Homeಮುಖಪುಟಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: 'ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..'; ಮಹಿಳಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ‘ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..’; ಮಹಿಳಾ ಕಾಂಗ್ರೆಸ್

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಿಲ್ಲುವುದಾಗಿ ಮಹಿಳಾ ಕಾಂಗ್ರೆಸ್‌ ಹೇಳಿದ್ದು, ಧೈರ್ಯವಾಗಿ ಬಂದು ದೂರು ಕೊಡುವಂತೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ, “ಹಾಸನದ ಸಂಸದ, ಎನ್ ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆಗಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನ ಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ; ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಪ್ರಶ್ನಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ.

“ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ. ಆದರೆ, ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ, ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ” ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಅನೇಕ ಜನ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ದೇಶಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಸಹ ಅದೇ ಹಾದಿ ತುಳಿದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆದಿದ್ದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ನಾಯಕನೂ ಬಾಯಿ ಬಿಟ್ಟಿಲ್ಲ. ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರೇ, ಅಮಿತ್ ಶಾ, ಪ್ರಧಾನಿ ಮೋದಿ ಅವರೇ ಎಲ್ಲಿದ್ದೀರಿ? 2 ಜೂನ್ 2023 ರಲ್ಲಿ ನ್ಯಾಯಲಯದಿಂದ ಆದೇಶ ತಂದಿದ್ದ ಪ್ರಜ್ಷಲ್ ರೇವಣ್ಣ ಅವರ ವಿರುದ್ದ ಯಾವುದೇ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದರು. ಅಂದರೆ, ಈ ವಿಚಾರ ಎಲ್ಲರಿಗೂ ತಿಳಿದಿತ್ತು. ಆದರೂ ಇದರ ಬಗ್ಗೆ ಕ್ರಮ ತೆಗದುಕೊಂಡಿಲ್ಲ ಎಂದರ್ಥವಲ್ಲವೇ” ಎಂದು ಅವರು ಪ್ರಶ್ನಿಸಿದರು.

‘ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ. ತನ್ನ ಹುದ್ದೆ ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ, ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಮಾಹಿತಿ ಗೊತ್ತಿದ್ದರೂ ಬಿಜೆಪಿ ಟಿಕೆಟ್ ನೀಡಿದೆ: ಸೌಮ್ಯಾ ರೆಡ್ಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕಿ ಸೌಮ್ಯಾರೆಡ್ಡಿ, “ಕರ್ನಾಟಕದ ಇತಿಹಾಸದಲ್ಲಿ ಇಂತಹ ಹೀನ ಘಟನೆ ನಡೆಯುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ. ದೇಶದ ಶೇ.50 ರಷ್ಟು ಜನಸಂಖ್ಯೆ ನಾವಿದ್ದೇವೆ. ನಮ್ಮನ್ನು ದೇವರ ಹೆಸರಿನಲ್ಲಿ ಪೂಜೆ ಮಾಡುತ್ತಾರೆ. ಹೆಣ್ಣು ದೇವರುಗಳಿಗೆ ಪೂಜೆ ಮಾಡುವುದು ಬೇಡ. ಗೌರವ ರಕ್ಷಣೆ ಕೊಟ್ಟರೇ ಸಾಕು. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಈ ಹೀನ ಕೃತ್ಯಗಳ ಬಗ್ಗೆ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಈ ವಿಚಾರಗಳು ಗೊತಿದ್ದರೂ ಟಿಕೆಟ್ ನೀಡಿದ್ದು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

“ನಾರಿಶಕ್ತಿ, ಮಹಿಳಾ ಸಮಾನತೆ ಎಂದು ಹೇಳುವ ಬಿಜೆಪಿಯವರೇ ನಿಮಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಮೋದಿ ಕೀ ಪರಿವಾರ್ ಎಂದು ಹೇಳುತ್ತಾರೆ, ಇದೆನಾ ನಿಮ್ಮ ಪರಿವಾರ. ಕತುವಾ, ಮಣಿಪುರ ಸೇರಿದಂತೆ ಅನೇಕ ಘಟನೆಗಳು ನಡೆದವು ಆದರೆ ದೇಶದ ಪ್ರಧಾನಿಗಳು ಇವುಗಳ ಬಗ್ಗೆ ಮಾತೇ ಆಡುತ್ತಿಲ್ಲ. ನಾಲ್ಕುಕ್ಕೂ ಹೆಚ್ಚು ಸಂತ್ರಸ್ತೆಯರು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಾರೆ. ಇವರೆಲ್ಲಾ ಕಾರ್ಯಕರ್ತರು, ಕೆಲಸ ಕೇಳಿಕೊಂಡು ಹೋದವರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ರೀತಿಯ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಶೋಷಣೆ ಮಾಡಿದ್ದಾನೆ. ಇಷ್ಟೆಲ್ಲಾ ಮಾಹಿತಿ ಗೊತ್ತಿದ್ದರೂ ಸಹ ಬಿಜೆಪಿ ಏಕೆ ಟಿಕೆಟ್ ನೀಡಿದೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.

“ವಿಜಯೇಂದ್ರ ಅವರೇ ನಿಮ್ಮ ಮನೆಯಲ್ಲಿ ಹೆಣ್ಣುಮಕ್ಕಳಿಲ್ಲವೇ?, ಶೋಭಕ್ಕ ಎಲ್ಲಿದ್ದೀರಿ? ಬಿಜೆಪಿ, ಜೆಡಿಎಸ್ ನಾಯಕರೇ ನಿಮಗೆ ಬಾಯಿ ಇಲ್ಲವೇ? ಸುಮಲತಾ ಅವರೇ ಏಕೆ ಮೌನವಾಗಿದ್ದೀರಿ. ದೇಶದ ಪ್ರತಿಯೊಬ್ಬ ನಾಗರೀಕನು ಈ ಕೃತ್ಯ ವಿರೋಧಿಸಿ ಛೀಮಾರಿ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...