HomeಅಂಕಣಗಳುKarnataka against SIRSIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

- Advertisement -
- Advertisement -

“ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ,” ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆ ಮಂಗಳವಾರ ಆಯೋಜಿಸಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯ ಅಂಗವಾಗಿ ಅವರು ಬೆಂಗಳೂರಿನ ಬಾಪೂಜಿನಗರದಲ್ಲಿ ಸಂತ್ರಸ್ತ ಮತದಾರರೊಂದಿಗೆ ಸಂವಾದ ನಡೆಸಿದರು.

‘ನಾವೇನೂ ಕಳ್ಳರಲ್ಲ’

ಸಂವಾದದಲ್ಲಿ ಸಂತ್ರಸ್ತರ ಅಳಲನ್ನು ಆಲಿಸಿ ಮಾತನಾಡಿದ ಪ್ರಕಾಶ್ ರಾಜ್, “ಆಧಾರ್ ಕಾರ್ಡ್ ಸೇರಿದಂತೆ ಎಲ್ಲಾ ಅಧಿಕೃತ ದಾಖಲೆಗಳನ್ನು ಹೊಂದಿದ್ದರೂ ಜನರನ್ನು ಅನುಮಾನದಿಂದ ನೋಡುವುದು ಅವರ ಸ್ವಾಭಿಮಾನ ಮತ್ತು ಗೌರವಕ್ಕೆ ಧಕ್ಕೆ ತರುತ್ತಿದೆ. ನಾವೇನೋ ಕಳ್ಳರು, ಎಲ್ಲಿಂದಲೋ ಬಂದುಬಿಟ್ಟಿದ್ದೇವೆ, ಮೋಸ ಮಾಡಿಕೊಂಡು ವೋಟರ್ ಕಾರ್ಡ್ ತೆಗೆದುಕೊಂಡಿದ್ದೇವೆ ಎಂಬಂತೆ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ,” ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ನೇರವಾಗಿ ಪ್ರಶ್ನಿಸಿದ ಅವರು, “ಭಾರತ ನಮ್ಮ ಮನೆ, ನಮ್ಮ ದೇಶ, ನಾವು ಇಲ್ಲೇ ಹುಟ್ಟಿದವರು. ಆದರೂ, ಈಗ ನಾವು ಈ ದೇಶದವರು ಎಂದು ಸಾಬೀತುಪಡಿಸಿಕೊಳ್ಳಬೇಕಾದ ದುಸ್ಥಿತಿ ಬಂದಿದೆ. ನಾವಿಲ್ಲಿಯವರಲ್ಲ ಎಂದರೆ ನಮ್ಮನ್ನು ಎಲ್ಲಿಗೆ ಕಳುಹಿಸುತ್ತೀರಿ?” ಎಂದು ಖಾರವಾಗಿ ಪ್ರಶ್ನಿಸಿದರು.

‘ಒಂದೂವರೆ ಕೋಟಿ ಸಂತ್ರಸ್ತರಲ್ಲಿ ನಾನೂ ಒಬ್ಬ’

ಎಸ್‌ಐಆರ್ ಪ್ರಕ್ರಿಯೆಯ ಅಗತ್ಯವನ್ನೇ ಪ್ರಶ್ನಿಸಿದ ನಟ, “ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಂಡವರನ್ನು ತೆಗೆದುಹಾಕುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ದಶಕಗಳಿಂದ ಇಲ್ಲೇ ವಾಸವಾಗಿರುವ ಅರ್ಹ ನಾಗರಿಕರನ್ನು ಯಾಕೆ ಪಟ್ಟಿಯಿಂದ ಹೊರಗಿಡಬೇಕು? ಈಗಾಗಲೇ ಮತದಾರರಾಗಿರುವವರನ್ನೇ ಮತ್ತೆ ಮತದಾರರೆಂದು ಸಾಬೀತುಪಡಿಸಲು ಒತ್ತಾಯಿಸುತ್ತಿರುವುದು ಏಕೆ?” ಎಂದು ಆಕ್ಷೇಪಿಸಿದರು.

“ಎಸ್‌ಐಆರ್‌ನಿಂದ ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಜನರು ಸಂತ್ರಸ್ತರಾಗಿದ್ದಾರೆ. ರಾಜ್ಯದ ಸುಮಾರು ಒಂದೂವರೆ ಕೋಟಿ ಕನ್ನಡಿಗರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ, ಅವರಲ್ಲಿ ನಾನೂ ಒಬ್ಬ,” ಎಂದರು.

‘ನಮಗಾಗಿ ನಾವೇ ಹೋರಾಡಬೇಕು’

ಸಂತ್ರಸ್ತರಿಗೆ ಧೈರ್ಯ ತುಂಬಿದ ಪ್ರಕಾಶ್ ರಾಜ್, ರಾಜ್ಯದಲ್ಲಿ ಚುನಾವಣೆಗೆ ಇನ್ನು ಎರಡು ವರ್ಷ ಸಮಯವಿದೆ. ಅದಕ್ಕೂ ಮುಂಚೆಯೇ ಈ ರೀತಿಯ ತಪ್ಪುಗಳನ್ನು ಎಸಗಲಾಗಿದೆ. ನಿಮ್ಮ ಜೊತೆ ನಾವೆಲ್ಲರೂ ಇದ್ದೇವೆ. ನಾವು ರಾಜಕಾರಣಿಗಳಲ್ಲ, ನಮಗೆ ರಾಜಕೀಯ ಪಕ್ಷಗಳ ಹಂಗೂ ಬೇಕಿಲ್ಲ. ನಮಗಾಗಿ ನಾವೇ ಹೋರಾಟ ಮಾಡಬೇಕು. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ, ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...