Homeಕರ್ನಾಟಕಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

ಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

- Advertisement -
- Advertisement -

ದೇಶದಲ್ಲೇ ಭಾರೀ ಸುದ್ದಿಯಾಗಿರುವ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ನಿರ್ಬಂಧ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳವುದನ್ನು ನಿರ್ಬಂಧಿಸುವವಂತೆ ಕೋರಿ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ. ಮಾಧ್ಯಮಗಳಲ್ಲಿ ತಮ್ಮ ಹೆಸರು ಬಳಸುವುದರಿಂದ ತಮ್ಮ ಘನತೆ, ಗೌರವಕ್ಕೆ ಧಕ್ಕೆಯಾಗುತ್ತಿದೆ. ನಮಗೆ ಸಮಾಜದಲ್ಲಿ ಉತ್ತಮ ಗೌರವ ಇದೆ. ಗೌರವಾನ್ವಿತ ಕುಟುಂಬದಿಂದ ಬಂದಿದ್ದೇವೆ. 70 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿರುವ ಕಕ್ಷಿದಾರರ ಬಗ್ಗೆ ಯಾವುದೇ ಆರೋಪಗಳಿಲ್ಲ ಎಂದು ಕೋರ್ಟ್‌ನಲ್ಲಿ ಹೇಳಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಿದ್ದಂತೆ ರೇವಣ್ಣ ಮತ್ತು ಅವರ ಕುಟುಂಬದಿಂದ ದೇವೇಗೌಡ ಮತ್ತು ಕುಮಾರಸ್ವಾಮಿ ದೂರ ಉಳಿದಿದ್ದಾರೆ. ಫಿರ್ಯಾದಿದಾರರು ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೂಲಕ ಸಮಸ್ಯೆಯಿಂದ ದೂರ ಸರಿದಿದ್ದರೂ, ಪ್ರತಿವಾದಿಗಳು ಪದೇ ಪದೇ ಮತ್ತು ಉದ್ದೇಶಪೂರ್ವಕವಾಗಿ ಲಿಂಕ್‌ ಮಾಡುತ್ತಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶರು ಹೆಚ್.ಡಿ ದೇವೇಗೌಡ ಮತ್ತು ಎಚ್. ಡಿ ಕುಮಾರಸ್ವಾಮಿ ಹೆಸರು ಬಳಸಂತೆ ಎಲೆಕ್ಟ್ರಾನಿಕ್‌ ಮಾದ್ಯಮಗಳು, ಪತ್ರಿಕೆಗಳು ಮತ್ತು ಸಾಮಾಜಿಕ ಜಾಲತಾಣಗಳಿಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.

ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳ ವೈರಲ್‌ ಬಳಿಕ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾನೆ. ಎಚ್‌ಡಿ ರೇವಣ್ಣ ಅವರನ್ನು ಎರಡು ದಿನಗಳ ಹಿಂದೆ ಪ್ರಜ್ವಲ್ ಲೈಂಗಿಕ ದೌರ್ಜನ್ಯ ನಡೆಸಿದ್ದ ಎನ್ನಲಾದ ಮಹಿಳೆಯನ್ನು ಅಪಹರಿಸಿರುವ ಆರೋಪದಲ್ಲಿ ಬಂಧಿಸಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ‘ಬ್ಲೂ ಕಾರ್ನರ್ ನೋಟಿಸ್’ ಜಾರಿ ಮಾಡಲಾಗಿದ್ದು, ಆತನ ಬಂಧನಕ್ಕೆ ದೇಶದಲ್ಲಿ ಭಾರೀ ಕೂಗು ಕೇಳಿ ಬಂದಿದೆ.

ಇದನ್ನು ಓದಿ: ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಎಎಪಿಯನ್ನು ಹತ್ತಿಕ್ಕಲು ಬಿಜೆಪಿ ಆಪರೇಷನ್ ಜಾದು ಆರಂಭಿಸಿದೆ..’; ಅರವಿಂದ್ ಕೇಜ್ರಿವಾಲ್

0
"ಪ್ರಧಾನಿ ನರೇಂದ್ರ ಮೋದಿ ಅವರು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕರೊಂದಿಗೆ ಇಂದು ಬಿಜೆಪಿ ಕೇಂದ್ರ ಕಚೇರಿಗೆ ಯೋಜಿತ...