿಳಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ‘ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..’; ಮಹಿಳಾ ಕಾಂಗ್ರೆಸ್

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಿಲ್ಲುವುದಾಗಿ ಮಹಿಳಾ ಕಾಂಗ್ರೆಸ್‌ ಹೇಳಿದ್ದು, ಧೈರ್ಯವಾಗಿ ಬಂದು ದೂರು ಕೊಡುವಂತೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ, “ಹಾಸನದ ಸಂಸದ, ಎನ್ ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆಗಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನ ಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ; ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಪ್ರಶ್ನಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ.

“ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ. ಆದರೆ, ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ, ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ” ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಅನೇಕ ಜನ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ದೇಶಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಸಹ ಅದೇ ಹಾದಿ ತುಳಿದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆದಿದ್ದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ನಾಯಕನೂ ಬಾಯಿ ಬಿಟ್ಟಿಲ್ಲ. ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರೇ, ಅಮಿತ್ ಶಾ, ಪ್ರಧಾನಿ ಮೋದಿ ಅವರೇ ಎಲ್ಲಿದ್ದೀರಿ? 2 ಜೂನ್ 2023 ರಲ್ಲಿ ನ್ಯಾಯಲಯದಿಂದ ಆದೇಶ ತಂದಿದ್ದ ಪ್ರಜ್ಷಲ್ ರೇವಣ್ಣ ಅವರ ವಿರುದ್ದ ಯಾವುದೇ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದರು. ಅಂದರೆ, ಈ ವಿಚಾರ ಎಲ್ಲರಿಗೂ ತಿಳಿದಿತ್ತು. ಆದರೂ ಇದರ ಬಗ್ಗೆ ಕ್ರಮ ತೆಗದುಕೊಂಡಿಲ್ಲ ಎಂದರ್ಥವಲ್ಲವೇ” ಎಂದು ಅವರು ಪ್ರಶ್ನಿಸಿದರು.

‘ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ. ತನ್ನ ಹುದ್ದೆ ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ, ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಮಾಹಿತಿ ಗೊತ್ತಿದ್ದರೂ ಬಿಜೆಪಿ ಟಿಕೆಟ್ ನೀಡಿದೆ: ಸೌಮ್ಯಾ ರೆಡ್ಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕಿ ಸೌಮ್ಯಾರೆಡ್ಡಿ, “ಕರ್ನಾಟಕದ ಇತಿಹಾಸದಲ್ಲಿ ಇಂತಹ ಹೀನ ಘಟನೆ ನಡೆಯುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ. ದೇಶದ ಶೇ.50 ರಷ್ಟು ಜನಸಂಖ್ಯೆ ನಾವಿದ್ದೇವೆ. ನಮ್ಮನ್ನು ದೇವರ ಹೆಸರಿನಲ್ಲಿ ಪೂಜೆ ಮಾಡುತ್ತಾರೆ. ಹೆಣ್ಣು ದೇವರುಗಳಿಗೆ ಪೂಜೆ ಮಾಡುವುದು ಬೇಡ. ಗೌರವ ರಕ್ಷಣೆ ಕೊಟ್ಟರೇ ಸಾಕು. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಈ ಹೀನ ಕೃತ್ಯಗಳ ಬಗ್ಗೆ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಈ ವಿಚಾರಗಳು ಗೊತಿದ್ದರೂ ಟಿಕೆಟ್ ನೀಡಿದ್ದು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

“ನಾರಿಶಕ್ತಿ, ಮಹಿಳಾ ಸಮಾನತೆ ಎಂದು ಹೇಳುವ ಬಿಜೆಪಿಯವರೇ ನಿಮಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಮೋದಿ ಕೀ ಪರಿವಾರ್ ಎಂದು ಹೇಳುತ್ತಾರೆ, ಇದೆನಾ ನಿಮ್ಮ ಪರಿವಾರ. ಕತುವಾ, ಮಣಿಪುರ ಸೇರಿದಂತೆ ಅನೇಕ ಘಟನೆಗಳು ನಡೆದವು ಆದರೆ ದೇಶದ ಪ್ರಧಾನಿಗಳು ಇವುಗಳ ಬಗ್ಗೆ ಮಾತೇ ಆಡುತ್ತಿಲ್ಲ. ನಾಲ್ಕುಕ್ಕೂ ಹೆಚ್ಚು ಸಂತ್ರಸ್ತೆಯರು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಾರೆ. ಇವರೆಲ್ಲಾ ಕಾರ್ಯಕರ್ತರು, ಕೆಲಸ ಕೇಳಿಕೊಂಡು ಹೋದವರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ರೀತಿಯ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಶೋಷಣೆ ಮಾಡಿದ್ದಾನೆ. ಇಷ್ಟೆಲ್ಲಾ ಮಾಹಿತಿ ಗೊತ್ತಿದ್ದರೂ ಸಹ ಬಿಜೆಪಿ ಏಕೆ ಟಿಕೆಟ್ ನೀಡಿದೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.

“ವಿಜಯೇಂದ್ರ ಅವರೇ ನಿಮ್ಮ ಮನೆಯಲ್ಲಿ ಹೆಣ್ಣುಮಕ್ಕಳಿಲ್ಲವೇ?, ಶೋಭಕ್ಕ ಎಲ್ಲಿದ್ದೀರಿ? ಬಿಜೆಪಿ, ಜೆಡಿಎಸ್ ನಾಯಕರೇ ನಿಮಗೆ ಬಾಯಿ ಇಲ್ಲವೇ? ಸುಮಲತಾ ಅವರೇ ಏಕೆ ಮೌನವಾಗಿದ್ದೀರಿ. ದೇಶದ ಪ್ರತಿಯೊಬ್ಬ ನಾಗರೀಕನು ಈ ಕೃತ್ಯ ವಿರೋಧಿಸಿ ಛೀಮಾರಿ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...