Homeಮುಖಪುಟದೇವರನ್ನು ರಾಜಕೀಯದಿಂದ ದೂರವಿರಿಸಿದ್ದಕ್ಕೆ ಕೇರಳದ ಜನತೆಗೆ ಧನ್ಯವಾದಗಳು: ಪ್ರಕಾಶ್ ರಾಜ್‌

ದೇವರನ್ನು ರಾಜಕೀಯದಿಂದ ದೂರವಿರಿಸಿದ್ದಕ್ಕೆ ಕೇರಳದ ಜನತೆಗೆ ಧನ್ಯವಾದಗಳು: ಪ್ರಕಾಶ್ ರಾಜ್‌

- Advertisement -
- Advertisement -

ದೇವರನ್ನು ರಾಜಕೀಯದಿಂದ ದೂರವಿರಿಸಿದ್ದಕ್ಕೆ ಕೇರಳದ ಜನತೆಗೆ ಧನ್ಯವಾದಗಳು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್‌ ಅವರು ಹೇಳಿದ್ದಾರೆ.

ತಿರುವನಂತಪುರಂನಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್‌, ನನ್ನ ಪ್ರೀತಿಯ ಕೇರಳ, ಇಲ್ಲಿ ನಾನು ಇರಲು ಸಂತಸಪಡುತ್ತೇನೆ. ನಿಮ್ಮ ಪ್ರೀತಿಗಾಗಿ ಸಂತೋಷವಾಗುತ್ತದೆ, ನೀವು ಹೊಂದಿರುವ ನಂಬಿಕೆಗಳಿಗಾಗಿ ಮತ್ತು ವಿಶೇಷವಾಗಿ ಇದು ದೇವರ ಸ್ವಂತ ನಾಡು, ಆದರೂ ನೀವು ದೇವರನ್ನು ರಾಜಕೀಯದಿಂದ ದೂರವಿರಿಸಿದ್ದೀರಿ ನಿಮಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಉತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಹಿರಿಯ ನಿರ್ದೇಶಕ ಕ್ರಿಸ್ಜ್ಟೋಫ್ ಜನುಸ್ಸಿ ಅವರಿಗೆ ನೀಡಿರುವ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್, ಕೆಲವೊಮ್ಮೆ ರಾಜಕೀಯ ದೃಷ್ಟಿಕೋನಗಳಲ್ಲಿ ಭಿನ್ನವಾಗಿದ್ದರೂ  ಕೇರಳ ಅವರಿಗೆ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಶ್ಲಾಘಿಸಿದರು. ರಾಜಕೀಯವು ನಮ್ಮ ಜೀವನದಲ್ಲಿ ಅದರದ್ದೇ ಆದ ಸ್ಥಾನವನ್ನು ಹೊಂದಿದೆ ಆದರೆ ಕಲೆಯು ರಾಜಕೀಯವನ್ನು ಮೀರಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಚಲನಚಿತ್ರೋತ್ಸವವನ್ನು ಶ್ಲಾಘಿಸಿದರು. ಸಿದ್ಧಾಂತಗಳ ಬಗ್ಗೆ ವಿವರಿಸಲು ಸಂಸತ್ತಿನಲ್ಲಿ ಇತ್ತೀಚೆಗೆ ನಡೆದ ದಾಳಿಯನ್ನು ಉಲ್ಲೇಖಿಸಿದ ಅವರು, ಆಡಳಿತ ಮತ್ತು ವಿರೋಧ ಪಕ್ಷಗಳ ನಿರೂಪಣೆಗಳನ್ನು ಮತ್ತು ಟಿಆರ್‌ಪಿಗಳಿಗಾಗಿ ಡಬ್ಬಿಯೊಂದಿಗೆ ಜೋಕರ್‌ಗಳಂತೆ ಹೋರಾಡುವ ಪತ್ರಕರ್ತರ ಬಗ್ಗೆ ಪ್ರಸ್ತಾಪಿಸಿದರು. ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಟೀಕಿಸುತ್ತದೆ. ಆಡಳಿತ ಪಕ್ಷದ ನಾಯಕರ ಜೊತೆ ಆರೋಪಿಗಳಿರುವ ಪೋಟೋಗಳಿದೆ ಎಂದು ಆಡಳಿತ ಪಕ್ಷಗಳು ಹೇಳುತ್ತಿದೆ. ಆದರೆ ಯುವಕರು ಈ ದಾಳಿ ಮಾಡಲು ಕಾರಣವೇನು ಎಂದು ಚರ್ಚಿಸುವ ಅಗತ್ಯ ಇರುತ್ತದೆ. ನಿರುದ್ಯೋಗಿಯಾಗಿರುವುದು, ಮಣಿಪುರದ ವಿಚಾರದಲ್ಲಿ ಉತ್ತರ ಸಿಗದಿರುವುದು ಎಷ್ಟು ಹತಾಶೆಯನ್ನು ಉಂಟುಮಾಡುತ್ತದೆ ಎಂಬುದರ ಬಗ್ಗೆ ಅವಲೋಕಿಸಿದ್ದೇವೆಯೇ?  ಈ ಪರಿಸ್ಥಿತಿಗಳಲ್ಲಿ ನಿಮ್ಮೆಲ್ಲರ ನಡುವೆ ಇರುವುದು, ಚರ್ಚಿಸುವುದು, ನೋಡುವುದು ಮತ್ತು ಕೇಳುವುದು ಸಂತಸ ತಂದಿದೆ ಎಂದು ಅವರು ಕೇರಳದ ಜನರಿಗೆ ಹೇಳಿದರು.

ಡಿ.8ರಿಂದ 15ರವೆರೆಗೆ ತಿರುವನಂತಪುರಂನಲ್ಲಿ 28ನೇ ಕೇರಳದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆದಿದೆ. ಉತ್ಸವದಲ್ಲಿ 175 ಚಲನಚಿತ್ರಗಳನ್ನು ಪ್ರದರ್ಶಿಸಲಾಯಿತು ಮತ್ತು ಈವೆಂಟ್‌ನಲ್ಲಿ ಸುಮಾರು 14,000 ಜನರು ಭಾಗವಹಿಸಿದ್ದರು. ಸಮಾರಂಭದಲ್ಲಿ ಏಸ್ ಪೋಲಿಷ್ ಚಲನಚಿತ್ರ ನಿರ್ಮಾಪಕ ಕ್ರಿಸ್ಜ್ಟೋಫ್ ಜನುಸ್ಸಿ ಅವರು ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆಗಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...