Homeಮುಖಪುಟಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: 'ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..'; ಮಹಿಳಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ‘ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..’; ಮಹಿಳಾ ಕಾಂಗ್ರೆಸ್

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಿಲ್ಲುವುದಾಗಿ ಮಹಿಳಾ ಕಾಂಗ್ರೆಸ್‌ ಹೇಳಿದ್ದು, ಧೈರ್ಯವಾಗಿ ಬಂದು ದೂರು ಕೊಡುವಂತೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ, “ಹಾಸನದ ಸಂಸದ, ಎನ್ ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆಗಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನ ಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ; ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಪ್ರಶ್ನಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ.

“ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ. ಆದರೆ, ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ, ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ” ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಅನೇಕ ಜನ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ದೇಶಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಸಹ ಅದೇ ಹಾದಿ ತುಳಿದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆದಿದ್ದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ನಾಯಕನೂ ಬಾಯಿ ಬಿಟ್ಟಿಲ್ಲ. ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರೇ, ಅಮಿತ್ ಶಾ, ಪ್ರಧಾನಿ ಮೋದಿ ಅವರೇ ಎಲ್ಲಿದ್ದೀರಿ? 2 ಜೂನ್ 2023 ರಲ್ಲಿ ನ್ಯಾಯಲಯದಿಂದ ಆದೇಶ ತಂದಿದ್ದ ಪ್ರಜ್ಷಲ್ ರೇವಣ್ಣ ಅವರ ವಿರುದ್ದ ಯಾವುದೇ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದರು. ಅಂದರೆ, ಈ ವಿಚಾರ ಎಲ್ಲರಿಗೂ ತಿಳಿದಿತ್ತು. ಆದರೂ ಇದರ ಬಗ್ಗೆ ಕ್ರಮ ತೆಗದುಕೊಂಡಿಲ್ಲ ಎಂದರ್ಥವಲ್ಲವೇ” ಎಂದು ಅವರು ಪ್ರಶ್ನಿಸಿದರು.

‘ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ. ತನ್ನ ಹುದ್ದೆ ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ, ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಮಾಹಿತಿ ಗೊತ್ತಿದ್ದರೂ ಬಿಜೆಪಿ ಟಿಕೆಟ್ ನೀಡಿದೆ: ಸೌಮ್ಯಾ ರೆಡ್ಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕಿ ಸೌಮ್ಯಾರೆಡ್ಡಿ, “ಕರ್ನಾಟಕದ ಇತಿಹಾಸದಲ್ಲಿ ಇಂತಹ ಹೀನ ಘಟನೆ ನಡೆಯುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ. ದೇಶದ ಶೇ.50 ರಷ್ಟು ಜನಸಂಖ್ಯೆ ನಾವಿದ್ದೇವೆ. ನಮ್ಮನ್ನು ದೇವರ ಹೆಸರಿನಲ್ಲಿ ಪೂಜೆ ಮಾಡುತ್ತಾರೆ. ಹೆಣ್ಣು ದೇವರುಗಳಿಗೆ ಪೂಜೆ ಮಾಡುವುದು ಬೇಡ. ಗೌರವ ರಕ್ಷಣೆ ಕೊಟ್ಟರೇ ಸಾಕು. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಈ ಹೀನ ಕೃತ್ಯಗಳ ಬಗ್ಗೆ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಈ ವಿಚಾರಗಳು ಗೊತಿದ್ದರೂ ಟಿಕೆಟ್ ನೀಡಿದ್ದು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

“ನಾರಿಶಕ್ತಿ, ಮಹಿಳಾ ಸಮಾನತೆ ಎಂದು ಹೇಳುವ ಬಿಜೆಪಿಯವರೇ ನಿಮಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಮೋದಿ ಕೀ ಪರಿವಾರ್ ಎಂದು ಹೇಳುತ್ತಾರೆ, ಇದೆನಾ ನಿಮ್ಮ ಪರಿವಾರ. ಕತುವಾ, ಮಣಿಪುರ ಸೇರಿದಂತೆ ಅನೇಕ ಘಟನೆಗಳು ನಡೆದವು ಆದರೆ ದೇಶದ ಪ್ರಧಾನಿಗಳು ಇವುಗಳ ಬಗ್ಗೆ ಮಾತೇ ಆಡುತ್ತಿಲ್ಲ. ನಾಲ್ಕುಕ್ಕೂ ಹೆಚ್ಚು ಸಂತ್ರಸ್ತೆಯರು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಾರೆ. ಇವರೆಲ್ಲಾ ಕಾರ್ಯಕರ್ತರು, ಕೆಲಸ ಕೇಳಿಕೊಂಡು ಹೋದವರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ರೀತಿಯ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಶೋಷಣೆ ಮಾಡಿದ್ದಾನೆ. ಇಷ್ಟೆಲ್ಲಾ ಮಾಹಿತಿ ಗೊತ್ತಿದ್ದರೂ ಸಹ ಬಿಜೆಪಿ ಏಕೆ ಟಿಕೆಟ್ ನೀಡಿದೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.

“ವಿಜಯೇಂದ್ರ ಅವರೇ ನಿಮ್ಮ ಮನೆಯಲ್ಲಿ ಹೆಣ್ಣುಮಕ್ಕಳಿಲ್ಲವೇ?, ಶೋಭಕ್ಕ ಎಲ್ಲಿದ್ದೀರಿ? ಬಿಜೆಪಿ, ಜೆಡಿಎಸ್ ನಾಯಕರೇ ನಿಮಗೆ ಬಾಯಿ ಇಲ್ಲವೇ? ಸುಮಲತಾ ಅವರೇ ಏಕೆ ಮೌನವಾಗಿದ್ದೀರಿ. ದೇಶದ ಪ್ರತಿಯೊಬ್ಬ ನಾಗರೀಕನು ಈ ಕೃತ್ಯ ವಿರೋಧಿಸಿ ಛೀಮಾರಿ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...