Homeಕರ್ನಾಟಕಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

ಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

- Advertisement -
- Advertisement -

ಚುನಾವಣಾ ಬಾಂಡ್‌ ಇಡೀ ಪ್ರಪಂಚದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಬಹುಭಾ‍‍ಷಾ ನಟ, ಪ್ರಕಾಶ್‌ ರಾಜ್‌ ಹೇಳಿದ್ದು, ಈ ಕುರಿತು ಅಮಿತ್‌ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಮೋದಿ ಮೌನ ವಹಿಸಿದ್ದಾರೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಪ್ರಕಾಶ್‌ ರಾಜ್‌, ಗೃಹ ಸಚಿವರು ನಾವು 6000 ಕೋಟಿ ತೆಗೆದುಕೊಂಡಿದ್ದೇವೆ, ಆದರೆ 330 ಸಂಸದರು ಇದ್ದಾರೆ. ಅದನ್ನು ಹಂಚಿಕೊಂಡರೆ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. 500 ಕೋಟಿ ಲಂಚ ಕೊಡ್ತಿದ್ದಾನೆ ಎಂದರೆ ಅವರಿಗೆ 1,500ಕೋಟಿ, 2,000ಕೋಟಿ ಕಾಂಟ್ರೆಕ್ಟ್‌ ನೀವು ಕೊಡುತ್ತಿದ್ದೀರಿ ಎಂದರೆ ಅದು ನಮ್ಮ ಹಣ ಅಲ್ವ, ಚುನಾವಣೆಗೆ ಹಣ ಬೇಕಂತ ದೇಶವನ್ನು ಕೆಡಿಸಿರುವುದು ನೀವಲ್ವ? ಎಂಎಲ್ಎ, ಎಂಪಿಗಳನ್ನು ಇದೇ ದುಡ್ಡಿನಲ್ಲಿ ನೀವು ಕೊಂಡುಕೊಳ್ಳುತ್ತಿದ್ದೀರಾ? ಪ್ರಧಾನಿ‌ ಮೋದಿ ಅವರು ಮನ್ ಕಿ ಬಾತ್‌ನಲ್ಲಿ ಈ ಬಗ್ಗೆ ಹೇಳಿ, ದೇಶವನ್ನು ಉದ್ದಾರ ಮಾಡಲಿಕ್ಕೆ ತೆಗೆದುಕೊಂಡ್ರಾ? ನೀವು ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಇಲ್ವೋ, ಆದರೆ ನಿಮ್ಮ ಮನೆ ಟೈಲರಿಗೆ ದಿನಕ್ಕೊಂದು ಬಟ್ಟೆ ಹೊಲಿಯಲು ಕೆಲಸ ಕೊಟ್ಟಿದ್ದೀರಿ ಎಂದು ಮೋದಿ ವಿರುದ್ಧ ಪ್ರಕಾಶ್‌ ರಾಜ್ ವಾಗ್ಧಾಳಿ ನಡೆಸಿದ್ದಾರೆ.

ಡಿಎಂಕೆಯವರು ಲಾಟರಿ ಏಜೆಂಟ್ ಮಾರ್ಟಿನ್ ಅವರಿಂದ ಚುನಾವಣಾ ಬಾಂಡ್ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಬಿಜೆಪಿಯವರು ಯಾಕೆ ಯಾರಿಂದ ಪಡೆದಿದ್ದಾಗಿ ಹೇಳುತ್ತಿಲ್ಲ. ಬಿಜೆಪಿ ಪಡೆದಿರುವ ಬಾಂಡ್ ಹಣವೆಲ್ಲಾ ದಾಳಿಯ ಬಳಿಕ ಸಂಗ್ರಹಿಸಿದ್ದಾಗಿದೆ. ಇಡಿ ರೈಡ್‌ ಮಾಡಿದ ಕಂಪೆನಿಗಳು ಮರು ದಿನ ಬಾಂಡ್‌ ನೀಡಿದ್ದಾರೆ. ಅವರು ಕಳ್ಳರು ಎಂದು ಗೊತ್ತಿದ್ದೂ ಯಾಕೆ ಬಾಂಡ್ ಪಡೆದಿದ್ದೀರಿ? ಇಡಿ ರೈಡ್ ಆದ ಮೇಲೆ ನಿಮಗೆ ಹಣ ಕೊಟ್ಟರೆ ಸರಿನಾ? ಈಗ ಅಂಥವರಿಂದ ಹಣ ತೆಗೆದುಕೊಂಡ ನಿಮ್ಮ ಮೇಲೆ ಯಾಕೆ ರೈಡ್ ಆಗುವುದಿಲ್ಲ? ಈ ರೀತಿ ದುಡ್ಡು ಪಡೆದು ನೀವು ದೇಶ ಮಾರ್ತಾ ಇಲ್ವಾ? ಅದು ಪಾಪದ ಹಣ ಅಂತ ಗೊತ್ತಿಲ್ವಾ ನಿಮಗೆ? ಮನ್ ಕಿ ಬಾತ್‌ನಲ್ಲಿ ಅದನ್ನೂ ಹೇಳಿ ಎಂದು ಮೋದಿಗೆ ಪ್ರಕಾಶ್‌ ರಾಜ್‌ ಆಗ್ರಹಿಸಿದ್ದಾರೆ.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಸಲ ಏನು ಅಂತ ನೋಡಿ ಆಯ್ತು, ಸಾಮಾನ್ಯ ಜನರ ಪರವಾಗಿ ನಾನು ಧ್ವನಿಯನ್ನು ಎತ್ತುತ್ತೇನೆ, ನಾನು ರಾಜಕಾರಣದಲ್ಲಿ ಇದ್ದೇನೆ, ರಾಜಕೀಯವಾಗಿ ಪ್ರಶ್ನಿಸುತ್ತೇನೆ, ಪ್ರಶ್ನೆಗಳನ್ನು ಮಂಡಿಸುತ್ತೇನೆ, ನೀವ್ಯಾರು ಪ್ರಶ್ನೆ ಕೇಳುವುದಕ್ಕೆ ಎಂದು ಕೇಳುವಂತಿಲ್ಲ. ದಯವಿಟ್ಟು ಪಕ್ಷಗಳನ್ನು ನೋಡಬೇಡಿ, ನಿಮ್ಮ ಮತವನ್ನು ಚಲಾಯಿಸುವಾಗ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

6,000ಕೋಟಿಯಲ್ಲಿ ಒಂದು ಸ್ಮಾರ್ಟ್‌ ಸಿಟಿ ಮಾಡಿದ್ರಾ? ಏನು ಮಾಡಿದ್ರಿ ಆ ಹಣ? ಯಾವ ನಾಚಿಕೆ ಮಾನ ಇಲ್ಲದೆ ಅವನು ತೆಗೆದುಕೊಂಡನಲ್ಲ ಎನ್ನುವುದು ಎಷ್ಟು ಸರಿ, ಪ್ರಧಾನಿ ಅವರ ಪರಿವಾರ ಏನು ಅಂತ ಈಗಾಗಲೇ ಬಯಲಾಗಿದೆ. ಲಾಟರಿ ಮಾಡುವ ಕಂಪೆನಿ ಪರಿವಾರ, ಫಾರ್ಮಾ ಕಂಪೆನಿ, ಅದಾನಿ ಪರಿವಾರ, ರೇಪ್ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಕೂಡಾ ಅವರದ್ದೇ ಪರಿವಾರ. ಸಾವಿರಾರು ಕೋಟಿ ರೂ. ಸಂಗ್ರಹಿರುವುದು ಯಾಕಾಗಿ? ಒಂದು ಪಕ್ಷಕ್ಕೆ ಅಷ್ಟು ದುಡ್ಡು ಬೇಕಾ? ಆಡಳಿತ ನಡೆಸುತ್ತಿರುವವರು ಬಿಜೆಪಿಯವರು, ಅಷ್ಟು ಬೃಹತ್ ದುಡ್ಡು ತಗೆದುಕೊಂಡು ಅದನ್ನೂ ಗೌಪ್ಯವಾಗಿಟ್ಟುಕೊಂಡಿದ್ದು ಯಾಕೆ? ಈಗ ಬೆತ್ತಲಾಗ್ತಾ ಇದ್ದೀರಿ, ಹಾಗಿದ್ದರೂ ಸುಳ್ಳು ಹೇಳಿಕೊಂಡೇ ಓಡಾಡೋದು ತಪ್ಪಲ್ವಾ? ಜನರಿಗೆ ನೀವು ಮೋಸ ಮಾಡಬೇಡಿ ಎಂದು ಹೇಳಿದ್ದಾರೆ.

ಪತ್ರಿಕೋದ್ಯಮ ಅಥವಾ ಜನರು ನಿರಂತರವಾಗಿ ವಿರೋಧ ಪಕ್ಷವಾಗಿರಬೇಕು, ಉಪವಾಸ ಮಾಡಿಕೊಂಡು ದೇವಸ್ಥಾನ ಸುತ್ತುತ್ತಿದ್ದೀರಿ ಯಾಕೆ? ಮಣಿಪುರದ ಬಗ್ಗೆ, ಎಲೆಕ್ಟ್ರಾಲ್ ಬಾಂಡ್‌ ಬಗ್ಗೆ ಒಂದು ಬಾರಿ ಮಾತನಾಡುತ್ತಿಲ್ಲ, ಸುಳ್ಳು ಹೇಳಿ ಯಾರನ್ನು ಮೋಸ ಮಾಡುತ್ತೀರಿ, ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟ ಜನರಿಗೆ ಇರುವುದು ಅಧಿಕಾರ, ಅಧಿಕಾರ ನಡೆಸುವವರಿಗಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...