Homeಚಳವಳಿಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

- Advertisement -
- Advertisement -

ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ!
ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು? ನಿನ್ನ ಬಳಿ ಸಾಕ್ಷಿ ಏನಿದೆ? ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪ್ರೇರಣೆಯಿಂದ ಹೀಗೆ ಪ್ರಶ್ನಿಸುತ್ತಿದ್ದೀಯಾ?
ಎಂದು ಪುಂಖಾನುಪುಂಖ ಪ್ರಶ್ನೆಗಳನ್ನು ಕೇಳುತ್ತಾ, ಆ ಹೆಣ್ಣುಮಗಳ ಬಾಯಿ ಮುಚ್ಚಿಸುವುದಕ್ಕೆ ನೋಡುತ್ತದೆ. ಆಮೇಲೆ ಅವಳೊಬ್ಬಳೇ ಅಲ್ಲ, ಯಾವ ಹೆಣ್ಣುಮಗಳೂ ಬಾಯಿ ತೆರೆಯಬಾರದು. ಯಾವತ್ತೂ ತನಗೆ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳಬಾರದು. ಒಂದು ಕೆಟ್ಟ ಸ್ಪರ್ಶವನ್ನು ಕೂಡ ಅದು ಸಹಜ ಎಂಬಂತೆ ಸ್ವೀಕರಿಸಬೇಕು ಎಂಬಂತೆ ಮಾಡುತ್ತದೆ.
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯ ಆಗಿದೆ ಎಂದಾಗ ಗಂಡು ಬಿಡಿ, ಹೆಣ್ಣು ಕೂಡ ಅದನ್ನು ಎಷ್ಟೋ ಸಲ ನಂಬುವುದಿಲ್ಲ. ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಅರೇ, ನನ್ನ ಜೊತೆ ಎಷ್ಟು ಚೆನ್ನಾಗಿ ಸಂಭಾವಿತರಂತೆ ನಡೆದುಕೊಂಡಿದ್ದಾರೆ. ಅಂಥವರು ಹೀಗೆ ಮಾಡಲು ಸಾಧ್ಯವೇ ಇಲ್ಲ ಎಂದು ತೀರ್ಪು ಕೊಟ್ಟುಬಿಡುತ್ತಾರೆ. ಅಲ್ಲಿಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.
ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಒಂದು ಹೆಣ್ಣಿನ ಬಾಯಿ ಮುಚ್ಚಿಸುವುದಕ್ಕೆ ಅದೆಷ್ಟು ಮಂದಿ ಶೂರರು, ವೀರರು, ಪರಾಕ್ರಮಿಗಳು ಒಟ್ಟಾಗಿದ್ದಾರೆ. ಎಷ್ಟೊಂದು ಕತೆಗಳನ್ನು ಹೆಣೆಯುತ್ತಿದ್ದಾರೆ. ಎಷ್ಟೊಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇದನ್ನು ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನೂ ತಂದು ರಾಜಕೀಯದ ಕೊಂಬಿಗೆ ಕಟ್ಟಿ ಪಾರಾಗುವುದು ಈ ಕಾಲದ ಜಾಯಮಾನ. ಅದು ರಾಜಕೀಯ ಕಣ್ರೀ ಅಂದುಬಿಟ್ಟರೆ ಅಲ್ಲಿಗೆ ಮುಗಿದುಹೋಯಿತು. ಹೆಣ್ಣಿನ ಮೇಲೆ ನಡೆದ ದೌರ್ಜನ್ಯದಿಂದ ಬೇಕಿದ್ದರೂ ಪಾರಾಗಬಹುದು. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಅಂತ ನನಗೆ ಅನ್ನಿಸಿಲ್ಲ. ಅವರ ಉದ್ದೇಶ ಹೆಣ್ಣು ಮಾತಾಡುವುದನ್ನು ಹೇಗಾದರೂ ಮಾಡಿ ತಡೆಯಬೇಕು ಅನ್ನುವುದು. ಯಾಕೆಂದರೆ ಸಿನಿಮಾ ಕ್ಷೇತ್ರದಲ್ಲಿರುವ ಮಹಿಳೆ ಮಾತಾಡಲು ಆರಂಭಿಸಿದರೆ ಯಾರ್ಯಾರ ಬಂಡವಾಳ ಹೊರಬೀಳುತ್ತದೋ ಹೇಳುವವರು ಯಾರು? ತನಗೆ ಸಂಬಂಧವೇ ಇಲ್ಲದೇ ಹೋದರೂ ನಿರ್ಮಾಪಕರ ಸಂಘ ಕಹಳೆ ಊದಿತು. ತನಗೆ ಸಂಬಂಧ ಇದ್ದರೂ ಕಲಾವಿದರ ಸಂಘ ಸುಮ್ಮನೆ ಕೂತುಬಿಟ್ಟಿತು. ವಾಣಿಜ್ಯ ಮಂಡಳಿಯೇ ದೇವಾಲಯ, ವಾಣಿಜ್ಯ ಮಂಡಳಿಯೇ ನ್ಯಾಯಾಲಯ ಅಂತ ಮತ್ತೊಬ್ಬರು ಇಡೀ ಪ್ರಸಂಗವನ್ನು ವಾಣಿಜ್ಯ ಮಂಡಳಿಯಲ್ಲೇ ತೀರ್ಮಾನಿಸಲು ಇಚ್ಚಿಸಿದರು. ಕೌರವರು ಮತ್ತು ಅವರಿಗೆ ತಮ್ಮನ್ನು ಮಾರಿಕೊಂಡ ಪಾಂಡವರ ನಡುವೆ ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಯೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನ್ನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದ್ದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
ಆದರೆ ಇಂಥ ಸಂಗತಿಗಳನ್ನು ಬೇರೆ ಬೇರೆ ವಿಚಾರಗಳನ್ನು ಎಳೆದು ತಂದು ತೆಳುವಾಗಿಸುವುದರಲ್ಲೇ ನಮ್ಮ ಸೋಲು ಅಡಗಿದೆ. ಇವತ್ತು ಶ್ರುತಿಗೆ ಆದದ್ದು ನಾಳೆ ನಮಗೂ ಆಗಬಹುದು. ನಾವು ನ್ಯಾಯದ ಪರ ನಿಲ್ಲುತ್ತೇವೆ ಅನ್ನುವ ನಂಬಿಕೆ ನಮಗಾದರೂ ಇರಬೇಕು. ಧೈರ್ಯವಾಗಿ ಮಾತಾಡುವುದಕ್ಕೆ ಶಕ್ತಿಯಿಲ್ಲದೇ ಹೋದರೆ ಮೌನವಾಗಿದ್ದೇ ಪ್ರತಿಭಟಿಸಬೇಕು. ಅದುಬಿಟ್ಟು ಅನ್ಯಾಯದ ಪರವಾಗಿ ನಿಂತು ಆ ಕ್ಷಣದಲ್ಲಿ ಪಾರಾಗಲು ನೋಡುವುದು ಮಾತ್ರ ಅನೈತಿಕತೆ ಎಂದು ಹೇಳಬಲ್ಲೆ.
ತಾನೇ ಕೆತ್ತುತ್ತಿರುವ ಪುರುಷೋತ್ತಮನ ಮೂರ್ತಿಯಾದ ಶ್ರೀರಾಮನನ್ನೂ ಅಗ್ನಿದಿವ್ಯಕ್ಕೆ ಒಡ್ಡಿದವನು ವಾಲ್ಮೀಕಿ. ವಾಲಿಯನ್ನು ಕೊಲ್ಲುವ ವಿಚಾರದಲ್ಲಿ ರಾಮ ಮರೆಯಲ್ಲಿ ನಿಂತು ಬಾಣ ಬಿಟ್ಟ ಅನ್ನುವುದನ್ನು ವಾಲ್ಮೀಕಿ ಮುಚ್ಚಿಡುವುದಕ್ಕೆ ಹೋಗುವುದಿಲ್ಲ. ಅದನ್ನು ಹೇಳಿದ್ದರಿಂದ ರಾಮನ ಘನತೆ ಕುಗ್ಗಲೂ ಇಲ್ಲ. ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ ಅನ್ನುವುದು ಗೊತ್ತಿದ್ದರೆ, ಇವತ್ತು ಶ್ರುತಿಯ ಪ್ರಸಂಗ ಅಹಂಕಾರದ ಪ್ರಶ್ನೆಯಾಗಿ ನಿಂತು, ವಂಶ ಪ್ರತಿಷ್ಠೆಯಾಗುವ ಬದಲು, ಒಂದು ಮಾನವೀಯ ಪ್ರಶ್ನೆಯಾಗುತ್ತಿತ್ತು.
ಹಾಗಾಗಲಿಲ್ಲ ಅನ್ನುವುದೇ ನನ್ನನ್ನು ಮಾತಾಡುವಂತೆ ಪ್ರೇರೇಪಿಸಿದೆ.

– ಪ್ರಕಾಶ್ ರೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...