Homeಕರ್ನಾಟಕಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

ಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

- Advertisement -
- Advertisement -

ಚುನಾವಣಾ ಬಾಂಡ್‌ ಇಡೀ ಪ್ರಪಂಚದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಬಹುಭಾ‍‍ಷಾ ನಟ, ಪ್ರಕಾಶ್‌ ರಾಜ್‌ ಹೇಳಿದ್ದು, ಈ ಕುರಿತು ಅಮಿತ್‌ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಮೋದಿ ಮೌನ ವಹಿಸಿದ್ದಾರೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಪ್ರಕಾಶ್‌ ರಾಜ್‌, ಗೃಹ ಸಚಿವರು ನಾವು 6000 ಕೋಟಿ ತೆಗೆದುಕೊಂಡಿದ್ದೇವೆ, ಆದರೆ 330 ಸಂಸದರು ಇದ್ದಾರೆ. ಅದನ್ನು ಹಂಚಿಕೊಂಡರೆ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. 500 ಕೋಟಿ ಲಂಚ ಕೊಡ್ತಿದ್ದಾನೆ ಎಂದರೆ ಅವರಿಗೆ 1,500ಕೋಟಿ, 2,000ಕೋಟಿ ಕಾಂಟ್ರೆಕ್ಟ್‌ ನೀವು ಕೊಡುತ್ತಿದ್ದೀರಿ ಎಂದರೆ ಅದು ನಮ್ಮ ಹಣ ಅಲ್ವ, ಚುನಾವಣೆಗೆ ಹಣ ಬೇಕಂತ ದೇಶವನ್ನು ಕೆಡಿಸಿರುವುದು ನೀವಲ್ವ? ಎಂಎಲ್ಎ, ಎಂಪಿಗಳನ್ನು ಇದೇ ದುಡ್ಡಿನಲ್ಲಿ ನೀವು ಕೊಂಡುಕೊಳ್ಳುತ್ತಿದ್ದೀರಾ? ಪ್ರಧಾನಿ‌ ಮೋದಿ ಅವರು ಮನ್ ಕಿ ಬಾತ್‌ನಲ್ಲಿ ಈ ಬಗ್ಗೆ ಹೇಳಿ, ದೇಶವನ್ನು ಉದ್ದಾರ ಮಾಡಲಿಕ್ಕೆ ತೆಗೆದುಕೊಂಡ್ರಾ? ನೀವು ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಇಲ್ವೋ, ಆದರೆ ನಿಮ್ಮ ಮನೆ ಟೈಲರಿಗೆ ದಿನಕ್ಕೊಂದು ಬಟ್ಟೆ ಹೊಲಿಯಲು ಕೆಲಸ ಕೊಟ್ಟಿದ್ದೀರಿ ಎಂದು ಮೋದಿ ವಿರುದ್ಧ ಪ್ರಕಾಶ್‌ ರಾಜ್ ವಾಗ್ಧಾಳಿ ನಡೆಸಿದ್ದಾರೆ.

ಡಿಎಂಕೆಯವರು ಲಾಟರಿ ಏಜೆಂಟ್ ಮಾರ್ಟಿನ್ ಅವರಿಂದ ಚುನಾವಣಾ ಬಾಂಡ್ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಬಿಜೆಪಿಯವರು ಯಾಕೆ ಯಾರಿಂದ ಪಡೆದಿದ್ದಾಗಿ ಹೇಳುತ್ತಿಲ್ಲ. ಬಿಜೆಪಿ ಪಡೆದಿರುವ ಬಾಂಡ್ ಹಣವೆಲ್ಲಾ ದಾಳಿಯ ಬಳಿಕ ಸಂಗ್ರಹಿಸಿದ್ದಾಗಿದೆ. ಇಡಿ ರೈಡ್‌ ಮಾಡಿದ ಕಂಪೆನಿಗಳು ಮರು ದಿನ ಬಾಂಡ್‌ ನೀಡಿದ್ದಾರೆ. ಅವರು ಕಳ್ಳರು ಎಂದು ಗೊತ್ತಿದ್ದೂ ಯಾಕೆ ಬಾಂಡ್ ಪಡೆದಿದ್ದೀರಿ? ಇಡಿ ರೈಡ್ ಆದ ಮೇಲೆ ನಿಮಗೆ ಹಣ ಕೊಟ್ಟರೆ ಸರಿನಾ? ಈಗ ಅಂಥವರಿಂದ ಹಣ ತೆಗೆದುಕೊಂಡ ನಿಮ್ಮ ಮೇಲೆ ಯಾಕೆ ರೈಡ್ ಆಗುವುದಿಲ್ಲ? ಈ ರೀತಿ ದುಡ್ಡು ಪಡೆದು ನೀವು ದೇಶ ಮಾರ್ತಾ ಇಲ್ವಾ? ಅದು ಪಾಪದ ಹಣ ಅಂತ ಗೊತ್ತಿಲ್ವಾ ನಿಮಗೆ? ಮನ್ ಕಿ ಬಾತ್‌ನಲ್ಲಿ ಅದನ್ನೂ ಹೇಳಿ ಎಂದು ಮೋದಿಗೆ ಪ್ರಕಾಶ್‌ ರಾಜ್‌ ಆಗ್ರಹಿಸಿದ್ದಾರೆ.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಸಲ ಏನು ಅಂತ ನೋಡಿ ಆಯ್ತು, ಸಾಮಾನ್ಯ ಜನರ ಪರವಾಗಿ ನಾನು ಧ್ವನಿಯನ್ನು ಎತ್ತುತ್ತೇನೆ, ನಾನು ರಾಜಕಾರಣದಲ್ಲಿ ಇದ್ದೇನೆ, ರಾಜಕೀಯವಾಗಿ ಪ್ರಶ್ನಿಸುತ್ತೇನೆ, ಪ್ರಶ್ನೆಗಳನ್ನು ಮಂಡಿಸುತ್ತೇನೆ, ನೀವ್ಯಾರು ಪ್ರಶ್ನೆ ಕೇಳುವುದಕ್ಕೆ ಎಂದು ಕೇಳುವಂತಿಲ್ಲ. ದಯವಿಟ್ಟು ಪಕ್ಷಗಳನ್ನು ನೋಡಬೇಡಿ, ನಿಮ್ಮ ಮತವನ್ನು ಚಲಾಯಿಸುವಾಗ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

6,000ಕೋಟಿಯಲ್ಲಿ ಒಂದು ಸ್ಮಾರ್ಟ್‌ ಸಿಟಿ ಮಾಡಿದ್ರಾ? ಏನು ಮಾಡಿದ್ರಿ ಆ ಹಣ? ಯಾವ ನಾಚಿಕೆ ಮಾನ ಇಲ್ಲದೆ ಅವನು ತೆಗೆದುಕೊಂಡನಲ್ಲ ಎನ್ನುವುದು ಎಷ್ಟು ಸರಿ, ಪ್ರಧಾನಿ ಅವರ ಪರಿವಾರ ಏನು ಅಂತ ಈಗಾಗಲೇ ಬಯಲಾಗಿದೆ. ಲಾಟರಿ ಮಾಡುವ ಕಂಪೆನಿ ಪರಿವಾರ, ಫಾರ್ಮಾ ಕಂಪೆನಿ, ಅದಾನಿ ಪರಿವಾರ, ರೇಪ್ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಕೂಡಾ ಅವರದ್ದೇ ಪರಿವಾರ. ಸಾವಿರಾರು ಕೋಟಿ ರೂ. ಸಂಗ್ರಹಿರುವುದು ಯಾಕಾಗಿ? ಒಂದು ಪಕ್ಷಕ್ಕೆ ಅಷ್ಟು ದುಡ್ಡು ಬೇಕಾ? ಆಡಳಿತ ನಡೆಸುತ್ತಿರುವವರು ಬಿಜೆಪಿಯವರು, ಅಷ್ಟು ಬೃಹತ್ ದುಡ್ಡು ತಗೆದುಕೊಂಡು ಅದನ್ನೂ ಗೌಪ್ಯವಾಗಿಟ್ಟುಕೊಂಡಿದ್ದು ಯಾಕೆ? ಈಗ ಬೆತ್ತಲಾಗ್ತಾ ಇದ್ದೀರಿ, ಹಾಗಿದ್ದರೂ ಸುಳ್ಳು ಹೇಳಿಕೊಂಡೇ ಓಡಾಡೋದು ತಪ್ಪಲ್ವಾ? ಜನರಿಗೆ ನೀವು ಮೋಸ ಮಾಡಬೇಡಿ ಎಂದು ಹೇಳಿದ್ದಾರೆ.

ಪತ್ರಿಕೋದ್ಯಮ ಅಥವಾ ಜನರು ನಿರಂತರವಾಗಿ ವಿರೋಧ ಪಕ್ಷವಾಗಿರಬೇಕು, ಉಪವಾಸ ಮಾಡಿಕೊಂಡು ದೇವಸ್ಥಾನ ಸುತ್ತುತ್ತಿದ್ದೀರಿ ಯಾಕೆ? ಮಣಿಪುರದ ಬಗ್ಗೆ, ಎಲೆಕ್ಟ್ರಾಲ್ ಬಾಂಡ್‌ ಬಗ್ಗೆ ಒಂದು ಬಾರಿ ಮಾತನಾಡುತ್ತಿಲ್ಲ, ಸುಳ್ಳು ಹೇಳಿ ಯಾರನ್ನು ಮೋಸ ಮಾಡುತ್ತೀರಿ, ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟ ಜನರಿಗೆ ಇರುವುದು ಅಧಿಕಾರ, ಅಧಿಕಾರ ನಡೆಸುವವರಿಗಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...