Homeಕರ್ನಾಟಕಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಬಂಧಿತ ಬಿಜೆಪಿ ಕಾರ್ಯಕರ್ತರ ಕುರಿತು ಪ್ರೀತಂ ಗೌಡ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಬಂಧಿತ ಬಿಜೆಪಿ ಕಾರ್ಯಕರ್ತರ ಕುರಿತು ಪ್ರೀತಂ ಗೌಡ ಹೇಳಿದ್ದೇನು?

- Advertisement -
- Advertisement -

ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಇದೀಗ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ವಿಶೇಷ ತನಿಖಾ ತಂಡದ ಅಧಿಕಾರಿಗಳು (ಎಸ್‌ಐಟಿ) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್ ಮತ್ತು ಕಚೇರಿ ಸಿಬ್ಬಂದಿ ಚೇತನ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ ಮತ್ತು ಪುಟ್ಟರಾಜುಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

ಆದರೆ, ಬಿಜೆಪಿ ಮುಖಂಡ ಪ್ರೀತಂ ಗೌಡ ಮಾತ್ರ, ‘ಇಬ್ಬರು ಬಂಧಿತರು ನನ್ನ ಆಪ್ತ ಸಹಾಯಕರಲ್ಲ, ಕಚೇರಿ ಕೆಲಸಗಾರರು; ಹಾಸನ ಜಿಲ್ಲೆಯ ಎರಡು ಲಕ್ಷ ಜನರ ಬಳಿ ವಿಡಿಯೊ ಇವೆ’ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಗಂಭೀರವಾಗುತ್ತಿದ್ದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಲಾಗಿತ್ತು. ಹಿರಿಯ ಪೊಲೀಸರ ಹಲವು ತಂಡಗಳನ್ನು ರಚಿಸಿ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಎಸ್‌ಐಟಿ ತಂಡ ಹಾಸನದಲ್ಲಿ ಬೀಡುಬಿಟ್ಟಿದೆ. ಈ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರನ್ನು ಬಂಧಿಸಲಾಗುತ್ತಿದೆ. ಇದೀಗ ಮಾಜಿ ಶಾಸಕ ಪ್ರೀತಂ ಗೌಡ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಮತ್ತು ಆತನ ಸ್ನೇಹಿತ ಲಿಖಿತ್ ನನ್ನು ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ಅಧಿಕಾರಿಗಳು ಬಂಧಿಸಿದ್ದಾರೆ. ಲಿಖಿತ್ ಮತ್ತು ಚೇತನ್ ಪ್ರೀತಂ ಗೌಡ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ಸದ್ಯ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.

ಈ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪಿಯನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್, ಯೂಟ್ಯೂಬ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದ. ಪ್ರಜ್ವಲ್ ವಿರುದ್ಧ ಕುದೇರಮುಖ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67, 67 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದಾನೆ.

ಪ್ರೀತಂ ಗೌಡ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ವಿಡಿಯೊ ಹಂಚಿದ ಆರೋಪ ಮೇಲೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನ ಮಾಜಿ ಶಾಸಕ ಪ್ರೀತಂ ಗೌಡ, “ಹಾಸನದಲ್ಲಿ ಸಣ್ಣ ಯುವಕರಿಂದ 75 ವರ್ಷದ ಮುದುಕರವರೆಗೂ ಎಲ್ಲರ ಬಳಿಯೂ ವೀಡಿಯೊ ಇದೆ; ಎಲ್ಲರನ್ನೂ ಬಂಧನ ಮಾಡೋಕಾಗುತ್ತಾ” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಅಮಾಯಕ ಯುವಕನಿಗೂವೀಡಿಯೋ ಬಂದಿದೆ. ಅದನ್ನೇ ಅಪರಾಧ ಅಂದ್ರೆ ಹೇಗೆ? ವೀಡಿಯೋ ನೋಡಿದವರೆಲ್ಲ ತಪ್ಪಿತಸ್ಥರು ಅಂದ್ರೆ ಹಾಸನದ 15 ಲಕ್ಷ ಜನ ತಪ್ಪಿತಸ್ಥರಾಗ್ತಾರೆ. ತನಿಖೆ ಸರಿಯಾದ ರೀತಿಯಲ್ಲಿ ಆಗಬೇಕು” ಎಂದು ಹೇಳಿದ್ದಾರೆ.

“ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ; ಈ ಬಗ್ಗೆ ಚರ್ಚೆಯನ್ನೂ ನಾನು ಮಾಡಿಲ್ಲ. ನಮ್ಮ ಕಾರ್ಯಕರ್ತರ ಬಂಧನ ಆಗಿದ್ದಕ್ಕೆ ಮಾತನಾಡುತ್ತಿದ್ದೇನೆ. ನಮಗೂ ವೀಡಿಯೋಗೂ ಸಂಬಂಧ ಇಲ್ಲ” ಎಂದಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಡಿಯೊ ತುಣುಕುಗಳನ್ನು ಪ್ರಸಾರ ಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...