Homeಚಳವಳಿಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

- Advertisement -
- Advertisement -

ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ!
ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು? ನಿನ್ನ ಬಳಿ ಸಾಕ್ಷಿ ಏನಿದೆ? ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪ್ರೇರಣೆಯಿಂದ ಹೀಗೆ ಪ್ರಶ್ನಿಸುತ್ತಿದ್ದೀಯಾ?
ಎಂದು ಪುಂಖಾನುಪುಂಖ ಪ್ರಶ್ನೆಗಳನ್ನು ಕೇಳುತ್ತಾ, ಆ ಹೆಣ್ಣುಮಗಳ ಬಾಯಿ ಮುಚ್ಚಿಸುವುದಕ್ಕೆ ನೋಡುತ್ತದೆ. ಆಮೇಲೆ ಅವಳೊಬ್ಬಳೇ ಅಲ್ಲ, ಯಾವ ಹೆಣ್ಣುಮಗಳೂ ಬಾಯಿ ತೆರೆಯಬಾರದು. ಯಾವತ್ತೂ ತನಗೆ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳಬಾರದು. ಒಂದು ಕೆಟ್ಟ ಸ್ಪರ್ಶವನ್ನು ಕೂಡ ಅದು ಸಹಜ ಎಂಬಂತೆ ಸ್ವೀಕರಿಸಬೇಕು ಎಂಬಂತೆ ಮಾಡುತ್ತದೆ.
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯ ಆಗಿದೆ ಎಂದಾಗ ಗಂಡು ಬಿಡಿ, ಹೆಣ್ಣು ಕೂಡ ಅದನ್ನು ಎಷ್ಟೋ ಸಲ ನಂಬುವುದಿಲ್ಲ. ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಅರೇ, ನನ್ನ ಜೊತೆ ಎಷ್ಟು ಚೆನ್ನಾಗಿ ಸಂಭಾವಿತರಂತೆ ನಡೆದುಕೊಂಡಿದ್ದಾರೆ. ಅಂಥವರು ಹೀಗೆ ಮಾಡಲು ಸಾಧ್ಯವೇ ಇಲ್ಲ ಎಂದು ತೀರ್ಪು ಕೊಟ್ಟುಬಿಡುತ್ತಾರೆ. ಅಲ್ಲಿಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.
ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಒಂದು ಹೆಣ್ಣಿನ ಬಾಯಿ ಮುಚ್ಚಿಸುವುದಕ್ಕೆ ಅದೆಷ್ಟು ಮಂದಿ ಶೂರರು, ವೀರರು, ಪರಾಕ್ರಮಿಗಳು ಒಟ್ಟಾಗಿದ್ದಾರೆ. ಎಷ್ಟೊಂದು ಕತೆಗಳನ್ನು ಹೆಣೆಯುತ್ತಿದ್ದಾರೆ. ಎಷ್ಟೊಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇದನ್ನು ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನೂ ತಂದು ರಾಜಕೀಯದ ಕೊಂಬಿಗೆ ಕಟ್ಟಿ ಪಾರಾಗುವುದು ಈ ಕಾಲದ ಜಾಯಮಾನ. ಅದು ರಾಜಕೀಯ ಕಣ್ರೀ ಅಂದುಬಿಟ್ಟರೆ ಅಲ್ಲಿಗೆ ಮುಗಿದುಹೋಯಿತು. ಹೆಣ್ಣಿನ ಮೇಲೆ ನಡೆದ ದೌರ್ಜನ್ಯದಿಂದ ಬೇಕಿದ್ದರೂ ಪಾರಾಗಬಹುದು. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಅಂತ ನನಗೆ ಅನ್ನಿಸಿಲ್ಲ. ಅವರ ಉದ್ದೇಶ ಹೆಣ್ಣು ಮಾತಾಡುವುದನ್ನು ಹೇಗಾದರೂ ಮಾಡಿ ತಡೆಯಬೇಕು ಅನ್ನುವುದು. ಯಾಕೆಂದರೆ ಸಿನಿಮಾ ಕ್ಷೇತ್ರದಲ್ಲಿರುವ ಮಹಿಳೆ ಮಾತಾಡಲು ಆರಂಭಿಸಿದರೆ ಯಾರ್ಯಾರ ಬಂಡವಾಳ ಹೊರಬೀಳುತ್ತದೋ ಹೇಳುವವರು ಯಾರು? ತನಗೆ ಸಂಬಂಧವೇ ಇಲ್ಲದೇ ಹೋದರೂ ನಿರ್ಮಾಪಕರ ಸಂಘ ಕಹಳೆ ಊದಿತು. ತನಗೆ ಸಂಬಂಧ ಇದ್ದರೂ ಕಲಾವಿದರ ಸಂಘ ಸುಮ್ಮನೆ ಕೂತುಬಿಟ್ಟಿತು. ವಾಣಿಜ್ಯ ಮಂಡಳಿಯೇ ದೇವಾಲಯ, ವಾಣಿಜ್ಯ ಮಂಡಳಿಯೇ ನ್ಯಾಯಾಲಯ ಅಂತ ಮತ್ತೊಬ್ಬರು ಇಡೀ ಪ್ರಸಂಗವನ್ನು ವಾಣಿಜ್ಯ ಮಂಡಳಿಯಲ್ಲೇ ತೀರ್ಮಾನಿಸಲು ಇಚ್ಚಿಸಿದರು. ಕೌರವರು ಮತ್ತು ಅವರಿಗೆ ತಮ್ಮನ್ನು ಮಾರಿಕೊಂಡ ಪಾಂಡವರ ನಡುವೆ ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಯೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನ್ನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದ್ದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
ಆದರೆ ಇಂಥ ಸಂಗತಿಗಳನ್ನು ಬೇರೆ ಬೇರೆ ವಿಚಾರಗಳನ್ನು ಎಳೆದು ತಂದು ತೆಳುವಾಗಿಸುವುದರಲ್ಲೇ ನಮ್ಮ ಸೋಲು ಅಡಗಿದೆ. ಇವತ್ತು ಶ್ರುತಿಗೆ ಆದದ್ದು ನಾಳೆ ನಮಗೂ ಆಗಬಹುದು. ನಾವು ನ್ಯಾಯದ ಪರ ನಿಲ್ಲುತ್ತೇವೆ ಅನ್ನುವ ನಂಬಿಕೆ ನಮಗಾದರೂ ಇರಬೇಕು. ಧೈರ್ಯವಾಗಿ ಮಾತಾಡುವುದಕ್ಕೆ ಶಕ್ತಿಯಿಲ್ಲದೇ ಹೋದರೆ ಮೌನವಾಗಿದ್ದೇ ಪ್ರತಿಭಟಿಸಬೇಕು. ಅದುಬಿಟ್ಟು ಅನ್ಯಾಯದ ಪರವಾಗಿ ನಿಂತು ಆ ಕ್ಷಣದಲ್ಲಿ ಪಾರಾಗಲು ನೋಡುವುದು ಮಾತ್ರ ಅನೈತಿಕತೆ ಎಂದು ಹೇಳಬಲ್ಲೆ.
ತಾನೇ ಕೆತ್ತುತ್ತಿರುವ ಪುರುಷೋತ್ತಮನ ಮೂರ್ತಿಯಾದ ಶ್ರೀರಾಮನನ್ನೂ ಅಗ್ನಿದಿವ್ಯಕ್ಕೆ ಒಡ್ಡಿದವನು ವಾಲ್ಮೀಕಿ. ವಾಲಿಯನ್ನು ಕೊಲ್ಲುವ ವಿಚಾರದಲ್ಲಿ ರಾಮ ಮರೆಯಲ್ಲಿ ನಿಂತು ಬಾಣ ಬಿಟ್ಟ ಅನ್ನುವುದನ್ನು ವಾಲ್ಮೀಕಿ ಮುಚ್ಚಿಡುವುದಕ್ಕೆ ಹೋಗುವುದಿಲ್ಲ. ಅದನ್ನು ಹೇಳಿದ್ದರಿಂದ ರಾಮನ ಘನತೆ ಕುಗ್ಗಲೂ ಇಲ್ಲ. ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ ಅನ್ನುವುದು ಗೊತ್ತಿದ್ದರೆ, ಇವತ್ತು ಶ್ರುತಿಯ ಪ್ರಸಂಗ ಅಹಂಕಾರದ ಪ್ರಶ್ನೆಯಾಗಿ ನಿಂತು, ವಂಶ ಪ್ರತಿಷ್ಠೆಯಾಗುವ ಬದಲು, ಒಂದು ಮಾನವೀಯ ಪ್ರಶ್ನೆಯಾಗುತ್ತಿತ್ತು.
ಹಾಗಾಗಲಿಲ್ಲ ಅನ್ನುವುದೇ ನನ್ನನ್ನು ಮಾತಾಡುವಂತೆ ಪ್ರೇರೇಪಿಸಿದೆ.

– ಪ್ರಕಾಶ್ ರೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...