Homeಮುಖಪುಟದೇವರನ್ನು ರಾಜಕೀಯದಿಂದ ದೂರವಿರಿಸಿದ್ದಕ್ಕೆ ಕೇರಳದ ಜನತೆಗೆ ಧನ್ಯವಾದಗಳು: ಪ್ರಕಾಶ್ ರಾಜ್‌

ದೇವರನ್ನು ರಾಜಕೀಯದಿಂದ ದೂರವಿರಿಸಿದ್ದಕ್ಕೆ ಕೇರಳದ ಜನತೆಗೆ ಧನ್ಯವಾದಗಳು: ಪ್ರಕಾಶ್ ರಾಜ್‌

- Advertisement -
- Advertisement -

ದೇವರನ್ನು ರಾಜಕೀಯದಿಂದ ದೂರವಿರಿಸಿದ್ದಕ್ಕೆ ಕೇರಳದ ಜನತೆಗೆ ಧನ್ಯವಾದಗಳು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್‌ ಅವರು ಹೇಳಿದ್ದಾರೆ.

ತಿರುವನಂತಪುರಂನಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್‌, ನನ್ನ ಪ್ರೀತಿಯ ಕೇರಳ, ಇಲ್ಲಿ ನಾನು ಇರಲು ಸಂತಸಪಡುತ್ತೇನೆ. ನಿಮ್ಮ ಪ್ರೀತಿಗಾಗಿ ಸಂತೋಷವಾಗುತ್ತದೆ, ನೀವು ಹೊಂದಿರುವ ನಂಬಿಕೆಗಳಿಗಾಗಿ ಮತ್ತು ವಿಶೇಷವಾಗಿ ಇದು ದೇವರ ಸ್ವಂತ ನಾಡು, ಆದರೂ ನೀವು ದೇವರನ್ನು ರಾಜಕೀಯದಿಂದ ದೂರವಿರಿಸಿದ್ದೀರಿ ನಿಮಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಉತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಹಿರಿಯ ನಿರ್ದೇಶಕ ಕ್ರಿಸ್ಜ್ಟೋಫ್ ಜನುಸ್ಸಿ ಅವರಿಗೆ ನೀಡಿರುವ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್, ಕೆಲವೊಮ್ಮೆ ರಾಜಕೀಯ ದೃಷ್ಟಿಕೋನಗಳಲ್ಲಿ ಭಿನ್ನವಾಗಿದ್ದರೂ  ಕೇರಳ ಅವರಿಗೆ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಶ್ಲಾಘಿಸಿದರು. ರಾಜಕೀಯವು ನಮ್ಮ ಜೀವನದಲ್ಲಿ ಅದರದ್ದೇ ಆದ ಸ್ಥಾನವನ್ನು ಹೊಂದಿದೆ ಆದರೆ ಕಲೆಯು ರಾಜಕೀಯವನ್ನು ಮೀರಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಚಲನಚಿತ್ರೋತ್ಸವವನ್ನು ಶ್ಲಾಘಿಸಿದರು. ಸಿದ್ಧಾಂತಗಳ ಬಗ್ಗೆ ವಿವರಿಸಲು ಸಂಸತ್ತಿನಲ್ಲಿ ಇತ್ತೀಚೆಗೆ ನಡೆದ ದಾಳಿಯನ್ನು ಉಲ್ಲೇಖಿಸಿದ ಅವರು, ಆಡಳಿತ ಮತ್ತು ವಿರೋಧ ಪಕ್ಷಗಳ ನಿರೂಪಣೆಗಳನ್ನು ಮತ್ತು ಟಿಆರ್‌ಪಿಗಳಿಗಾಗಿ ಡಬ್ಬಿಯೊಂದಿಗೆ ಜೋಕರ್‌ಗಳಂತೆ ಹೋರಾಡುವ ಪತ್ರಕರ್ತರ ಬಗ್ಗೆ ಪ್ರಸ್ತಾಪಿಸಿದರು. ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಟೀಕಿಸುತ್ತದೆ. ಆಡಳಿತ ಪಕ್ಷದ ನಾಯಕರ ಜೊತೆ ಆರೋಪಿಗಳಿರುವ ಪೋಟೋಗಳಿದೆ ಎಂದು ಆಡಳಿತ ಪಕ್ಷಗಳು ಹೇಳುತ್ತಿದೆ. ಆದರೆ ಯುವಕರು ಈ ದಾಳಿ ಮಾಡಲು ಕಾರಣವೇನು ಎಂದು ಚರ್ಚಿಸುವ ಅಗತ್ಯ ಇರುತ್ತದೆ. ನಿರುದ್ಯೋಗಿಯಾಗಿರುವುದು, ಮಣಿಪುರದ ವಿಚಾರದಲ್ಲಿ ಉತ್ತರ ಸಿಗದಿರುವುದು ಎಷ್ಟು ಹತಾಶೆಯನ್ನು ಉಂಟುಮಾಡುತ್ತದೆ ಎಂಬುದರ ಬಗ್ಗೆ ಅವಲೋಕಿಸಿದ್ದೇವೆಯೇ?  ಈ ಪರಿಸ್ಥಿತಿಗಳಲ್ಲಿ ನಿಮ್ಮೆಲ್ಲರ ನಡುವೆ ಇರುವುದು, ಚರ್ಚಿಸುವುದು, ನೋಡುವುದು ಮತ್ತು ಕೇಳುವುದು ಸಂತಸ ತಂದಿದೆ ಎಂದು ಅವರು ಕೇರಳದ ಜನರಿಗೆ ಹೇಳಿದರು.

ಡಿ.8ರಿಂದ 15ರವೆರೆಗೆ ತಿರುವನಂತಪುರಂನಲ್ಲಿ 28ನೇ ಕೇರಳದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆದಿದೆ. ಉತ್ಸವದಲ್ಲಿ 175 ಚಲನಚಿತ್ರಗಳನ್ನು ಪ್ರದರ್ಶಿಸಲಾಯಿತು ಮತ್ತು ಈವೆಂಟ್‌ನಲ್ಲಿ ಸುಮಾರು 14,000 ಜನರು ಭಾಗವಹಿಸಿದ್ದರು. ಸಮಾರಂಭದಲ್ಲಿ ಏಸ್ ಪೋಲಿಷ್ ಚಲನಚಿತ್ರ ನಿರ್ಮಾಪಕ ಕ್ರಿಸ್ಜ್ಟೋಫ್ ಜನುಸ್ಸಿ ಅವರು ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆಗಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...