Homeಚಳವಳಿಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

- Advertisement -
- Advertisement -

ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ!
ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು? ನಿನ್ನ ಬಳಿ ಸಾಕ್ಷಿ ಏನಿದೆ? ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪ್ರೇರಣೆಯಿಂದ ಹೀಗೆ ಪ್ರಶ್ನಿಸುತ್ತಿದ್ದೀಯಾ?
ಎಂದು ಪುಂಖಾನುಪುಂಖ ಪ್ರಶ್ನೆಗಳನ್ನು ಕೇಳುತ್ತಾ, ಆ ಹೆಣ್ಣುಮಗಳ ಬಾಯಿ ಮುಚ್ಚಿಸುವುದಕ್ಕೆ ನೋಡುತ್ತದೆ. ಆಮೇಲೆ ಅವಳೊಬ್ಬಳೇ ಅಲ್ಲ, ಯಾವ ಹೆಣ್ಣುಮಗಳೂ ಬಾಯಿ ತೆರೆಯಬಾರದು. ಯಾವತ್ತೂ ತನಗೆ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳಬಾರದು. ಒಂದು ಕೆಟ್ಟ ಸ್ಪರ್ಶವನ್ನು ಕೂಡ ಅದು ಸಹಜ ಎಂಬಂತೆ ಸ್ವೀಕರಿಸಬೇಕು ಎಂಬಂತೆ ಮಾಡುತ್ತದೆ.
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯ ಆಗಿದೆ ಎಂದಾಗ ಗಂಡು ಬಿಡಿ, ಹೆಣ್ಣು ಕೂಡ ಅದನ್ನು ಎಷ್ಟೋ ಸಲ ನಂಬುವುದಿಲ್ಲ. ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಅರೇ, ನನ್ನ ಜೊತೆ ಎಷ್ಟು ಚೆನ್ನಾಗಿ ಸಂಭಾವಿತರಂತೆ ನಡೆದುಕೊಂಡಿದ್ದಾರೆ. ಅಂಥವರು ಹೀಗೆ ಮಾಡಲು ಸಾಧ್ಯವೇ ಇಲ್ಲ ಎಂದು ತೀರ್ಪು ಕೊಟ್ಟುಬಿಡುತ್ತಾರೆ. ಅಲ್ಲಿಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.
ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಒಂದು ಹೆಣ್ಣಿನ ಬಾಯಿ ಮುಚ್ಚಿಸುವುದಕ್ಕೆ ಅದೆಷ್ಟು ಮಂದಿ ಶೂರರು, ವೀರರು, ಪರಾಕ್ರಮಿಗಳು ಒಟ್ಟಾಗಿದ್ದಾರೆ. ಎಷ್ಟೊಂದು ಕತೆಗಳನ್ನು ಹೆಣೆಯುತ್ತಿದ್ದಾರೆ. ಎಷ್ಟೊಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇದನ್ನು ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನೂ ತಂದು ರಾಜಕೀಯದ ಕೊಂಬಿಗೆ ಕಟ್ಟಿ ಪಾರಾಗುವುದು ಈ ಕಾಲದ ಜಾಯಮಾನ. ಅದು ರಾಜಕೀಯ ಕಣ್ರೀ ಅಂದುಬಿಟ್ಟರೆ ಅಲ್ಲಿಗೆ ಮುಗಿದುಹೋಯಿತು. ಹೆಣ್ಣಿನ ಮೇಲೆ ನಡೆದ ದೌರ್ಜನ್ಯದಿಂದ ಬೇಕಿದ್ದರೂ ಪಾರಾಗಬಹುದು. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಅಂತ ನನಗೆ ಅನ್ನಿಸಿಲ್ಲ. ಅವರ ಉದ್ದೇಶ ಹೆಣ್ಣು ಮಾತಾಡುವುದನ್ನು ಹೇಗಾದರೂ ಮಾಡಿ ತಡೆಯಬೇಕು ಅನ್ನುವುದು. ಯಾಕೆಂದರೆ ಸಿನಿಮಾ ಕ್ಷೇತ್ರದಲ್ಲಿರುವ ಮಹಿಳೆ ಮಾತಾಡಲು ಆರಂಭಿಸಿದರೆ ಯಾರ್ಯಾರ ಬಂಡವಾಳ ಹೊರಬೀಳುತ್ತದೋ ಹೇಳುವವರು ಯಾರು? ತನಗೆ ಸಂಬಂಧವೇ ಇಲ್ಲದೇ ಹೋದರೂ ನಿರ್ಮಾಪಕರ ಸಂಘ ಕಹಳೆ ಊದಿತು. ತನಗೆ ಸಂಬಂಧ ಇದ್ದರೂ ಕಲಾವಿದರ ಸಂಘ ಸುಮ್ಮನೆ ಕೂತುಬಿಟ್ಟಿತು. ವಾಣಿಜ್ಯ ಮಂಡಳಿಯೇ ದೇವಾಲಯ, ವಾಣಿಜ್ಯ ಮಂಡಳಿಯೇ ನ್ಯಾಯಾಲಯ ಅಂತ ಮತ್ತೊಬ್ಬರು ಇಡೀ ಪ್ರಸಂಗವನ್ನು ವಾಣಿಜ್ಯ ಮಂಡಳಿಯಲ್ಲೇ ತೀರ್ಮಾನಿಸಲು ಇಚ್ಚಿಸಿದರು. ಕೌರವರು ಮತ್ತು ಅವರಿಗೆ ತಮ್ಮನ್ನು ಮಾರಿಕೊಂಡ ಪಾಂಡವರ ನಡುವೆ ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಯೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನ್ನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದ್ದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
ಆದರೆ ಇಂಥ ಸಂಗತಿಗಳನ್ನು ಬೇರೆ ಬೇರೆ ವಿಚಾರಗಳನ್ನು ಎಳೆದು ತಂದು ತೆಳುವಾಗಿಸುವುದರಲ್ಲೇ ನಮ್ಮ ಸೋಲು ಅಡಗಿದೆ. ಇವತ್ತು ಶ್ರುತಿಗೆ ಆದದ್ದು ನಾಳೆ ನಮಗೂ ಆಗಬಹುದು. ನಾವು ನ್ಯಾಯದ ಪರ ನಿಲ್ಲುತ್ತೇವೆ ಅನ್ನುವ ನಂಬಿಕೆ ನಮಗಾದರೂ ಇರಬೇಕು. ಧೈರ್ಯವಾಗಿ ಮಾತಾಡುವುದಕ್ಕೆ ಶಕ್ತಿಯಿಲ್ಲದೇ ಹೋದರೆ ಮೌನವಾಗಿದ್ದೇ ಪ್ರತಿಭಟಿಸಬೇಕು. ಅದುಬಿಟ್ಟು ಅನ್ಯಾಯದ ಪರವಾಗಿ ನಿಂತು ಆ ಕ್ಷಣದಲ್ಲಿ ಪಾರಾಗಲು ನೋಡುವುದು ಮಾತ್ರ ಅನೈತಿಕತೆ ಎಂದು ಹೇಳಬಲ್ಲೆ.
ತಾನೇ ಕೆತ್ತುತ್ತಿರುವ ಪುರುಷೋತ್ತಮನ ಮೂರ್ತಿಯಾದ ಶ್ರೀರಾಮನನ್ನೂ ಅಗ್ನಿದಿವ್ಯಕ್ಕೆ ಒಡ್ಡಿದವನು ವಾಲ್ಮೀಕಿ. ವಾಲಿಯನ್ನು ಕೊಲ್ಲುವ ವಿಚಾರದಲ್ಲಿ ರಾಮ ಮರೆಯಲ್ಲಿ ನಿಂತು ಬಾಣ ಬಿಟ್ಟ ಅನ್ನುವುದನ್ನು ವಾಲ್ಮೀಕಿ ಮುಚ್ಚಿಡುವುದಕ್ಕೆ ಹೋಗುವುದಿಲ್ಲ. ಅದನ್ನು ಹೇಳಿದ್ದರಿಂದ ರಾಮನ ಘನತೆ ಕುಗ್ಗಲೂ ಇಲ್ಲ. ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ ಅನ್ನುವುದು ಗೊತ್ತಿದ್ದರೆ, ಇವತ್ತು ಶ್ರುತಿಯ ಪ್ರಸಂಗ ಅಹಂಕಾರದ ಪ್ರಶ್ನೆಯಾಗಿ ನಿಂತು, ವಂಶ ಪ್ರತಿಷ್ಠೆಯಾಗುವ ಬದಲು, ಒಂದು ಮಾನವೀಯ ಪ್ರಶ್ನೆಯಾಗುತ್ತಿತ್ತು.
ಹಾಗಾಗಲಿಲ್ಲ ಅನ್ನುವುದೇ ನನ್ನನ್ನು ಮಾತಾಡುವಂತೆ ಪ್ರೇರೇಪಿಸಿದೆ.

– ಪ್ರಕಾಶ್ ರೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....