Homeಅಂಕಣಗಳುನಾಗಸುಧೆ ಜಗಲಿಯಿಂದಆ ತೆಳ್ಳಗಿನ-ಬೆಳ್ಳಗಿನ ಹಿಮದ ಹಾಸಿನ ಮೇಲೆ ನನ್ನೂರ ಹೆಸರ ಬರೆದೆ!

ಆ ತೆಳ್ಳಗಿನ-ಬೆಳ್ಳಗಿನ ಹಿಮದ ಹಾಸಿನ ಮೇಲೆ ನನ್ನೂರ ಹೆಸರ ಬರೆದೆ!

- Advertisement -
- Advertisement -

ಕಾವ್ಯಾ ಮತ್ತು ಸಂತೋಷರಿಂದ ಕಳೆದ ಐದಾರು ವರ್ಷಗಳಿಂದಲೂ ಆಗಾಗ ಆಹ್ವಾನಗಳು ಬರುತ್ತಲೇ ಇದ್ದವು; ಆ ಜಾಗತಿಕ ಸುಂದರ ನಗರದ ದರ್ಶನಕ್ಕೆ! ಏನೇನೋ ಸಬೂಬು ಹೇಳಿ ನಾವೂ ಮುಂದೂಡುತ್ತಲೇ ಬಂದೆವು, ಆದರೆ ಈ ಸಲ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲದಂತಾಯಿತು; ಹೊಸ ಪಾಪುವಿನ ನಿರೀಕ್ಷೆಯಲಿ. ಬರದೇ ಸತಾಯಿಸುತ್ತಲೇ ಇದ್ದೆವೆಂಬ ಸಿಟ್ಟಿನಿಂದ ಅಸಲು ಬಡ್ಡಿ ಎಲ್ಲಾ ಸೇರಿಸಿದ ಇವರು ನಮ್ಮನ್ನು ಐದು ತಿಂಗಳುಗಳ ಕಾಲ ತಮ್ಮ ಪ್ರೀತಿಯ ಬಂಧನದಲ್ಲಿ ಬಂಧಿಸಿದ್ದರು.

ವಿಮಾನ ಪ್ರಯಾಣದ ಖುಷಿ ಈ ಮೊದಲೇ ಅನುಭವಿಸಿದ್ದರೂ ಇಂತಹ ಹದಿನೆಂಟು ತಾಸುಗಳ ಸುದೀರ್ಘ ಅವಧಿಯ ಪ್ರಯಾಣದ ಕಸರತ್ತು ಇದೇ ಮೊದಲು. ಅಂತೂ ನಮ್ಮೆಲ್ಲಾ ತಾಂತ್ರಿಕ ವಿಧಿವಿಧಾನಗಳನ್ನು ಮುಗಿಸಿ ನೆವಾರ್ಕ ಏರ್‌ಫೋರ್ಟ ನಿಂದ ಹೊರಬರುತ್ತಿದ್ದಂತೆಯೇ ಪುಟ್ಟ ಬಸಿರ ಹೊಟ್ಟೆಯೊಂದಿಗೆ ಬಂದ ಕಾವ್ಯ ಮತ್ತು ಸಂತೋಷರನ್ನು ಕಂಡು ವಾತ್ಸಲ್ಯ ಉಕ್ಕಿಬಂದು ಮೂಕ ವಿಸ್ಮಿತರಾದೆವು. ಸುನಂದಾ ಸ್ಥಿತಪ್ರಜ್ಞಳಂತೆ ಕಂಡರೂ ನಾನಂತೂ ವರ್ಣಿಸಲಾಗದ ಹೊಸ ಜಗತ್ತನ್ನು ಕಂಡುಂಡು ಅನುಭವಿಸತೊಡಗಿದೆ. ಸಂತೋಷನ ಲೆಫ್ಟ್ ಹ್ಯಾಂಡ್ ಡ್ರೈವ್ ಕಾರು ನೆವಾರ್ಕ ಏರ್‌ಫೋರ್ಟ ನಿಂದ ಬ್ರಿಡ್ಜ ವಾಟರಿನ ವೆಂಡರ್ ವೀರ್ ರಸ್ತೆಯ ಇವರ ಮನೆಯ ದಾರಿಗುಂಟ ಅಗಲಗಲವಾದ ರಸ್ತೆಗಳಲಿ ಕಾರುಗಳೇ ತುಂಬಿ ತುಳುಕುತ್ತಿದ್ದ ದೃಶ್ಯ ಮತ್ತು ಅದರ ದೀಪದ ಬೆಳಕುಗಳು ನನಗೆ ಆಗಸದಲಿ ಮಿನುಗುತ್ತಿರುವ ನಕ್ಷತ್ರಗಳಂತೆ ಕಂಡವು. ಅದೇ ಖುಷಿಯಲಿ ನಾವು ಮನೆ ತಲುಪಿದೆವು.

ಕಾವ್ಯಾ ಮೊದಲೇ ಹೇಳಿದ್ದಳು; ಸಂತೋಷ ಸಿಸ್ತಿನ ಸಿಪಾಯಿ, ತೋರಿಕೆ ಅಲಸ್ಯ ಅವನಿಗಾಗದು, ಎಲ್ಲವೂ ಕ್ರಮಬದ್ಧವಾಗಿ; ಜಾಗರೂಕತೆಯಿಂದ ನಡೆಯಬೇಕು, ಇವೆಲ್ಲವೂ ನಮ್ಮ ಆರೋಗ್ಯದ ಒಳಿತಿಗಾಗಿಯೇ ಎಂದು. ಈ ಐದು ತಿಂಗಳಿನ ಇರುವಿಕೆಯ, ವಾಸ್ತವ್ಯದ ರೂಪರೇಶೆ ತಯಾರಿಸಲಾಯಿತು. ಇವುಗಳಲ್ಲಿ ಅತೀ ಮುಖ್ಯವಾದುದು ದಿನದ ‘ವಾಕ್’. ಸಂತೋಷನ ದೃಷ್ಟಿಯಲ್ಲಿ ಪ್ರತೀ ವ್ಯಕ್ತಿಯೂ ಹತ್ತು ಸಾವಿರ ಹೆಜ್ಜೆ ಹಾಕಲೇಬೇಕಂತೆ ಆರೋಗ್ಯಕ್ಕೆ ಅನುಗುಣವಾಗಿ. ಮೊದಲೇ ಮೈಕೊರೆಯುವ ಚಳಿ, ಅದರಲ್ಲಿ ವಾಕ್ ಬೇರೆ ಕೇಡು ಎಂದು ಮನದಲೇ ಒಟಗುಡುತ್ತ ಎಲ್ಲರೊಡನೆ ಫುಲ್ ಡ್ರೆಸ್ಸಿನಲಿ ತಯಾರಾದೆನು.

ಸಂಜೆ ಐದರ ನಂತರ ಒಂದೂವರೆ ತಾಸಿನ ತನಕ ಸಂತೋಷ – ಕಾವ್ಯಾರ ಹಿಂದೆ-ಹಿಂದೆ ರಸ್ತೆ ಗುಂಟ ಸಾಗುತ್ತಿತ್ತು ನಮ್ಮ ಪಯಣ ಚಳಿಯ ಮರೆತು; ವಿಶ್ವದ ಹೊಸ ಹೊಸ ಮುಖಗಳ ದರ್ಶನದೊಂದಿಗೆ. ಹದಿನೈದು ದಿನಗಳ ಅನುಭವದೊಂದಿಗೆ ನಮ್ಮಷ್ಟಕ್ಕೇ ನಮಗೇ ಬಿಟ್ಟುಬಿಟ್ಟರು ಅದೇ ವೆಂಡರ್ ವೀರ್- ಪೆಟರ್ ಸನ್- ಗ್ಲೆನ್ ಆಯರ್- ಹಂಟ್ಲೀ ವೇ – ವಾಲ್ಟರ್ ಬ್ರೂಕ್ ದಿಂದ ಮತ್ತದೇ ನಮ್ಮ ವೆಂಡರ್ ವೀರ್ ಗೆ.

ಐದು ತಿಂಗಳ ವಾಸ್ತವ್ಯದಲ್ಲಿ ಈ ವಾಕ್ ನಮಗೆ ಹಲವು ಬಗೆಯ ಅನುಭವ ಮತ್ತು ಖುಷಿ ನೀಡಿತು. ರಸ್ತೆಯ ಇಕ್ಕೆಲಗಳಲ್ಲಿ ಹಚ್ಚಹಸಿರಿನ ಗಿಡಮರಗಳು, ಅಲ್ಲಲ್ಲಿ ಸ್ವಯಂ ವೇಗ ನಿಯಂತ್ರಣದ ಕೈಫಲಕ, ರಸ್ತೆಯ ಕ್ರಾಸಿಂಗ್ ನಲ್ಲಿ ಪಾದಚಾರಿಗಳಿಗೆ ಪರಿಚಿತ ವಾಹನದೊಡೆಯನ ನಗುಮುಖ, ಮತ್ತೆ ಮತ್ತೆ ಹಿಂಡು-ಹಿಂಡಾಗಿ ಎದುರಾಗುವ ಚಿಗರೆಗಳ ಪಾದರಸದಂತಹ ಓಡಾಟ, ಘನ ಗಾಂಭೀರ್ಯದ ಬಾತುಕೋಳಿಯ ನಡಿಗೆ, ಸಾಕುಪ್ರಾಣಿಗಳ ಮಲಮೂತ್ರಕ್ಕಾಗಿಯೇ ಅಲ್ಲಲ್ಲಿ ತಂಗುದಾಣ, ಹಿಂದೆಂದೂ ಕಾಣದಿದ್ದರೂ ಮಾನವೀಯ ಸಂಬಂಧದ ದ್ಯೋತಕವಾಗಿ, ಎದುರಾದಾಗ ‘ಹಾಯ್ ಹಲೋ’ ಗಳ ಮುಗುಳುನಗೆ. ಬಾಲ-ವೃದ್ಧರಿಗೆ ತೋರುತ್ತಿರುವ ಆದರಣೀಯ ನೋಟ, ಭಾರತೀಯ ಭಾಷೆಗಳು ಕಿವಿಗೆ ಬಿದ್ದೊಡನೆ ನಿಂತು ಮಾತಾಡುವ ಭಾರತೀಯ ಮನಸ್ಸುಗಳು, ಹೀಗೆ ಒಂದೇ ಎರಡೇ? ನಿಜವಾಗಿಯೂ ಅಮೇರಿಕೆಯ ಆ ನೆಲದಲ್ಲಿ ಮಾನವೀಯ ಸಂಬಂಧ, ಮನುಷ್ಯ ಪ್ರೀತಿ, ಮಾನವೀಯ ಮೌಲ್ಯದ ಗುಣಮಟ್ಟ ಇಷ್ಟೊಂದಿದೆಯೆಂದು ನನಗೆ ಗೊತ್ತೇ ಇರಲಿಲ್ಲ.

ಭಾರತದ ಯಾವ ಹುಲ್ಲು ಹಾಸಿನ ಮೇಲೂ ಕುಳಿತು ಅರಿವಿಲ್ಲದ ನಾವು ಆ ಸ್ವಚ್ಛ ಗರಿಕೆಯ ಮೇಲೆ ಎಷ್ಟೋ ನಿಮಿಷ ಕಳೆದೆವು, ಅದೇ ನಮ್ಮ ಕಡಮೆಯ ಬಯಲೋ; ಅಲಗೇರಿಯ ಹೊಂಯಿಗೆ ರಾಶಿಯೋ ಎಂಬ ಭಾವದಲಿ.

ಬರುಬರುತ್ತಾ ಹವಾಮಾನವೇ ಬದಲಾಯಿತು. ಮುಂಜಾನೆಯ ಚಳಿಯೊಡನೆ ತುಂತುರು ಮಳೆಯ ನರ್ತನ, ಒಣಗಿದ ಗಿಡಮರಗಳೆಲ್ಲಾ ಒಮ್ಮೆಲೇ ಚಿಗುರಿ ಹೂಗಳಿಂದ ಹೊಸ ಲೋಕ ಕಂಗೊಳಿಸಿ ಪ್ರೇಮ ಕವಿತೆಗಳು ಹಾಡತೊಡಗಿದವು. ಅಗಸದಿ ಬರ್ಫದ ಮಳೆ ಸುರಿಯತೊಡಗಿ ಹೊಸ ಲೋಕದ ಸೃಷ್ಟಿ. ಎಲ್ಲೆಲ್ಲೂ ಹಿಮಗಡ್ಡೆಯ ಹಾಸಿಗೆ. ಅಂದು ಬಂಕೀಕೊಡ್ಲಿನ ಚಂಪಾ ಸೃಷ್ಟಿ ತೇರಿನಲಿ ಶರಬತ್ತು ತಯಾರಿಸಲು ಕೆರೆಯುತ್ತಿದ್ದ ಐಸಿನ ತುಂಡುಗಳೇ ಅದ್ಭುತ ಅನಿಸುತ್ತಿದ್ದ ನನಗೆ ಈಗ ಭೂಮಿಯ ತುಂಬೆಲ್ಲ ಹಿಮದ ಹಾಸಿಗೆ. ಸಂತೋಷ ಮನೆಯ ಹೊರಗೆ ಬಂದು ಸಲಿಕೆಯಂತಹ ಆಯುಧ ಹಿಡಿದು ಬರ್ಫಿನ ರಾಶಿಗಳನ್ನು ಬಾಗಿಲಿನ ಎದುರಿನಿಂದ ತೆರವುಗೊಳಿಸುತ್ತಿದ್ದ. ಕನ್ನಡದ ಡಾ. ರಾಜಕುಮಾರನ ಕಾಶ್ಮೀರದ ಸಿನೆಮಾ ದೃಶ್ಯ ನೆನಪಾಗಿ ಆ ಹಿಮಗಳ ರಾಶಿಯ ಕಂಡು ಕುಣಿದು ಕುಪ್ಪಳಿಸಿದೆ. ಊರಲ್ಲಿ ಆಗಾಗ ಮಳೆಯೊಡಣೆ ಬಿದ್ದ ಆಣೆಕಲ್ಲು ಗಳನ್ನು ಬಾಯಲ್ಲಿಟ್ಟು ಸಂಭ್ರಮಿಸುವಂತೆ ಇದರ ರುಚಿಯನ್ನೂ ನೋಡಿ , ಆ ತೆಳ್ಳಗಿನ – ಬೆಳ್ಳಗಿನ ಹಿಮದ ಹಾಸಿನ ಮೇಲೆ ನನ್ನೂರ ಹೆಸರು ಬರೆದು ತಂಪನೆಯ ಆ ಚಳಿಯಲ್ಲೂ ರೋಮಾಂಚಿತನಾದೆ!

ಡಾಕ್ಟ್ರು ಕೊಟ್ಟ ದಿನ ಮುಗಿದರೂ ಪಾಪು ಹೊಟ್ಟೆಯೊಳಗಿಂದಲೇ ತನ್ನ ಬಾಲಲೀಲೆಗಳ ತೋರಿಸುತ್ತಿದ್ದುದರಿಂದ ಕಾವ್ಯಾ ಮೆತ್ತಗಾಗಿ, ‘ಇನ್ನೆಷ್ಟು ದಿನ ನನಗೀ ಕಲ್ಲಂಗಡಿ ಹಣ್ಣಿನ ಸಹವಾಸ’ ಎಂದು ತನ್ನ ಭಾರವಾದ ಹೊಟ್ಟೆಯನ್ನು ಮುಟ್ಟಿಕೊಳ್ಳುತ್ತ ಹೇಳುತ್ತಿದ್ದಳು. ಎಲ್ಲವೂ ವ್ಯವಸ್ಥಿತವಾಗಿಯೇ ರೂಪಗೊಂಡಿತ್ತು. ನಮ್ಮ ಸಣ್ಣ ಮಗಳು ನವ್ಯಾ ಕಳೆದೆರಡು ತಿಂಗಳ ಹಿಂದೆಯೇ ಇಲ್ಲಿಗೆ ಬಂದವಳು ‘ವಿಸ್ಮಯ’ ಅಂತ ಹೆಸರಿಟ್ಟೇ ಹೋಗಿದ್ದಳು. ಸಂತೋಷನು ಒಂದು ವಾರದ ಮೊದಲೇ ತನ್ನ ಕಾರಿನಲ್ಲಿಯ ಹಿಂಬದಿಯ ಎಡಸೀಟಿನಲ್ಲಿ ಪಾಪುವಿಗಾಗಿ ಪುಟ್ಟ ಆಸನ ತಯಾರಿಸಿ ಸಂಭ್ರಮದಲ್ಲಿದ್ದ. ಅಲ್ಲಿಯ ಪದ್ದತಿಯೇ ಹಾಗಂತೆ. ಕಾರಿನಲ್ಲಿ ಶಿಶುವಿನ ಸೀಟು ಇಲ್ಲದಿದ್ದಲ್ಲಿ , ಪಾಪುವನ್ನು ನಮ್ಮ ಜೊತೆಗೆ ಮನೆಗೆ ಕಳುಹಿಸಲು ಆಸ್ಪತ್ರೆಯವರು ತಕರಾರು ತೆಗೆಯುತ್ತಾರಂತೆ. ಕಾವ್ಯಳಿಗೆ ಹೆರಿಗೆಯ ನೋವು ಕಾಣಿಸಿಕೊಂಡ ರಾತ್ರಿ ಸಂತೋಷ ಮತ್ತು ಕಾವ್ಯಾ ಇಬ್ಬರೇ ಯಾವ ಆತಂಕಗಳೂ ಇಲ್ಲದೇ ಅನುದಿನ ವಾಕಿಂಗಿಗೆ ಹೋಗುವಂತೆ ತಯಾರಾಗಿ ಆಸ್ಪತ್ರೆಗೆ ಹೋದರು. ನಿಮ್ಮ ಜೊತೆಯಲ್ಲಿ ನಾವು ಯಾರಾದರೂ ಬರಬೇಕೇ ಅಂತ ಕೇಳಿದಾಗ ಸಂತೋಷ ‘ಬೇಡ, ಮನೆಯಲ್ಲೇ ಆರಾಮಾಗಿರಿ, ನಾವು ನಾಳೆ ಪಾಪುವನ್ನು ಮನೆಗೆ ತರುತ್ತೇವೆ ಅಂತ ಯಾವ ದುಗುಡವೂ ಇಲ್ಲದೇ ಹೇಳಿದ್ದ. ಆನಂತರ ಎಂಟ್ಹತ್ತು ತಾಸುಗಳವರೆಗೆ ಸಣ್ಣಗೆ ನೋವು ತಿಂದ ಕಾವ್ಯಾ ಮರುದಿನ ‘ವಿಸ್ಮಯ’ ನನ್ನು ಭೂಮಿಗೆ ತಂದಳು. ನಮಗೋ ಮೊಮ್ಮಗನನ್ನು ನೋಡುವ ಆತುರ ಕಾತುರ. ಸಂತೋಷ ಅಲ್ಲಿಂದಲೇ ಮೊಬೈಲಿನಲ್ಲಿ ವಿಡಿಯೋ ಕಾಲ್ ಮುಖಾಂತರ ನಮಗೆ ಮೊಮ್ಮಗನನ್ನು ತೋರಿಸಿದ. ಮೂರನೇ ದಿನ ಮನೆಗೆ ಪುಟ್ಟ ದೇವರು ಆಗಮಿಸಿದಂತೆ ವಿಸ್ಮಯ ನಮ್ಮೆಲ್ಲರ ಕಣ್ಮಣಿಯಾದ. ಹುಟ್ಟುವ ಮೊದಲೇ ನಾಮಕರಣ ಮುಗಿದಿದ್ದರಿಂದ ವಿಸ್ಮಯ ತೊಟ್ಟಿಲಲ್ಲಿ ಮುದ್ದಾಗಿ ಕೈಕಾಲಾಡಿಸುತ್ತ ಪವಡಿಸಿದ. ಇಲ್ಲಿಯ ತರಹ ಅಲ್ಲಿ ಪಾಪುವನ್ನು ನೋಡಲು ಮನೆಗೆ ಬಂದು ಮಾತನಾಡಿಸುವ ಪದ್ದತಿ ಇಲ್ಲದ್ದು ನನಗೆ ಅಚ್ಚರಿಯ ವಿಷಯವೇ. ಆದರೆ ಮೂರು ತಿಂಗಳು ತುಂಬಿದ ನಂತರ ಅಲ್ಲಿಯ ಕನ್ನಡದ ಲೇಖಕಿ ಕವಿಯಿತ್ರಿ ಮೀರಾ ರಾಜಗೋಪಾಲ ಆಗಮಿಸಿ ನಮ್ಮೆಲ್ಲರೊಂದಿಗೆ ಒಂದು ದಿನ ಕಳೆದು ಹೋದರು.

ಅಮೇರಿಕೆಯ ನೆಲೆಯಲ್ಲಿ ಭಾರತೀಯ ದೇವರಿಗೇನೂ ಕೊರತೆಯಿಲ್ಲ. ವೀಕೆಂಡಿಗಾಗಿಯೇ ದರುಶನಕೆ ಕಾಯುವ ಇಲ್ಲಿಂದ ಹೋದ ವೃದ್ಧ ಪಾಲಕರಿಗಂತೂ ದೇವಸ್ಥಾನಗಳಿಗೆ ಹೋಗುವ ಸುಗ್ಗಿ. ನ್ಯೂಜೆರ್ಸಿಯಲ್ಲಿ ಉಡುಪಿಯ ಶ್ರೀಕೃಷ್ಣ, ತಿರುಪತಿಯ ಬಾಲಾಜಿ ಮತ್ತು ಗುಜರಾತಿನ ಸ್ವಾಮಿ ನಾರಾಯಣ ಸುಪ್ರಸಿದ್ಧರು. ಬಹುಶಃ ಸ್ವಾಮಿ ನಾರಾಯಣನಿಗಿಂತ ಸಿರಿವಂತ ದೇವರು ಅಮೆರಿಕೆಯಲ್ಲಿ ಇನ್ನೊಂದಿರಲಿಕ್ಕಿಲ್ಲ. ಝಗಮಗಿಸುವ ಬಂಗಾರದ ಆಭರಣಗಳ ಕಂಡು. ವಿದೇಶೀಯರು ಇಂಡಿಯಾ ಅಂದರೆ ಬಂಗಾರ ಅಂತ ತಿಳಿದರೂ ಅತಿಶಯೋಕ್ತಿಯಲ್ಲ. ಅಂಥ ಸಮಯದಲ್ಲೇ ಒಂದು ಶನಿವಾರ ಸಂತೋಷ ಉಡುಪಿಯ ಶ್ರೀಕೃಷ್ಣ ದೇವಾಲಯಕ್ಕೆ ಕರೆದೊಯ್ದಿದ್ದ; ದರುಶನಕೆ ಅಲ್ಲದಿದ್ದರೂ ಅಲ್ಲಿಗೆ ಬರುತ್ತಿದ್ದ ಕನ್ನಡಿಗರ ಮುಖದ ನಗೆ ಕಾಣಲು ತುಂಬ ಆನಂದವೆನಿಸುತ್ತಿತ್ತು. ಅಲ್ಲಿ ಬೆರಗೆಂಬಂತೆ ಪಕ್ಕದಿಂದ ಬಂದ ‘ಕಡಮೆ ಸರ್’ ಎಂಬ ಆತ್ಮೀಯ ದನಿಗೆ ತಿರುಗಿದೆ. ದಂಪತಿಗಳಿಬ್ಬರೂ ನಗುಮೊಗದಿಂದ ‘ನಾವು ನಿಮ್ಮ ಫೇಸ್ ಬುಕ್ ಸ್ನೇಹಿತರು’ ಎಂದಾಗಲಂತೂ ಅಚ್ಚರಿಗೊಂಡೆ. ಎಲ್ಲಿಯ ಅಮೆರಿಕಾ, ಎಲ್ಲಿಯ ಫೇಸ್ಬುಕ್, ಮಾತು ಹೊರಡದಾಯಿತು. ಮೂಲತಃ ಸಿರಸಿ-ಶಿವಮೊಗ್ಗ ಕಡೆಯ ಉತ್ಸಾಹೀ ಕನ್ನಡ ಮನಸ್ಸಿನ ಸರಿತಾ ನವಲಿ – ಆಹಿಶ್ ಭಾರದ್ವಾಜ್ ಬದುಕು ಕಟ್ಟಿಕೊಳ್ಳುತ್ತಾ ಕನ್ನಡ ಕಟ್ಟುವ ಕೆಲಸದಲ್ಲಿ ಆ ನೆಲದಲ್ಲಿ ಮನೆ – ಮನ ಮಾಡಿ ನೆಲೆಗೊಂಡಿದ್ದರು.

ನಾವು ಬರುವ ಸುದ್ದಿ ಮೊದಲೇ ಅರಿತಿದ್ದ ಅಲ್ಲಿಯ ‘ಕನ್ನಡ ಸಾಹಿತ್ಯ ರಂಗ’ ದವರು ನ್ಯೂಜೆರ್ಸಿಯಲ್ಲಿ ನಡೆಯುವ ಒಂಬತ್ತನೇಯ ವಸಂತ ಸಾಹಿತ್ಯೋತ್ಸವಕ್ಕೆ ಕನ್ನಡದ ಖ್ಯಾತ ಬರಹಗಾರರಾದ ವಸುಧೇಂದ್ರ, ಡಾ. ವಸುಂಧರಾ ಭೂಪತಿ ಮತ್ತು ಸುನಂದಾ ಜೊತೆ ನನ್ನನ್ನೂ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದು ಬದುಕಿನಲ್ಲಿ ಮರೆಯಲಾಗದ ಸಂಗತಿಯೆನಿಸಿತು. ನ್ಯೂಜೆರ್ಸಿಯ ಮಾಲ್ಟರ್ನ ನಗರದಲ್ಲಿ ಹಿರಿಯ ಕನ್ನಡ ಮನಸ್ಸುಗಳಾದ ನಾಗ ಐತಾಳ, ಮೈ ಶ್ರೀ ನಟರಾಜ, ಗುರುಪ್ರಸಾದ ಕಾಗಿನೆಲೆ, ಶ್ರೀಕಾಂತ ಬಾಬು ಮತ್ತು ನಮ್ಮ ಹನೇಹಳ್ಳಿಯವರೇ ಆದ ಪ್ರಕಾಶ ನಾಯಕರವರ ನೇತೃತ್ವದ ಪಡೆ ಎರಡು ದಿನಗಳ ಈ ಕನ್ನಡ ಹಬ್ಬವನ್ನು ಯಶಸ್ವಿಯಾಗಿ ನೆರವೇರಿಸಿ ಸಪ್ತಸಾಗರದಾಚೆಯ ಆ ನಾಡಲ್ಲಿ ಕನ್ನಡದ ಗಂಧವ ಮೆತ್ತಿದರು. ಅಂದಿನ ಕಾರ್ಯಕ್ರಮದಲ್ಲಿ ನಮ್ಮಿಬ್ಬರೊಡನೆ ಕಾವ್ಯಾಳೂ ವೇದಿಕೆಯಲ್ಲಿದ್ದದ್ದು ನಮ್ಮ ಸಾಹಿತ್ಯ ಬದುಕಿನ ಮೈಲಿಗಲ್ಲು. ಸುನಂದಾ ಇತ್ತೀಚಿನ ಕನ್ನಡ ಕತೆಗಳ ಕುರಿತು ಮಾತನಾಡಿದರೆ, ನಾನು ತೊಂಬತ್ತರ ಯುವಕ ನಾಗ ಐತಾಳರ ‘ಸ್ಮರಣೆ ಸಾಲದೇ’ ಪುಸ್ತಕ ಪರಿಚಯಿಸಿ ಆ ದಂಪತಿಗಳ ಖುಷಿಯಲಿ ಒಂದಾದೆ.

ಅಂದು ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ವಸುಂಧರಾ ಭೂಪತಿಯವರ ಕನಸಿನ ಕೂಸಾದ ‘ನಿಮ್ಮ ಮನೆಗೆ ನಮ್ಮ ಪುಸ್ತಕ’ ಕಾರ್ಯಕ್ರಮದ ಇಪ್ಪತ್ತೈದನೆಯ ಸರಣಿಯನ್ನು ಸರಿತಾ ಮತ್ತು ಭಾರಧ್ವಾಜ ದಂಪತಿಗಳ ಮನೆಯಲ್ಲಿ ಯಶಸ್ವಿಯಾಗಿ ನಡೆಸಿದ್ದು ನಮ್ಮಿಬ್ಬರೊಂದಿಗೆ ಕಾವ್ಯಳೂ ಭಾಗವಹಿಸಿ ಕನ್ನಡದ ಖುಷಿಗೆ ಕಾರಣಳಾದಳು. ನ್ಯೂಜೆರ್ಸಿಯ ಕನ್ನಡ ಬರಹಗಾರರೇ ಸೇರಿ ನಡೆಸುತ್ತಿರುವ ‘ಪ್ರಸ್ತಾಪ’ ಕನ್ನಡಪರ ಮನಸ್ಸಿನ ಕಾರ್ಯಕ್ರಮದಲ್ಲಿ ರಾಮಕೃಷ್ಣ ಅವರ ಮನೆಯಲ್ಲಿ ಸುನಂದಾ ಕತೆಗಳ ಕುರಿತು ಮಾತನಾಡಿದರೆ, ನಾನು ‘ನಾನು ಮತ್ತು ನನ್ನ ಕವಿತೆ’ ಕುರಿತು ಮಾತನಾಡಿ ಆ ನಾಡಿನಲ್ಲಿ ‘ನಾಗಸುಧೆ’ ಯ ಕಂಪಬೀರಿ ಎಲ್ಲ ಮನಸ್ಸುಗಳ ಮಂದಹಾಸದಲ್ಲಿ ಒಂದಾದೆವು.

ಮಗಳ ಮನೆಯಾದ್ದರಿಂದ ಸಪ್ತಸಾಗರ ದಾಟಿದರೂ ನಮ್ಮ ಊಟೋಪಚಾರದಲಿ ಯಾವುದೇ ಬದಲಾವಣೆಯಾಗಿಲ್ಲ. ಸಂತೋಷ ಅಲ್ಲಿಯ ಅನೇಕ ಮಾಲ್ ಗಳ ತೋರಿಸಿದ. ಇಂಡಿಯನ್ ಮಾಲ್ ನಲ್ಲಿ ಅದೇ ಪಾರ್ಲೆ ಬಿಸ್ಕೆಟ್, ಚಾವಿ ಕಡ್ಡಿ ಪೆಟ್ಟಿಗೆ, ಕೊಲ್ಗೆಟ್ ಪೇಸ್ಟ್ ಮತ್ತು ಬ್ರೆಶ್ಯುಗಳ ಕಂಡು ಬೆರಗಾದೆ. ಮೀನು – ಮಾಂಸ, ಕಲಗ – ಚಿಪ್ಪೆಕಲ್ಲು, ಇಲ್ಲಿಯದೇ ಬೆಂಡೆ ಹೀರೆ ಬಸಲೆ ತರಕಾರಿಗಳು. ‘ಲಿಬರ್ಟಿ ಸ್ಟೆಚ್ಯು’ ದಿಂದ ಹಿಡಿದು ‘ಸ್ವಾತಂತ್ರ್ಯದ ಗಂಟೆ ‘ ವರೆಗಿನ ಎಲ್ಲಾ ಪ್ರೇಕ್ಷಣೀಯ ಸ್ಥಳಗಳನ್ನೂ, ರಡ್ಗರ್-ಪ್ರಿನ್‌ಸ್ಟನ್, ಪೆನ್ಸಿಲ್ವೇನಿಯಾ ವನ್ನೊಳಗೊಂಡು ಎಂಟ್ಹತ್ತು ಜಗದ್ವಿಖ್ಯಾತ ವಿಶ್ವವಿದ್ಯಾಲಯಗಳನ್ನು ಸಂತೋಷನ ಕೆಲಸದ ವೇಳೆಯ ಹೊಂದಾಣಿಕೆಯಲಿ ಕಂಡೆವು; ಅಮೇರಿಕೆಯ ಖುಷಿ ಉಂಡೆವು.

  • ಪ್ರಕಾಶ ಕಡಮೆ
ಪ್ರಕಾಶ ಕಡಮೆ

ಫೋಟೋ ಕೃಪೆ: ಸಂತೋಷ ನಾಗರಕಟ್ಟೆ, ನ್ಯೂಜೆರ್ಸಿ

(ಜನಪರ ಕಾಳಜಿಯ ಕವಿ ಪ್ರಕಾಶ ಕಡಮೆಯವರು ಮೂಲತಃ ಉತ್ತರ ಕನ್ನಡ ಜಿಲ್ಲೆಯವರಾಗಿದ್ದು ಸದ್ಯ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ಗಾಣದೆತ್ತು ಮತ್ತು ತೆಂಗಿನಮರ, ಆ ಹುಡುಗಿ, ಅಮ್ಮನಿಗೊಂದು ಕವಿತೆ ಎಂಬ ಕವನ ಸಂಕಲನಗಳನ್ನು ರಚಿಸಿದ್ದಾರೆ)


ಇದನ್ನೂ ಓದಿ: ಮಮತೆಯ ಮಮತಾಗೆ ‘ಮಯೂರ’ ನ ಮನ್ನಣೆ: ಪ್ರಕಾಶ ಕಡಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...