Homeಚಳವಳಿಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

- Advertisement -
- Advertisement -

ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ!
ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು? ನಿನ್ನ ಬಳಿ ಸಾಕ್ಷಿ ಏನಿದೆ? ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪ್ರೇರಣೆಯಿಂದ ಹೀಗೆ ಪ್ರಶ್ನಿಸುತ್ತಿದ್ದೀಯಾ?
ಎಂದು ಪುಂಖಾನುಪುಂಖ ಪ್ರಶ್ನೆಗಳನ್ನು ಕೇಳುತ್ತಾ, ಆ ಹೆಣ್ಣುಮಗಳ ಬಾಯಿ ಮುಚ್ಚಿಸುವುದಕ್ಕೆ ನೋಡುತ್ತದೆ. ಆಮೇಲೆ ಅವಳೊಬ್ಬಳೇ ಅಲ್ಲ, ಯಾವ ಹೆಣ್ಣುಮಗಳೂ ಬಾಯಿ ತೆರೆಯಬಾರದು. ಯಾವತ್ತೂ ತನಗೆ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳಬಾರದು. ಒಂದು ಕೆಟ್ಟ ಸ್ಪರ್ಶವನ್ನು ಕೂಡ ಅದು ಸಹಜ ಎಂಬಂತೆ ಸ್ವೀಕರಿಸಬೇಕು ಎಂಬಂತೆ ಮಾಡುತ್ತದೆ.
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯ ಆಗಿದೆ ಎಂದಾಗ ಗಂಡು ಬಿಡಿ, ಹೆಣ್ಣು ಕೂಡ ಅದನ್ನು ಎಷ್ಟೋ ಸಲ ನಂಬುವುದಿಲ್ಲ. ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಅರೇ, ನನ್ನ ಜೊತೆ ಎಷ್ಟು ಚೆನ್ನಾಗಿ ಸಂಭಾವಿತರಂತೆ ನಡೆದುಕೊಂಡಿದ್ದಾರೆ. ಅಂಥವರು ಹೀಗೆ ಮಾಡಲು ಸಾಧ್ಯವೇ ಇಲ್ಲ ಎಂದು ತೀರ್ಪು ಕೊಟ್ಟುಬಿಡುತ್ತಾರೆ. ಅಲ್ಲಿಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.
ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಒಂದು ಹೆಣ್ಣಿನ ಬಾಯಿ ಮುಚ್ಚಿಸುವುದಕ್ಕೆ ಅದೆಷ್ಟು ಮಂದಿ ಶೂರರು, ವೀರರು, ಪರಾಕ್ರಮಿಗಳು ಒಟ್ಟಾಗಿದ್ದಾರೆ. ಎಷ್ಟೊಂದು ಕತೆಗಳನ್ನು ಹೆಣೆಯುತ್ತಿದ್ದಾರೆ. ಎಷ್ಟೊಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇದನ್ನು ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನೂ ತಂದು ರಾಜಕೀಯದ ಕೊಂಬಿಗೆ ಕಟ್ಟಿ ಪಾರಾಗುವುದು ಈ ಕಾಲದ ಜಾಯಮಾನ. ಅದು ರಾಜಕೀಯ ಕಣ್ರೀ ಅಂದುಬಿಟ್ಟರೆ ಅಲ್ಲಿಗೆ ಮುಗಿದುಹೋಯಿತು. ಹೆಣ್ಣಿನ ಮೇಲೆ ನಡೆದ ದೌರ್ಜನ್ಯದಿಂದ ಬೇಕಿದ್ದರೂ ಪಾರಾಗಬಹುದು. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಅಂತ ನನಗೆ ಅನ್ನಿಸಿಲ್ಲ. ಅವರ ಉದ್ದೇಶ ಹೆಣ್ಣು ಮಾತಾಡುವುದನ್ನು ಹೇಗಾದರೂ ಮಾಡಿ ತಡೆಯಬೇಕು ಅನ್ನುವುದು. ಯಾಕೆಂದರೆ ಸಿನಿಮಾ ಕ್ಷೇತ್ರದಲ್ಲಿರುವ ಮಹಿಳೆ ಮಾತಾಡಲು ಆರಂಭಿಸಿದರೆ ಯಾರ್ಯಾರ ಬಂಡವಾಳ ಹೊರಬೀಳುತ್ತದೋ ಹೇಳುವವರು ಯಾರು? ತನಗೆ ಸಂಬಂಧವೇ ಇಲ್ಲದೇ ಹೋದರೂ ನಿರ್ಮಾಪಕರ ಸಂಘ ಕಹಳೆ ಊದಿತು. ತನಗೆ ಸಂಬಂಧ ಇದ್ದರೂ ಕಲಾವಿದರ ಸಂಘ ಸುಮ್ಮನೆ ಕೂತುಬಿಟ್ಟಿತು. ವಾಣಿಜ್ಯ ಮಂಡಳಿಯೇ ದೇವಾಲಯ, ವಾಣಿಜ್ಯ ಮಂಡಳಿಯೇ ನ್ಯಾಯಾಲಯ ಅಂತ ಮತ್ತೊಬ್ಬರು ಇಡೀ ಪ್ರಸಂಗವನ್ನು ವಾಣಿಜ್ಯ ಮಂಡಳಿಯಲ್ಲೇ ತೀರ್ಮಾನಿಸಲು ಇಚ್ಚಿಸಿದರು. ಕೌರವರು ಮತ್ತು ಅವರಿಗೆ ತಮ್ಮನ್ನು ಮಾರಿಕೊಂಡ ಪಾಂಡವರ ನಡುವೆ ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಯೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನ್ನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದ್ದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
ಆದರೆ ಇಂಥ ಸಂಗತಿಗಳನ್ನು ಬೇರೆ ಬೇರೆ ವಿಚಾರಗಳನ್ನು ಎಳೆದು ತಂದು ತೆಳುವಾಗಿಸುವುದರಲ್ಲೇ ನಮ್ಮ ಸೋಲು ಅಡಗಿದೆ. ಇವತ್ತು ಶ್ರುತಿಗೆ ಆದದ್ದು ನಾಳೆ ನಮಗೂ ಆಗಬಹುದು. ನಾವು ನ್ಯಾಯದ ಪರ ನಿಲ್ಲುತ್ತೇವೆ ಅನ್ನುವ ನಂಬಿಕೆ ನಮಗಾದರೂ ಇರಬೇಕು. ಧೈರ್ಯವಾಗಿ ಮಾತಾಡುವುದಕ್ಕೆ ಶಕ್ತಿಯಿಲ್ಲದೇ ಹೋದರೆ ಮೌನವಾಗಿದ್ದೇ ಪ್ರತಿಭಟಿಸಬೇಕು. ಅದುಬಿಟ್ಟು ಅನ್ಯಾಯದ ಪರವಾಗಿ ನಿಂತು ಆ ಕ್ಷಣದಲ್ಲಿ ಪಾರಾಗಲು ನೋಡುವುದು ಮಾತ್ರ ಅನೈತಿಕತೆ ಎಂದು ಹೇಳಬಲ್ಲೆ.
ತಾನೇ ಕೆತ್ತುತ್ತಿರುವ ಪುರುಷೋತ್ತಮನ ಮೂರ್ತಿಯಾದ ಶ್ರೀರಾಮನನ್ನೂ ಅಗ್ನಿದಿವ್ಯಕ್ಕೆ ಒಡ್ಡಿದವನು ವಾಲ್ಮೀಕಿ. ವಾಲಿಯನ್ನು ಕೊಲ್ಲುವ ವಿಚಾರದಲ್ಲಿ ರಾಮ ಮರೆಯಲ್ಲಿ ನಿಂತು ಬಾಣ ಬಿಟ್ಟ ಅನ್ನುವುದನ್ನು ವಾಲ್ಮೀಕಿ ಮುಚ್ಚಿಡುವುದಕ್ಕೆ ಹೋಗುವುದಿಲ್ಲ. ಅದನ್ನು ಹೇಳಿದ್ದರಿಂದ ರಾಮನ ಘನತೆ ಕುಗ್ಗಲೂ ಇಲ್ಲ. ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ ಅನ್ನುವುದು ಗೊತ್ತಿದ್ದರೆ, ಇವತ್ತು ಶ್ರುತಿಯ ಪ್ರಸಂಗ ಅಹಂಕಾರದ ಪ್ರಶ್ನೆಯಾಗಿ ನಿಂತು, ವಂಶ ಪ್ರತಿಷ್ಠೆಯಾಗುವ ಬದಲು, ಒಂದು ಮಾನವೀಯ ಪ್ರಶ್ನೆಯಾಗುತ್ತಿತ್ತು.
ಹಾಗಾಗಲಿಲ್ಲ ಅನ್ನುವುದೇ ನನ್ನನ್ನು ಮಾತಾಡುವಂತೆ ಪ್ರೇರೇಪಿಸಿದೆ.

– ಪ್ರಕಾಶ್ ರೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...