Homeಕರ್ನಾಟಕಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಬಂಧಿತ ಬಿಜೆಪಿ ಕಾರ್ಯಕರ್ತರ ಕುರಿತು ಪ್ರೀತಂ ಗೌಡ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಬಂಧಿತ ಬಿಜೆಪಿ ಕಾರ್ಯಕರ್ತರ ಕುರಿತು ಪ್ರೀತಂ ಗೌಡ ಹೇಳಿದ್ದೇನು?

- Advertisement -
- Advertisement -

ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಇದೀಗ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ವಿಶೇಷ ತನಿಖಾ ತಂಡದ ಅಧಿಕಾರಿಗಳು (ಎಸ್‌ಐಟಿ) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್ ಮತ್ತು ಕಚೇರಿ ಸಿಬ್ಬಂದಿ ಚೇತನ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ ಮತ್ತು ಪುಟ್ಟರಾಜುಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

ಆದರೆ, ಬಿಜೆಪಿ ಮುಖಂಡ ಪ್ರೀತಂ ಗೌಡ ಮಾತ್ರ, ‘ಇಬ್ಬರು ಬಂಧಿತರು ನನ್ನ ಆಪ್ತ ಸಹಾಯಕರಲ್ಲ, ಕಚೇರಿ ಕೆಲಸಗಾರರು; ಹಾಸನ ಜಿಲ್ಲೆಯ ಎರಡು ಲಕ್ಷ ಜನರ ಬಳಿ ವಿಡಿಯೊ ಇವೆ’ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಗಂಭೀರವಾಗುತ್ತಿದ್ದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಲಾಗಿತ್ತು. ಹಿರಿಯ ಪೊಲೀಸರ ಹಲವು ತಂಡಗಳನ್ನು ರಚಿಸಿ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಎಸ್‌ಐಟಿ ತಂಡ ಹಾಸನದಲ್ಲಿ ಬೀಡುಬಿಟ್ಟಿದೆ. ಈ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರನ್ನು ಬಂಧಿಸಲಾಗುತ್ತಿದೆ. ಇದೀಗ ಮಾಜಿ ಶಾಸಕ ಪ್ರೀತಂ ಗೌಡ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಮತ್ತು ಆತನ ಸ್ನೇಹಿತ ಲಿಖಿತ್ ನನ್ನು ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ಅಧಿಕಾರಿಗಳು ಬಂಧಿಸಿದ್ದಾರೆ. ಲಿಖಿತ್ ಮತ್ತು ಚೇತನ್ ಪ್ರೀತಂ ಗೌಡ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ಸದ್ಯ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.

ಈ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪಿಯನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್, ಯೂಟ್ಯೂಬ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದ. ಪ್ರಜ್ವಲ್ ವಿರುದ್ಧ ಕುದೇರಮುಖ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67, 67 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದಾನೆ.

ಪ್ರೀತಂ ಗೌಡ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ವಿಡಿಯೊ ಹಂಚಿದ ಆರೋಪ ಮೇಲೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನ ಮಾಜಿ ಶಾಸಕ ಪ್ರೀತಂ ಗೌಡ, “ಹಾಸನದಲ್ಲಿ ಸಣ್ಣ ಯುವಕರಿಂದ 75 ವರ್ಷದ ಮುದುಕರವರೆಗೂ ಎಲ್ಲರ ಬಳಿಯೂ ವೀಡಿಯೊ ಇದೆ; ಎಲ್ಲರನ್ನೂ ಬಂಧನ ಮಾಡೋಕಾಗುತ್ತಾ” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಅಮಾಯಕ ಯುವಕನಿಗೂವೀಡಿಯೋ ಬಂದಿದೆ. ಅದನ್ನೇ ಅಪರಾಧ ಅಂದ್ರೆ ಹೇಗೆ? ವೀಡಿಯೋ ನೋಡಿದವರೆಲ್ಲ ತಪ್ಪಿತಸ್ಥರು ಅಂದ್ರೆ ಹಾಸನದ 15 ಲಕ್ಷ ಜನ ತಪ್ಪಿತಸ್ಥರಾಗ್ತಾರೆ. ತನಿಖೆ ಸರಿಯಾದ ರೀತಿಯಲ್ಲಿ ಆಗಬೇಕು” ಎಂದು ಹೇಳಿದ್ದಾರೆ.

“ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ; ಈ ಬಗ್ಗೆ ಚರ್ಚೆಯನ್ನೂ ನಾನು ಮಾಡಿಲ್ಲ. ನಮ್ಮ ಕಾರ್ಯಕರ್ತರ ಬಂಧನ ಆಗಿದ್ದಕ್ಕೆ ಮಾತನಾಡುತ್ತಿದ್ದೇನೆ. ನಮಗೂ ವೀಡಿಯೋಗೂ ಸಂಬಂಧ ಇಲ್ಲ” ಎಂದಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಡಿಯೊ ತುಣುಕುಗಳನ್ನು ಪ್ರಸಾರ ಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...