Homeಮುಖಪುಟಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: 'ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..'; ಮಹಿಳಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ‘ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..’; ಮಹಿಳಾ ಕಾಂಗ್ರೆಸ್

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಿಲ್ಲುವುದಾಗಿ ಮಹಿಳಾ ಕಾಂಗ್ರೆಸ್‌ ಹೇಳಿದ್ದು, ಧೈರ್ಯವಾಗಿ ಬಂದು ದೂರು ಕೊಡುವಂತೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ, “ಹಾಸನದ ಸಂಸದ, ಎನ್ ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆಗಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನ ಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ; ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಪ್ರಶ್ನಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ.

“ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ. ಆದರೆ, ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ, ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ” ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಅನೇಕ ಜನ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ದೇಶಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಸಹ ಅದೇ ಹಾದಿ ತುಳಿದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆದಿದ್ದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ನಾಯಕನೂ ಬಾಯಿ ಬಿಟ್ಟಿಲ್ಲ. ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರೇ, ಅಮಿತ್ ಶಾ, ಪ್ರಧಾನಿ ಮೋದಿ ಅವರೇ ಎಲ್ಲಿದ್ದೀರಿ? 2 ಜೂನ್ 2023 ರಲ್ಲಿ ನ್ಯಾಯಲಯದಿಂದ ಆದೇಶ ತಂದಿದ್ದ ಪ್ರಜ್ಷಲ್ ರೇವಣ್ಣ ಅವರ ವಿರುದ್ದ ಯಾವುದೇ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದರು. ಅಂದರೆ, ಈ ವಿಚಾರ ಎಲ್ಲರಿಗೂ ತಿಳಿದಿತ್ತು. ಆದರೂ ಇದರ ಬಗ್ಗೆ ಕ್ರಮ ತೆಗದುಕೊಂಡಿಲ್ಲ ಎಂದರ್ಥವಲ್ಲವೇ” ಎಂದು ಅವರು ಪ್ರಶ್ನಿಸಿದರು.

‘ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ. ತನ್ನ ಹುದ್ದೆ ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ, ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಮಾಹಿತಿ ಗೊತ್ತಿದ್ದರೂ ಬಿಜೆಪಿ ಟಿಕೆಟ್ ನೀಡಿದೆ: ಸೌಮ್ಯಾ ರೆಡ್ಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕಿ ಸೌಮ್ಯಾರೆಡ್ಡಿ, “ಕರ್ನಾಟಕದ ಇತಿಹಾಸದಲ್ಲಿ ಇಂತಹ ಹೀನ ಘಟನೆ ನಡೆಯುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ. ದೇಶದ ಶೇ.50 ರಷ್ಟು ಜನಸಂಖ್ಯೆ ನಾವಿದ್ದೇವೆ. ನಮ್ಮನ್ನು ದೇವರ ಹೆಸರಿನಲ್ಲಿ ಪೂಜೆ ಮಾಡುತ್ತಾರೆ. ಹೆಣ್ಣು ದೇವರುಗಳಿಗೆ ಪೂಜೆ ಮಾಡುವುದು ಬೇಡ. ಗೌರವ ರಕ್ಷಣೆ ಕೊಟ್ಟರೇ ಸಾಕು. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಈ ಹೀನ ಕೃತ್ಯಗಳ ಬಗ್ಗೆ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಈ ವಿಚಾರಗಳು ಗೊತಿದ್ದರೂ ಟಿಕೆಟ್ ನೀಡಿದ್ದು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

“ನಾರಿಶಕ್ತಿ, ಮಹಿಳಾ ಸಮಾನತೆ ಎಂದು ಹೇಳುವ ಬಿಜೆಪಿಯವರೇ ನಿಮಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಮೋದಿ ಕೀ ಪರಿವಾರ್ ಎಂದು ಹೇಳುತ್ತಾರೆ, ಇದೆನಾ ನಿಮ್ಮ ಪರಿವಾರ. ಕತುವಾ, ಮಣಿಪುರ ಸೇರಿದಂತೆ ಅನೇಕ ಘಟನೆಗಳು ನಡೆದವು ಆದರೆ ದೇಶದ ಪ್ರಧಾನಿಗಳು ಇವುಗಳ ಬಗ್ಗೆ ಮಾತೇ ಆಡುತ್ತಿಲ್ಲ. ನಾಲ್ಕುಕ್ಕೂ ಹೆಚ್ಚು ಸಂತ್ರಸ್ತೆಯರು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಾರೆ. ಇವರೆಲ್ಲಾ ಕಾರ್ಯಕರ್ತರು, ಕೆಲಸ ಕೇಳಿಕೊಂಡು ಹೋದವರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ರೀತಿಯ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಶೋಷಣೆ ಮಾಡಿದ್ದಾನೆ. ಇಷ್ಟೆಲ್ಲಾ ಮಾಹಿತಿ ಗೊತ್ತಿದ್ದರೂ ಸಹ ಬಿಜೆಪಿ ಏಕೆ ಟಿಕೆಟ್ ನೀಡಿದೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.

“ವಿಜಯೇಂದ್ರ ಅವರೇ ನಿಮ್ಮ ಮನೆಯಲ್ಲಿ ಹೆಣ್ಣುಮಕ್ಕಳಿಲ್ಲವೇ?, ಶೋಭಕ್ಕ ಎಲ್ಲಿದ್ದೀರಿ? ಬಿಜೆಪಿ, ಜೆಡಿಎಸ್ ನಾಯಕರೇ ನಿಮಗೆ ಬಾಯಿ ಇಲ್ಲವೇ? ಸುಮಲತಾ ಅವರೇ ಏಕೆ ಮೌನವಾಗಿದ್ದೀರಿ. ದೇಶದ ಪ್ರತಿಯೊಬ್ಬ ನಾಗರೀಕನು ಈ ಕೃತ್ಯ ವಿರೋಧಿಸಿ ಛೀಮಾರಿ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...