Homeಮುಖಪುಟಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: 'ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..'; ಮಹಿಳಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ‘ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..’; ಮಹಿಳಾ ಕಾಂಗ್ರೆಸ್

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಿಲ್ಲುವುದಾಗಿ ಮಹಿಳಾ ಕಾಂಗ್ರೆಸ್‌ ಹೇಳಿದ್ದು, ಧೈರ್ಯವಾಗಿ ಬಂದು ದೂರು ಕೊಡುವಂತೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ, “ಹಾಸನದ ಸಂಸದ, ಎನ್ ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆಗಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನ ಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ; ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಪ್ರಶ್ನಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ.

“ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ. ಆದರೆ, ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ, ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ” ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಅನೇಕ ಜನ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ದೇಶಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಸಹ ಅದೇ ಹಾದಿ ತುಳಿದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆದಿದ್ದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ನಾಯಕನೂ ಬಾಯಿ ಬಿಟ್ಟಿಲ್ಲ. ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರೇ, ಅಮಿತ್ ಶಾ, ಪ್ರಧಾನಿ ಮೋದಿ ಅವರೇ ಎಲ್ಲಿದ್ದೀರಿ? 2 ಜೂನ್ 2023 ರಲ್ಲಿ ನ್ಯಾಯಲಯದಿಂದ ಆದೇಶ ತಂದಿದ್ದ ಪ್ರಜ್ಷಲ್ ರೇವಣ್ಣ ಅವರ ವಿರುದ್ದ ಯಾವುದೇ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದರು. ಅಂದರೆ, ಈ ವಿಚಾರ ಎಲ್ಲರಿಗೂ ತಿಳಿದಿತ್ತು. ಆದರೂ ಇದರ ಬಗ್ಗೆ ಕ್ರಮ ತೆಗದುಕೊಂಡಿಲ್ಲ ಎಂದರ್ಥವಲ್ಲವೇ” ಎಂದು ಅವರು ಪ್ರಶ್ನಿಸಿದರು.

‘ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ. ತನ್ನ ಹುದ್ದೆ ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ, ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಮಾಹಿತಿ ಗೊತ್ತಿದ್ದರೂ ಬಿಜೆಪಿ ಟಿಕೆಟ್ ನೀಡಿದೆ: ಸೌಮ್ಯಾ ರೆಡ್ಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕಿ ಸೌಮ್ಯಾರೆಡ್ಡಿ, “ಕರ್ನಾಟಕದ ಇತಿಹಾಸದಲ್ಲಿ ಇಂತಹ ಹೀನ ಘಟನೆ ನಡೆಯುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ. ದೇಶದ ಶೇ.50 ರಷ್ಟು ಜನಸಂಖ್ಯೆ ನಾವಿದ್ದೇವೆ. ನಮ್ಮನ್ನು ದೇವರ ಹೆಸರಿನಲ್ಲಿ ಪೂಜೆ ಮಾಡುತ್ತಾರೆ. ಹೆಣ್ಣು ದೇವರುಗಳಿಗೆ ಪೂಜೆ ಮಾಡುವುದು ಬೇಡ. ಗೌರವ ರಕ್ಷಣೆ ಕೊಟ್ಟರೇ ಸಾಕು. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಈ ಹೀನ ಕೃತ್ಯಗಳ ಬಗ್ಗೆ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಈ ವಿಚಾರಗಳು ಗೊತಿದ್ದರೂ ಟಿಕೆಟ್ ನೀಡಿದ್ದು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

“ನಾರಿಶಕ್ತಿ, ಮಹಿಳಾ ಸಮಾನತೆ ಎಂದು ಹೇಳುವ ಬಿಜೆಪಿಯವರೇ ನಿಮಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಮೋದಿ ಕೀ ಪರಿವಾರ್ ಎಂದು ಹೇಳುತ್ತಾರೆ, ಇದೆನಾ ನಿಮ್ಮ ಪರಿವಾರ. ಕತುವಾ, ಮಣಿಪುರ ಸೇರಿದಂತೆ ಅನೇಕ ಘಟನೆಗಳು ನಡೆದವು ಆದರೆ ದೇಶದ ಪ್ರಧಾನಿಗಳು ಇವುಗಳ ಬಗ್ಗೆ ಮಾತೇ ಆಡುತ್ತಿಲ್ಲ. ನಾಲ್ಕುಕ್ಕೂ ಹೆಚ್ಚು ಸಂತ್ರಸ್ತೆಯರು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಾರೆ. ಇವರೆಲ್ಲಾ ಕಾರ್ಯಕರ್ತರು, ಕೆಲಸ ಕೇಳಿಕೊಂಡು ಹೋದವರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ರೀತಿಯ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಶೋಷಣೆ ಮಾಡಿದ್ದಾನೆ. ಇಷ್ಟೆಲ್ಲಾ ಮಾಹಿತಿ ಗೊತ್ತಿದ್ದರೂ ಸಹ ಬಿಜೆಪಿ ಏಕೆ ಟಿಕೆಟ್ ನೀಡಿದೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.

“ವಿಜಯೇಂದ್ರ ಅವರೇ ನಿಮ್ಮ ಮನೆಯಲ್ಲಿ ಹೆಣ್ಣುಮಕ್ಕಳಿಲ್ಲವೇ?, ಶೋಭಕ್ಕ ಎಲ್ಲಿದ್ದೀರಿ? ಬಿಜೆಪಿ, ಜೆಡಿಎಸ್ ನಾಯಕರೇ ನಿಮಗೆ ಬಾಯಿ ಇಲ್ಲವೇ? ಸುಮಲತಾ ಅವರೇ ಏಕೆ ಮೌನವಾಗಿದ್ದೀರಿ. ದೇಶದ ಪ್ರತಿಯೊಬ್ಬ ನಾಗರೀಕನು ಈ ಕೃತ್ಯ ವಿರೋಧಿಸಿ ಛೀಮಾರಿ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...