Homeಚಳವಳಿಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

- Advertisement -
- Advertisement -

ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ!
ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು? ನಿನ್ನ ಬಳಿ ಸಾಕ್ಷಿ ಏನಿದೆ? ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪ್ರೇರಣೆಯಿಂದ ಹೀಗೆ ಪ್ರಶ್ನಿಸುತ್ತಿದ್ದೀಯಾ?
ಎಂದು ಪುಂಖಾನುಪುಂಖ ಪ್ರಶ್ನೆಗಳನ್ನು ಕೇಳುತ್ತಾ, ಆ ಹೆಣ್ಣುಮಗಳ ಬಾಯಿ ಮುಚ್ಚಿಸುವುದಕ್ಕೆ ನೋಡುತ್ತದೆ. ಆಮೇಲೆ ಅವಳೊಬ್ಬಳೇ ಅಲ್ಲ, ಯಾವ ಹೆಣ್ಣುಮಗಳೂ ಬಾಯಿ ತೆರೆಯಬಾರದು. ಯಾವತ್ತೂ ತನಗೆ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳಬಾರದು. ಒಂದು ಕೆಟ್ಟ ಸ್ಪರ್ಶವನ್ನು ಕೂಡ ಅದು ಸಹಜ ಎಂಬಂತೆ ಸ್ವೀಕರಿಸಬೇಕು ಎಂಬಂತೆ ಮಾಡುತ್ತದೆ.
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯ ಆಗಿದೆ ಎಂದಾಗ ಗಂಡು ಬಿಡಿ, ಹೆಣ್ಣು ಕೂಡ ಅದನ್ನು ಎಷ್ಟೋ ಸಲ ನಂಬುವುದಿಲ್ಲ. ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಅರೇ, ನನ್ನ ಜೊತೆ ಎಷ್ಟು ಚೆನ್ನಾಗಿ ಸಂಭಾವಿತರಂತೆ ನಡೆದುಕೊಂಡಿದ್ದಾರೆ. ಅಂಥವರು ಹೀಗೆ ಮಾಡಲು ಸಾಧ್ಯವೇ ಇಲ್ಲ ಎಂದು ತೀರ್ಪು ಕೊಟ್ಟುಬಿಡುತ್ತಾರೆ. ಅಲ್ಲಿಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.
ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಒಂದು ಹೆಣ್ಣಿನ ಬಾಯಿ ಮುಚ್ಚಿಸುವುದಕ್ಕೆ ಅದೆಷ್ಟು ಮಂದಿ ಶೂರರು, ವೀರರು, ಪರಾಕ್ರಮಿಗಳು ಒಟ್ಟಾಗಿದ್ದಾರೆ. ಎಷ್ಟೊಂದು ಕತೆಗಳನ್ನು ಹೆಣೆಯುತ್ತಿದ್ದಾರೆ. ಎಷ್ಟೊಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇದನ್ನು ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನೂ ತಂದು ರಾಜಕೀಯದ ಕೊಂಬಿಗೆ ಕಟ್ಟಿ ಪಾರಾಗುವುದು ಈ ಕಾಲದ ಜಾಯಮಾನ. ಅದು ರಾಜಕೀಯ ಕಣ್ರೀ ಅಂದುಬಿಟ್ಟರೆ ಅಲ್ಲಿಗೆ ಮುಗಿದುಹೋಯಿತು. ಹೆಣ್ಣಿನ ಮೇಲೆ ನಡೆದ ದೌರ್ಜನ್ಯದಿಂದ ಬೇಕಿದ್ದರೂ ಪಾರಾಗಬಹುದು. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಅಂತ ನನಗೆ ಅನ್ನಿಸಿಲ್ಲ. ಅವರ ಉದ್ದೇಶ ಹೆಣ್ಣು ಮಾತಾಡುವುದನ್ನು ಹೇಗಾದರೂ ಮಾಡಿ ತಡೆಯಬೇಕು ಅನ್ನುವುದು. ಯಾಕೆಂದರೆ ಸಿನಿಮಾ ಕ್ಷೇತ್ರದಲ್ಲಿರುವ ಮಹಿಳೆ ಮಾತಾಡಲು ಆರಂಭಿಸಿದರೆ ಯಾರ್ಯಾರ ಬಂಡವಾಳ ಹೊರಬೀಳುತ್ತದೋ ಹೇಳುವವರು ಯಾರು? ತನಗೆ ಸಂಬಂಧವೇ ಇಲ್ಲದೇ ಹೋದರೂ ನಿರ್ಮಾಪಕರ ಸಂಘ ಕಹಳೆ ಊದಿತು. ತನಗೆ ಸಂಬಂಧ ಇದ್ದರೂ ಕಲಾವಿದರ ಸಂಘ ಸುಮ್ಮನೆ ಕೂತುಬಿಟ್ಟಿತು. ವಾಣಿಜ್ಯ ಮಂಡಳಿಯೇ ದೇವಾಲಯ, ವಾಣಿಜ್ಯ ಮಂಡಳಿಯೇ ನ್ಯಾಯಾಲಯ ಅಂತ ಮತ್ತೊಬ್ಬರು ಇಡೀ ಪ್ರಸಂಗವನ್ನು ವಾಣಿಜ್ಯ ಮಂಡಳಿಯಲ್ಲೇ ತೀರ್ಮಾನಿಸಲು ಇಚ್ಚಿಸಿದರು. ಕೌರವರು ಮತ್ತು ಅವರಿಗೆ ತಮ್ಮನ್ನು ಮಾರಿಕೊಂಡ ಪಾಂಡವರ ನಡುವೆ ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಯೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನ್ನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದ್ದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
ಆದರೆ ಇಂಥ ಸಂಗತಿಗಳನ್ನು ಬೇರೆ ಬೇರೆ ವಿಚಾರಗಳನ್ನು ಎಳೆದು ತಂದು ತೆಳುವಾಗಿಸುವುದರಲ್ಲೇ ನಮ್ಮ ಸೋಲು ಅಡಗಿದೆ. ಇವತ್ತು ಶ್ರುತಿಗೆ ಆದದ್ದು ನಾಳೆ ನಮಗೂ ಆಗಬಹುದು. ನಾವು ನ್ಯಾಯದ ಪರ ನಿಲ್ಲುತ್ತೇವೆ ಅನ್ನುವ ನಂಬಿಕೆ ನಮಗಾದರೂ ಇರಬೇಕು. ಧೈರ್ಯವಾಗಿ ಮಾತಾಡುವುದಕ್ಕೆ ಶಕ್ತಿಯಿಲ್ಲದೇ ಹೋದರೆ ಮೌನವಾಗಿದ್ದೇ ಪ್ರತಿಭಟಿಸಬೇಕು. ಅದುಬಿಟ್ಟು ಅನ್ಯಾಯದ ಪರವಾಗಿ ನಿಂತು ಆ ಕ್ಷಣದಲ್ಲಿ ಪಾರಾಗಲು ನೋಡುವುದು ಮಾತ್ರ ಅನೈತಿಕತೆ ಎಂದು ಹೇಳಬಲ್ಲೆ.
ತಾನೇ ಕೆತ್ತುತ್ತಿರುವ ಪುರುಷೋತ್ತಮನ ಮೂರ್ತಿಯಾದ ಶ್ರೀರಾಮನನ್ನೂ ಅಗ್ನಿದಿವ್ಯಕ್ಕೆ ಒಡ್ಡಿದವನು ವಾಲ್ಮೀಕಿ. ವಾಲಿಯನ್ನು ಕೊಲ್ಲುವ ವಿಚಾರದಲ್ಲಿ ರಾಮ ಮರೆಯಲ್ಲಿ ನಿಂತು ಬಾಣ ಬಿಟ್ಟ ಅನ್ನುವುದನ್ನು ವಾಲ್ಮೀಕಿ ಮುಚ್ಚಿಡುವುದಕ್ಕೆ ಹೋಗುವುದಿಲ್ಲ. ಅದನ್ನು ಹೇಳಿದ್ದರಿಂದ ರಾಮನ ಘನತೆ ಕುಗ್ಗಲೂ ಇಲ್ಲ. ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ ಅನ್ನುವುದು ಗೊತ್ತಿದ್ದರೆ, ಇವತ್ತು ಶ್ರುತಿಯ ಪ್ರಸಂಗ ಅಹಂಕಾರದ ಪ್ರಶ್ನೆಯಾಗಿ ನಿಂತು, ವಂಶ ಪ್ರತಿಷ್ಠೆಯಾಗುವ ಬದಲು, ಒಂದು ಮಾನವೀಯ ಪ್ರಶ್ನೆಯಾಗುತ್ತಿತ್ತು.
ಹಾಗಾಗಲಿಲ್ಲ ಅನ್ನುವುದೇ ನನ್ನನ್ನು ಮಾತಾಡುವಂತೆ ಪ್ರೇರೇಪಿಸಿದೆ.

– ಪ್ರಕಾಶ್ ರೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...