Homeಚಳವಳಿಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

- Advertisement -
- Advertisement -

ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ!
ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು? ನಿನ್ನ ಬಳಿ ಸಾಕ್ಷಿ ಏನಿದೆ? ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪ್ರೇರಣೆಯಿಂದ ಹೀಗೆ ಪ್ರಶ್ನಿಸುತ್ತಿದ್ದೀಯಾ?
ಎಂದು ಪುಂಖಾನುಪುಂಖ ಪ್ರಶ್ನೆಗಳನ್ನು ಕೇಳುತ್ತಾ, ಆ ಹೆಣ್ಣುಮಗಳ ಬಾಯಿ ಮುಚ್ಚಿಸುವುದಕ್ಕೆ ನೋಡುತ್ತದೆ. ಆಮೇಲೆ ಅವಳೊಬ್ಬಳೇ ಅಲ್ಲ, ಯಾವ ಹೆಣ್ಣುಮಗಳೂ ಬಾಯಿ ತೆರೆಯಬಾರದು. ಯಾವತ್ತೂ ತನಗೆ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳಬಾರದು. ಒಂದು ಕೆಟ್ಟ ಸ್ಪರ್ಶವನ್ನು ಕೂಡ ಅದು ಸಹಜ ಎಂಬಂತೆ ಸ್ವೀಕರಿಸಬೇಕು ಎಂಬಂತೆ ಮಾಡುತ್ತದೆ.
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯ ಆಗಿದೆ ಎಂದಾಗ ಗಂಡು ಬಿಡಿ, ಹೆಣ್ಣು ಕೂಡ ಅದನ್ನು ಎಷ್ಟೋ ಸಲ ನಂಬುವುದಿಲ್ಲ. ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಅರೇ, ನನ್ನ ಜೊತೆ ಎಷ್ಟು ಚೆನ್ನಾಗಿ ಸಂಭಾವಿತರಂತೆ ನಡೆದುಕೊಂಡಿದ್ದಾರೆ. ಅಂಥವರು ಹೀಗೆ ಮಾಡಲು ಸಾಧ್ಯವೇ ಇಲ್ಲ ಎಂದು ತೀರ್ಪು ಕೊಟ್ಟುಬಿಡುತ್ತಾರೆ. ಅಲ್ಲಿಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.
ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಒಂದು ಹೆಣ್ಣಿನ ಬಾಯಿ ಮುಚ್ಚಿಸುವುದಕ್ಕೆ ಅದೆಷ್ಟು ಮಂದಿ ಶೂರರು, ವೀರರು, ಪರಾಕ್ರಮಿಗಳು ಒಟ್ಟಾಗಿದ್ದಾರೆ. ಎಷ್ಟೊಂದು ಕತೆಗಳನ್ನು ಹೆಣೆಯುತ್ತಿದ್ದಾರೆ. ಎಷ್ಟೊಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇದನ್ನು ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನೂ ತಂದು ರಾಜಕೀಯದ ಕೊಂಬಿಗೆ ಕಟ್ಟಿ ಪಾರಾಗುವುದು ಈ ಕಾಲದ ಜಾಯಮಾನ. ಅದು ರಾಜಕೀಯ ಕಣ್ರೀ ಅಂದುಬಿಟ್ಟರೆ ಅಲ್ಲಿಗೆ ಮುಗಿದುಹೋಯಿತು. ಹೆಣ್ಣಿನ ಮೇಲೆ ನಡೆದ ದೌರ್ಜನ್ಯದಿಂದ ಬೇಕಿದ್ದರೂ ಪಾರಾಗಬಹುದು. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಅಂತ ನನಗೆ ಅನ್ನಿಸಿಲ್ಲ. ಅವರ ಉದ್ದೇಶ ಹೆಣ್ಣು ಮಾತಾಡುವುದನ್ನು ಹೇಗಾದರೂ ಮಾಡಿ ತಡೆಯಬೇಕು ಅನ್ನುವುದು. ಯಾಕೆಂದರೆ ಸಿನಿಮಾ ಕ್ಷೇತ್ರದಲ್ಲಿರುವ ಮಹಿಳೆ ಮಾತಾಡಲು ಆರಂಭಿಸಿದರೆ ಯಾರ್ಯಾರ ಬಂಡವಾಳ ಹೊರಬೀಳುತ್ತದೋ ಹೇಳುವವರು ಯಾರು? ತನಗೆ ಸಂಬಂಧವೇ ಇಲ್ಲದೇ ಹೋದರೂ ನಿರ್ಮಾಪಕರ ಸಂಘ ಕಹಳೆ ಊದಿತು. ತನಗೆ ಸಂಬಂಧ ಇದ್ದರೂ ಕಲಾವಿದರ ಸಂಘ ಸುಮ್ಮನೆ ಕೂತುಬಿಟ್ಟಿತು. ವಾಣಿಜ್ಯ ಮಂಡಳಿಯೇ ದೇವಾಲಯ, ವಾಣಿಜ್ಯ ಮಂಡಳಿಯೇ ನ್ಯಾಯಾಲಯ ಅಂತ ಮತ್ತೊಬ್ಬರು ಇಡೀ ಪ್ರಸಂಗವನ್ನು ವಾಣಿಜ್ಯ ಮಂಡಳಿಯಲ್ಲೇ ತೀರ್ಮಾನಿಸಲು ಇಚ್ಚಿಸಿದರು. ಕೌರವರು ಮತ್ತು ಅವರಿಗೆ ತಮ್ಮನ್ನು ಮಾರಿಕೊಂಡ ಪಾಂಡವರ ನಡುವೆ ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಯೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನ್ನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದ್ದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
ಆದರೆ ಇಂಥ ಸಂಗತಿಗಳನ್ನು ಬೇರೆ ಬೇರೆ ವಿಚಾರಗಳನ್ನು ಎಳೆದು ತಂದು ತೆಳುವಾಗಿಸುವುದರಲ್ಲೇ ನಮ್ಮ ಸೋಲು ಅಡಗಿದೆ. ಇವತ್ತು ಶ್ರುತಿಗೆ ಆದದ್ದು ನಾಳೆ ನಮಗೂ ಆಗಬಹುದು. ನಾವು ನ್ಯಾಯದ ಪರ ನಿಲ್ಲುತ್ತೇವೆ ಅನ್ನುವ ನಂಬಿಕೆ ನಮಗಾದರೂ ಇರಬೇಕು. ಧೈರ್ಯವಾಗಿ ಮಾತಾಡುವುದಕ್ಕೆ ಶಕ್ತಿಯಿಲ್ಲದೇ ಹೋದರೆ ಮೌನವಾಗಿದ್ದೇ ಪ್ರತಿಭಟಿಸಬೇಕು. ಅದುಬಿಟ್ಟು ಅನ್ಯಾಯದ ಪರವಾಗಿ ನಿಂತು ಆ ಕ್ಷಣದಲ್ಲಿ ಪಾರಾಗಲು ನೋಡುವುದು ಮಾತ್ರ ಅನೈತಿಕತೆ ಎಂದು ಹೇಳಬಲ್ಲೆ.
ತಾನೇ ಕೆತ್ತುತ್ತಿರುವ ಪುರುಷೋತ್ತಮನ ಮೂರ್ತಿಯಾದ ಶ್ರೀರಾಮನನ್ನೂ ಅಗ್ನಿದಿವ್ಯಕ್ಕೆ ಒಡ್ಡಿದವನು ವಾಲ್ಮೀಕಿ. ವಾಲಿಯನ್ನು ಕೊಲ್ಲುವ ವಿಚಾರದಲ್ಲಿ ರಾಮ ಮರೆಯಲ್ಲಿ ನಿಂತು ಬಾಣ ಬಿಟ್ಟ ಅನ್ನುವುದನ್ನು ವಾಲ್ಮೀಕಿ ಮುಚ್ಚಿಡುವುದಕ್ಕೆ ಹೋಗುವುದಿಲ್ಲ. ಅದನ್ನು ಹೇಳಿದ್ದರಿಂದ ರಾಮನ ಘನತೆ ಕುಗ್ಗಲೂ ಇಲ್ಲ. ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ ಅನ್ನುವುದು ಗೊತ್ತಿದ್ದರೆ, ಇವತ್ತು ಶ್ರುತಿಯ ಪ್ರಸಂಗ ಅಹಂಕಾರದ ಪ್ರಶ್ನೆಯಾಗಿ ನಿಂತು, ವಂಶ ಪ್ರತಿಷ್ಠೆಯಾಗುವ ಬದಲು, ಒಂದು ಮಾನವೀಯ ಪ್ರಶ್ನೆಯಾಗುತ್ತಿತ್ತು.
ಹಾಗಾಗಲಿಲ್ಲ ಅನ್ನುವುದೇ ನನ್ನನ್ನು ಮಾತಾಡುವಂತೆ ಪ್ರೇರೇಪಿಸಿದೆ.

– ಪ್ರಕಾಶ್ ರೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....